ಬರೆದಿಟ್ಕೊಳ್ಳಿ, 2019 ರ ನಂತರ ಎಲೆಕ್ಷನ್ ಇರಲ್ಲ: ಸಾಕ್ಷಿ ಮಹಾರಾಜ್!
ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ಸಾಕ್ಷಿ ಮಹಾರಾಜ್| ಉನ್ನಾವೋ ಕ್ಷೇತ್ರದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್| 2019ರ ನಂತರ ದೇಶದಲ್ಲಿ ಚುನಾವಣೆಯೇ ಇರಲ್ವಂತೆ| ‘ಮೋದಿ ಸುನಾಮಿ ಪರಿಣಾಮ 2019 ರ ಬಳಿಕ ಚುನಾವಣೆಗಳು ನಡೆಯಲ್ಲ’|
ಉನ್ನಾವೋ(ಮಾ.16): ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸದ್ದು ಮಾಡುವ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್, 2019ರ ಲೋಕಸಭೆ ಚುನಾವಣೆ ನಂತರ ದೇಶದಲ್ಲಿ ಚುನಾವಣೆಯೇ ಇರುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸುನಾಮಿ ಎಷ್ಟು ತೀವ್ರವಾಗಿದೆ ಎಂದರೆ, 2019ರ ಬಳಿಕ ಚುನಾವಣೆಯ ಅಗತ್ಯವೇ ಇರುವುದಿಲ್ಲ. 2024ರಲ್ಲಿ ಲೋಕಸಭೆ ಚುನಾವಣೆ ನಡೆಯುವುದಿಲ್ಲ ಎಂದು ಸಾಕ್ಷಿ ಮಹಾರಾಜ್ ಹೇಳಿರುವ ವಿಡಿಯೋ ಇದೀಗ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ.
BJP's Sakshi Maharaj in Unnao yesterday: Modi naam ki tsunami hai. Desh mein jagriti aayi hai. Mujhe lagta hai ki iss chunav ke baad 2024 mein chunaav nahi hoga, kewal yahi chunav hai. iss desh ke liye pratyashi jitwane ka kaam karenge. pic.twitter.com/NAQsIGApqa
— ANI UP (@ANINewsUP) March 15, 2019
ತಾವೊಬ್ಬ ಸನ್ಯಾಸಿಯಾಗಿದ್ದು, ದೇಶದ ಮುಂದಿನ ಭವಿಷ್ಯ ಏನು ಅಂತ ತಮಗೆ ಗೊತ್ತಿದೆ ಎಂದು ಸಾಕ್ಷಿ ಮಹಾರಾಜ್ ಹೆಳಿದ್ದರೆ. ಅದರಂತೆ 2019ರ ಚುನಾವಣೆ ಬಳಿಕ 2024ರಲ್ಲಿ ಮತ್ತೆ ಚುನಾವಣೆಯ ಅಗತ್ಯವೇ ಬಾರದು ಎಂದು ತಮ್ಮ ಅನಿಸಿಕೆ ಎಂದು ಅವರು ನುಡಿದಿದ್ದಾರೆ.
ಇದೇ ಏಪ್ರಿಲ್ 11ರಿಂದ ಒಟ್ಟು 7 ಹಂತಗಳಲ್ಲಿ ಲೋಕಸಭೆಗೆ ದೇಶಾದ್ಯಂತ ಚುನಾವಣೆ ನಡೆಯಲಿದ್ದು, ಕರ್ನಾಟಕದಲ್ಲಿ ಏಪ್ರಿಲ್ 18 ಮತ್ತು ಏಪ್ರಿಲ್ 23ರಂದು ಒಟ್ಟು ಎರಡು ಹಂತಗಳಲ್ಲಿ ಚುನಾವಣೆ ಘೋಷಣೆಯಾಗಿದೆ. ಮೇ 23 ರಂದು ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟಣೆಯಾಗಲಿದೆ.