‘ಉಗ್ರರನ್ನು ಕೊಲ್ಲಲೂ ಚುನಾವಣಾ ಆಯೋಗದ ಅನುಮತಿ ಕೇಳಬೇಕಾ’|ಪ್ರತಿಪಕ್ಷಗಳ ಕುರಿತು ಲೇವಡಿ ಮಾಡಿದ ಪ್ರಧಾನಿ ಮೋದಿ| ಉತ್ತರಪ್ರದೇಶದ ಕುಶಿನಗರದಲ್ಲಿ ಪ್ರಧಾನಿ ಮೋದಿ ಪ್ರಚಾರ| ಕಾಶ್ಮೀರ ಸೋಪಿಯಾನ ಎನ್ಕೌಂಟರ್ ಪ್ರಸ್ತಾಪಿಸಿದ ಮೋದಿ|
ಕುಶಿನಗರ್(ಮೇ.12): ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಲು ಸೇನೆ ಚುನಾವಣಾ ಆಯೋಗದ ಅನುಮತಿ ಪಡೆಯಬೇಕಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಉತ್ತರಪ್ರದೇಶದ ಕುಶಿನಗರದಲ್ಲಿ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಕಾಶ್ಮೀರದ ಸೋಪಿಯಾನ ಪ್ರದೇಶದಲ್ಲಿ ಇಂದು ನಡೆದ ಇಬ್ಬರು ಉಗ್ರರ ಎನ್ಕೌಂಟರ್ ಕುರಿತು ಪ್ರಸ್ತಾಪಿಸಿದರು.
Scroll to load tweet…
ಎಲ್ಲದಕ್ಕೂ ಚುನಾವಣಾ ಆಯೋಗದತ್ತ ಬೊಟ್ಟು ಮಾಡುತ್ತಿರುವ ಪ್ರತಿಪಕ್ಷಗಳು, ಸೈನಿಕರೂ ಕೂಡ ಆಯೋಗದ ಅನುಮತಿ ಪಡೆಯಬೇಕು ಎಂದು ಬಯಸಿದರೆ ಅಚ್ಚರಿಯಿಲ್ಲ ಮೋದಿ ವ್ಯಂಗ್ಯವಾಡಿದರು.
