ನಾಮಪತ್ರ ವಾಪಸ್ ಪಡೆದ ಓರ್ವ ಸುಮಲತಾ
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದ ಮೂವರು ಸುಮಲತಾರಲ್ಲಿ ಓರ್ವರು ತಮ್ಮ ನಾಮಪತ್ರ ಹಿಂಪಡೆದಿದ್ದಾರೆ.
ಮಂಡ್ಯ: ಸುಮಲತಾ ಹೆಸರಲ್ಲಿ ನಾಮಪತ್ರ ಸಲ್ಲಿಸಿರುವ ಮೂವರು ಅಭ್ಯರ್ಥಿಗಳ ಪೈಕಿ ಒಬ್ಬರು ತಮ್ಮ ಉಮೇದುವಾರಿಕೆ ಹಿಂತೆಗೆದುಕೊಳ್ಳಲಿದ್ದಾರೆ.
ಕೆ.ಆರ್.ಪೇಟೆಯ ಸುಮಲತಾ ತಮ್ಮ ನಾಮಪತ್ರ ಹಿಂಪಡೆಯಲು ನಿರ್ಧರಿಸಿದ್ದಾರೆ. ಯಾರದ್ದೋ ಒತ್ತಡದಿಂದ ಅವರು ನಾಮಪತ್ರ ಸಲ್ಲಿಸಿದ್ದರು.
ಆದರೆ, ಪತಿ ಮಂಜು ಅವರು ಅಂಬರೀಶ್ ಅಭಿಮಾನಿಯಾಗಿರುವುದರಿಂದ ನಾಮಪತ್ರ ವಾಪಸ್ಗೆ ನಿರ್ಧರಿಸಿದ್ದಾರೆ ಎಂದು ಅಂಬಿ ಪತ್ನಿ ಸುಮಲತಾ ಹೇಳಿದ್ದಾರೆ.
ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...