ಲೋಕಸಭಾ ಚುನಾವಣಾ ಕಣ ರಂಗೇರಿದೆ ಪಕ್ಷಗಳು ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದರೆ, ಅಭ್ಯರ್ಥಿಗಳು ಮತದಾರನ ಓಲೈಸುವ ಯತ್ನದಲ್ಲಿವೆ. ಹೀಗಿರುವಾಗ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ವೈ. ಎಸ್. ಜಗನ್ ಮೋಹನ್ ರೆಡ್ಡಿ ಸಹೋದರಿ ಶರ್ಮಿಳಾ ಕೈಯಲ್ಲಿದ್ದ ಉಂಗುರ ಕದ್ದ ಘಟನೆ ನಡೆದಿದೆ.
ಹೈದರಾಬಾದ್[ಏ.01]: ವೈ.ಎಸ್.ಆರ್ ಕಾಂಗ್ರೆಸ್ ಸಂಸ್ಥಾಪಕ ವೈ. ಎಸ್. ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ಶರ್ಮಿಳಾ ಅವರ ಕೈ ಬೆರಳಿನಲ್ಲಿದ್ದ ಚಿನ್ನದ ಉಂಗುರವನ್ನು ಅಭಿಮಾನಿಯೊಬ್ಬ ಲಪಟಾಯಿಸಿದ ಘಟನೆ ನಡೆದಿದೆ.
Add Asianetnews Kannada as a Preferred Source

ಇಲ್ಲಿನ ರ್ಯಾಲಿಯೊಂದರಲ್ಲಿ ತಾವಿದ್ದ ವಾಹನದಿಂದಲೇ ಅಭಿಮಾನಿಗಳತ್ತ ಕೈಬೀಸುತ್ತಿದ್ದ ಶರ್ಮಿಳಾ ಅವರಿಗೆ ಹಸ್ತಲಾಘವ ನೀಡಲು ಅಭಿಮಾನಿಗಳು ಮುಗಿ ಬಿದ್ದಿದ್ದರು. ಈ ವೇಳೆ ಶರ್ಮಿಳಾ ಅವರತ್ತ ಕೈಚಾಚಿದ ಅಭಿ ಮಾನಿಯೊಬ್ಬ, ಕ್ಷಣಾರ್ಧದಲ್ಲಿ ಉಂಗುರು ತೆಗೆದುಕೊಂಡಿದ್ದಾರೆ.
Scroll to load tweet…
ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇತ್ತೀಚೆಗಷ್ಟೇ ಪ್ರಜಾಶಾಂತಿ ಪಕ್ಷದ ಅಧ್ಯಕ್ಷ ಕೆ.ಎ.ಪೌಲ್ ಅವರ ಕತ್ತಿನಲ್ಲಿದ್ದ ಚಿನ್ನದ ಸರವನ್ನು ವ್ಯಕ್ತಿಯೊಬ್ಬ ಕಿತ್ತು ಪರಾರಿಯಾಗಿದ್ದ.
ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...
