ಅಮೇಥಿ, ರಾಯ್‌ಬರೇಲಿಯಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿ ಕಣಕ್ಕಿಲ್ಲ| ಅಭ್ಯರ್ಥಿ ಕಣಕ್ಕಿಳಿಸದಿರಲು ಕಾರಣವೇನೆಂದು ಹೇಳಿದ ಮಾಯಾವತಿ| ಬಿಜೆಪಿ ವಿರುದ್ಧ ಮಾಯಾ ರಣತಂತ್ರ!

ಲಕ್ನೋ[ಮೇ.05]: ಬಹುಜನ್ ಸಮಾಜ ಪಾರ್ಟಿಯ ಮುಖ್ಯಸ್ಥೆ ಮಾಯಾವತಿ ಅಮೇಥಿ ಹಾಗೂ ರಾಯ್‌ಬರೇಲಿ ಕ್ಷೇತ್ರದಿಂದ ತಮ್ಮ ಮೈತ್ರಿ ಪಕ್ಷದ ಅಭ್ಯರ್ಥಿಗಳನ್ನು ಯಾಕೆ ಕಣಕ್ಕಿಳಿಸಿಲ್ಲ ಎಂಬ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. 

Add Asianetnews Kannada as a Preferred SourcegooglePreferred

ಸುದ್ದಿ ಸಂಸ್ಥೆ ANI ಜೊತೆಗಿನ ಮಾತುಕತೆ ವೇಳೆ ಪ್ರತಿಕ್ರಿಯಿಸಿದ ಮಾಯಾ 'ನಾವು ದೇಶದಲ್ಲಿ, ಜನಹಿತಕ್ಕಾಗಿ ಅದರಲ್ಲೂ ವಿಶೇಷವಾಗಿ ಬಿಜೆಪಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶಕ್ತಿಯನ್ನು ಕುಂದಿಸಲು ಅಮೇಥಿ ಹಾಗೂ ರಾಯ್‌ಬರೇಲಿಕ್ಷೇತ್ರವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಟ್ಟಿದ್ದೇವೆ. ಈ ಮೂಲಕ ಕೈ ಪಾಳಯದ ಇಬ್ಬರೂ ಸರ್ವೋಚ್ಛ ನಾಯಕರು ಮತ್ತೆದೇ ಕ್ಷೇತ್ರದಿಂದ ಸ್ಪರ್ಧಿಸಿ ಗೆಲ್ಲಬೇಕೆಂಬುದು ನಮ್ಮ ಉದ್ದೇಶ ಎಂದಿದ್ದಾರೆ.

Scroll to load tweet…

ಇಷ್ಟೇ ಅಲ್ಲದೇ 'ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ ಈ ಇಬ್ಬರೂ ನಾಯಕರು ಕ್ಷೇತ್ರದ ಗೆಲುವಿಗಾಗಿ ಆ ಎರಡು ಕ್ಷೇತ್ರಗಳಲ್ಲೇ ಕಳೆದು ಹೋಗುವ ಸಾಧ್ಯತೆ ಇತ್ತು. ಹೀಗಾದಲ್ಲಿ ಬಿಜೆಪಿ ರಾಜ್ಯದ ಹೊರಗಿನ ಕ್ಷೇತ್ರಗಳಲ್ಲಿ ಇವರ ಗೈರು ಹಾಜರಾತಿಯ ಲಾಭ ಪಡೆಯುವ ಸಾಧ್ಯತೆ ಇತ್ತು. ಈ ನಿಟ್ಟಿನಲ್ಲಿ ನಾವು ಮುಂದಾಲೋಚಿಸಿ ಅಮೇಥಿ ಹಾಗೂ ರಾಯ್‌ಬರೇಲಿ ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲ್ಲ. ಈ ಕ್ಷೇತ್ರಗಳಲ್ಲಿ ನಮ್ಮ ಮೈತ್ರಿ ಪಕ್ಷದ ಪ್ರತಿಯೊಂದು ಮತ ಕಾಂಗ್ರೆಸ್ ಪಕ್ಷದ ಈ ಇಬ್ಬರು ನಾಯಕರಿಗೆ ಸಿಗುತ್ತವೆ ಎಂಬ ವಿಶ್ವಾಸ ನನಗಿದೆ' ಎಂದಿದ್ದಾರೆ.

ಉತ್ತರ ಪ್ರದೇಶದ 80 ಲೋಕಸಭಾ ಕ್ಷೇತ್ರಗಳಲ್ಲಿ SP, BSP ಹಾಗೂ ಪಕ್ಷೇತರರು ಮೈತ್ರಿ ಮಾಡಿಕೊಂಡಿವೆ. ಆದರೆ ಈ ಮೈತ್ರಿ ಪಾಳಯ ರಾಹುಲ್ ಗಾಂಧಿ ಸ್ಪರ್ಧಿಸುತ್ತಿರುವ ಅಮೇಠಿ ಹಾಗೂ ಸೋನಿಯಾ ಗಾಂಧಿ ಕಣಕ್ಕಿಳಿಯುತ್ತಿರುವ ರಾಯ್ಬರೇಲಿ ಕ್ಷೇತ್ರದಿಂದ ತಮ್ಮ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ.BSP 38, SP 37 ಹಾಗೂ ಮೂರು ಕ್ಷೇತ್ರಗಳಲ್ಲಿ ಪಕ್ಷೇತರರು ಸ್ಪರ್ಧಿಸುತ್ತಿದ್ದಾರೆ.