ಫಲಿತಾಂಶದ ಬಳಿಕ ರಾಹುಲ್ ಗಾಂಧಿ ಪತ್ರಿಕಾಗೋಷ್ಠಿ| ಜನಾದೇಶ ಗೌರವಿಸುವುದಾಗಿ ಹೇಳಿದ ಕಾಂಗ್ರೆಸ್ ಅಧ್ಯಕ್ಷ| ಪ್ರಧಾನಿ ಮೋದಿ, ಬಿಜೆಪಿಗೆ ಅಭಿನಂದನೆ ಸಲ್ಲಿಸಿದ ರಾಹುಲ್| ಸೋಲಿನ ಪರಾಮರ್ಶೆಯ ಭರವಸೆ ನೀಡಿದ ರಾಹುಲ್|
ನವದೆಹಲಿ(ಮೇ.23): ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ ಮೊದಲ ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ, ಜನಾದೇಶವನ್ನು ಗೌರವಿಸುವುದಾಗಿ ಘೋಷಿಸಿದ್ದಾರೆ.
Scroll to load tweet…
ಭಾರತದ ಮತದಾರ ಲೋಕಸಭೆ ಚುನಾವಣೆಗೆ ತನ್ನ ತೀರ್ಪನ್ನು ನೀಡಿದ್ದು, ಕಾಂಗ್ರೆಸ್ ಮೊದಲಿಗೆ ಈ ಜನಾದೇಶವನ್ನು ಗೌರವಿಸಲಿದೆ ಎಂದು ರಾಹುಲ್ ಸ್ಪಷ್ಟಪಡಿಸಿದರು.
Scroll to load tweet…
ಇದೇ ವೇಳೆ ಪ್ರಧಾನಿ ಮೋದಿ ಮತ್ತು ಬಿಜೆಪಿಯನ್ನು ಅಭಿನಂದಿಸಿದ ಕಾಂಗ್ರೆಸ್ ಅಧ್ಯಕ್ಷ, ಎರಡನೇ ಬಾರಿ ಪ್ರಧಾನಿಯಾಗಿ ಆಯ್ಕೆಯಾದ ಮೋದಿ ಅವರಿಗೆ ವೈಯಕ್ತಿಕವಾಗಿ ಮತ್ತು ಪಕ್ಷದ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.
Scroll to load tweet…
ಜನಾದೇಶಕ್ಕೆ ಯಾವುದೇ ಬಣ್ಣ ಕಟ್ಟುವುದಿಲ್ಲ ಎಂದ ರಾಹುಲ್, ಸೋಲಿನ ಕುರಿತು ಪರಾಮರ್ಶೆ ನಡೆಸುವುದಾಗಿ ಸ್ಪಷ್ಟಪಡಿಸಿದರು.
