ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆ ಚುನಾವಣಾ ಕಣಗಳು ಸಾಕಷ್ಟು ರಂಗೇರುತ್ತಿವೆ. ಇತ್ತ ಮಂಡ್ಯದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಎಂ. ಸುಮಲತಾ ನಾಪತ್ತೆಯಾಗಿದ್ದಾರೆ.
ಮಂಡ್ಯ: ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದ ಸುಮಲತಾ ಎಂ. ಎಂಬ ಅಭ್ಯರ್ಥಿ ನಾಪತ್ತೆಯಾಗಿದ್ದಾರೆ.
Add Asianetnews Kannada as a Preferred Source

ಗೊರವಿ ಗ್ರಾಮದವರಾದ ಇವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿ ಸಿದ್ದು, ಇವರ ಪತಿ ಇತ್ತೀಚೆಗೆ ನಾಮಪತ್ರ ವಾಪಸ್ ತೆಗೆಯುತ್ತೇನೆ ಎಂದು ಹೇಳಿದ್ದರು. ಆದರೆ, ಅಂದಿನಿಂದ ಸುಮಲತಾ ನಾಪತ್ತೆಯಾಗಿದ್ದಾರೆ.
ಕಳೆದ 3 ದಿನಗಳಿಂದ ಊರಲ್ಲಿ ಇಲ್ಲ ಎಂದು ಗ್ರಾಮಸ್ಥರು ಹೇಳಿದ್ದಾರೆ.
ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...
