ನವದೆಹಲಿಯಲ್ಲಿ ಬಿಜೆಪಿ ಸುದ್ದಿಗೋಷ್ಠಿ| 'ಈ ಬಾರಿಯೂ NDA ನೇತೃತ್ವದ ಸರ್ಕಾರ ರಚನೆ ಪಕ್ಕಾ'| ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿಶ್ವಾಸ| 300ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿನ ವಿಶ್ವಾಸ| ಪೂರ್ಣ ಬಹುಮತ ಪಡೆದು ಮತ್ತೊಮ್ಮೆ ಅಧಿಕಾರಕ್ಕೆ ಎಂದ ಅಮಿತ್ ಶಾ| ದೇಶದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೇರುವುದು ಖಚಿತ ಎಂದ ಪ್ರಧಾನಿ| ಸುದ್ದಿಗೋಷ್ಠಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿಕೆ| ನನ್ನ 5 ವರ್ಷಗಳ ಆಡಳಿತಕ್ಕೆ ಸಹಕರಿಸಿದ ಎಲ್ಲರಿಗೂ ಧನ್ಯವಾದ ಎಂದ ಮೋದಿ| 

ನವದೆಹಲಿ(ಮೇ.17): ಪ್ರಧಾನಿ ಹುದ್ದೆಗೇರಿದ ಬಳಿಕ ಇದೇ ಮೊದಲ ಬಾರಿಗೆ ಪತ್ರಿಕಾಗೋಷ್ಠಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಭಾರೀ ಬಹುಮತದೊಂದಿಗೆ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Scroll to load tweet…

ಸುದ್ದಿಗೋಷ್ಠಿಯುದ್ದಕ್ಕೂ ಹಾಸ್ಯ, ನಗು ಮತ್ತು ಗಾಂಭೀರ್ಯತೆಯಿಂದ ಮಾತನಾಡಿದ ಪ್ರಧಾನಿ ಮೋದಿ, ಚುನಾವಣೆ ಸಂದರ್ಭದಲ್ಲಿ ಪತ್ರಕರ್ತರು ಮತ್ತು ಸುದ್ದಿ ಸಂಸ್ಥೆಗಳು ನಿರ್ವಹಿಸಿದ ಕಾರ್ಯವನ್ನು ತುಂಬು ಹೃದಯದಿಂದ ಶ್ಲಾಘಿಸಿದರು.

Scroll to load tweet…

ಕಳೆದ ಐದು ವರ್ಷಗಳಲ್ಲಿ ತಮಗೆ ದೇಶದ ಸಂಪೂರ್ಣ ಸಹಕಾರ ದೊರೆತಿದ್ದು, ದೇಶಸೇವೆ ಮಾಡಲು ಅವಕಾಶ ದೊರೆತಿದ್ದು ತಮ್ಮ ಪೂರ್ವ ಜನ್ಮದ ಪುಣ್ಯ ಎಂದು ಹೇಳಿದರು. ಇದೇ ವೇಳೆ ದೇಶ ಮುನ್ನಡೆಸುವಲ್ಲಿ ಮಾಧ್ಯಮಗಳೂ ಕೂಡ ತಮಗೆ ಸಹಕಾರ ನೀಡಿದ್ದು, ಇದಕ್ಕಾಗಿ ನಾನು ಮಾಧ್ಯಮ ಲೋಕಕ್ಕೆ ಧನ್ಯವಾದ ತಿಳಿಸಲು ಬಯಸುತ್ತೇನೆ ಎಂದು ಮೋದಿ ಹೇಳಿದರು.

Scroll to load tweet…

ಇದಕ್ಕೂ ಮೊದಲು ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಲೋಕಸಭೆ ಚುನಾವಣೆಗಾಗಿ ಪಕ್ಷದ ತಯಾರಿ, ಯಶಸ್ವಿ ಜನಸಭೆಗಳು ಮತ್ತು ದೇಶದ ಜನರನ್ನು ತಲುಪುವಲ್ಲಿ ಮಾಡಿದ ಪ್ರಯತ್ನಗಳ ಕುರಿತು ಮಾಹಿತಿ ನೀಡಿದರು.

Scroll to load tweet…

ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.