ಮಂಡ್ಯದಲ್ಲಿ ಚುನಾವಣೆ ಮುಗಿದ ಬಳಿಕ ಉಪ್ಪಿ ಪರ ಪ್ರಚಾರಕ್ಕೆ  ಯಶ್, ದರ್ಶನ್ | ಮುಂದಿನ ಚುನಾವಣೆಯಲ್ಲಿ ಪ್ರಜಾಕೀಯ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ ಎಂಬುದಾಗಿ ಭರವಸೆ ನೀಡಿದ್ರಾ ಯಶ್, ದರ್ಶನ್? 

ಉಪೇಂದ್ರ ನೇತೃತ್ವದ ಉತ್ತಮ ಪ್ರಜಾಕೀಯ ಪಕ್ಷದ ಪರ ಪ್ರಚಾರಕ್ಕೆ ಜನರ ಕೊರತೆ ಎದುರಾಗಿದೆ. ಮಂಡ್ಯದಲ್ಲಿ ಸುಮಲತಾ ಮತ್ತು ನಿಖಿಲ್ ಕುಮಾರಸ್ವಾಮಿ ಅಬ್ಬರದಲ್ಲಿ ಪ್ರಜಾಕೀಯ ಪಕ್ಷದ ಅಭ್ಯರ್ಥಿಯ ಗೋಳು ಕೇಳುವವರೇ ಇಲ್ಲದಂತಾಗಿದೆ. 

Add Asianetnews Kannada as a Preferred SourcegooglePreferred

ದಕ್ಷಿಣದವರನ್ನು ಭಾರತೀಯರು ಎಂದು ಪರಿಗಣಿಸದ ಮೋದಿ ಸರ್ಕಾರ: ರಾಹುಲ್!

ಸ್ವತಃ ಉಪೇಂದ್ರ ಅವರೇ ಪ್ರಚಾರಕ್ಕೆ ಬಂದರೂ ಮಂಡ್ಯದ ತಮ್ಮ ನೆಚ್ಚಿನ ನಟನನ್ನು ನೋಡಲೂ ಆಗದಷ್ಟು ಜನರು ಬ್ಯೂಸಿಯಾಗಿದ್ದಾರೆ. ಈ ಮಧ್ಯೆ ಉಪೇಂದ್ರ ಬೆಂಬಲಕ್ಕೆ ಜೋಡೆತ್ತುಗಳಾದ ದರ್ಶನ್ ಮತ್ತು ಯಶ್ ಧಾವಿಸಿದ್ದಾರೆ. ತಾವು ಮಂಡ್ಯದಲ್ಲಿ ಚುನಾವಣೆ ಮುಗಿಯುತ್ತಿದ್ದಂತೆ ಪ್ರಜಾಕೀಯ ಪಕ್ಷದ ಅಭ್ಯರ್ಥಿಗಳ ಪ್ರಚಾರ ಮಾಡುತ್ತೇವೆ. 

ಸಾಲ ತೀರಿಸದ ರೈತರಿಗೆ ಜೈಲಿಲ್ಲ, ರಫೆಲ್ ತನಿಖೆ: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆಗಳ ಮಹಾಪೂರ!

ಈ ಚುನಾವಣೆಯಲ್ಲಿ ಸಾಧ್ಯವಾಗದೇ ಇದ್ದರೂ ಮುಂದಿನ ಚುನಾವಣೆಯಲ್ಲಿ ಪ್ರಜಾಕೀಯ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ ಎಂಬುದಾಗಿ ಭರವಸೆ ನೀಡಿದ್ದಾರೆ ಎಂದು ಸುಳ್ ಸುದ್ದಿ ಮೂಲಗಳು ತಿಳಿಸಿವೆ.