ಉತ್ತರ ಪ್ರದೇಶದಲ್ಲಿ ಲೋಕಸಭಾ ಸಮರದ ಕಾವು ಏರುತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಘಟಾನುಘಟಿ ನಾಯಕರೇ ಖುದ್ದು ಅಖಾಡಕ್ಕೆ ಇಳಿದಿದ್ದಾರೆ.

ಲಕ್ನೋ[ಏ. 28] ಅಮೇಥಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಅವರು ಮತರಾರಿಗೆ ಹಣ, ಸೀರೆ ಹಾಗೂ ಶೂ ಹಂಚುತ್ತಿದ್ದಾರೆ ಎಂದು ಪ್ರಿಯಾಂಕ ವಾದ್ರಾ ಆರೋಪಿಸಿದ್ದಾರೆ.

Add Asianetnews Kannada as a Preferred SourcegooglePreferred

ಸ್ಮೃತಿ ಇರಾನಿಯವರು ತಮ್ಮ ಕ್ಷೇತ್ರದಲ್ಲಿ ಮಾಧ್ಯಮಗಳ ಮುಂದೆಯೇ ಮತದಾರರಿಗೆ ಆಮಿಷ ಒಡ್ಡುವ ಕೆಲಸ ಮಾಡುತ್ತಿದ್ದಾರೆ. ಇಲ್ಲಿನ ಜನರು ಸ್ವಾಭಿಮಾನದಿಂದ ಬದುಕುತ್ತ ಬಂದವರು. ಅವರಿಗೆ ಅಪಮಾನವಾಗುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಲೋಕಸಭಾ ಚುನಾವಣೆಗೆ ಪ್ರಿಯಾಂಕ ಸ್ಪರ್ಧೆ : ಯಾವ ಕ್ಷೇತ್ರದಿಂದ..?

ರಾಜ್ಯ ಮತ್ತು ಕೇಂದ್ರ ಎರಡೂ ಕಡೆ ಅಧಿಕಾರದಲ್ಲಿ ಇದ್ದರೂ ಇಲ್ಲಿನ ಜನರಿಗೆ ಯಾವುದೇ ಮೂಲ ಸೌಕರ್ಯ ಸಿಗುತ್ತಿಲ್ಲ. ಚುನಾವಣೆ ಸಂದರ್ಭ ಬಿಜೆಪಿಗೆ ಜನರ ನೆನಪಾಗಿದ್ದು ವಾಮ ಮಾರ್ಗದಿಂದ ಗೆಲ್ಲಲು ಜನರಿಗೆ ಆಮಿಷ ಒಡ್ಡುತ್ತಿದ್ದಾರೆ ಎಂದು ಆರೋಪಿಸಿದರು.