ರಾಜ್ಯದಲ್ಲಿ ಲೋಕಸಭಾ ಮಹಾ ಸಮರ ಆರಂಭವಾಗಿದೆ. ಇದೇ ವೇಳೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು : ಮುಂಗಾರು ಆರಂಭಕ್ಕೂ ಮುನ್ನ ಬೇಸಿಗೆಯಲ್ಲೇ ರಾಜ್ಯದ ಹಲವೆಡೆ ಈಗಾಗಲೇ ಮಳೆಯಾಗುತ್ತಿದ್ದು, ಇನ್ನೆರಡು ದಿನ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Add Asianetnews Kannada as a Preferred Source

ಏಪ್ರಿಲ್ 18 ರಂದು ರಾಜ್ಯದಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮಧ್ಯಾಹ್ನದ ನಂತರ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಭಾಗದಲ್ಲಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ತಿಳಿಸಿದೆ.
ಇದು ಪೂರ್ವ ಮುಂಗಾರು ಮಳೆಯಾಗಿರುವುದರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮತದಾನದ ದಿನವಾದ್ದರಿಂದ ಮುಂಜಾನೆಯೇ ತೆರಳಿ ನಿಮ್ಮ ಹಕ್ಕನ್ನು ಚಲಾಯಿಸಿ ಬರುವುದು ಒಳಿತು.
ಮಳೆಯೆಂದು ಮನೆಯಲ್ಲಿ ಕೂರದೇ ತಪ್ಪದೇ ಮತ ಹಾಕಿ, ಸೂಕ್ತ ಅಭ್ಯರ್ಥಿಯ ಆಯ್ಕೆಯಲ್ಲಿ ಪಾಲ್ಗೊಳ್ಳಿ
