ಕಾಂಗ್ರೆಸ್ ಪಕ್ಷದ ಪ್ರಭಾವಿ ಸ್ಥಾನ ತೊರೆದು ಶಿವಸೇನೆ ಸೇರಿದ್ದ ನಾಯಕಿಗೆ ಶಿವಸೇನೆ ಸಹ ಅಷ್ಟೆ ಪ್ರಮುಖವಾದ ಸ್ಥಾನ ನೀಡಿದೆ.

ಮುಂಬೈ[ಏ. 27] ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ವಕ್ತಾರೆ ಸ್ಥಾನ ತೊರೆದು ಶಿವಸೇನೆ ಸೇರಿದ್ದ ಪ್ರಿಯಾಂಕಾ ಚತುರ್ವೇದಿ ಅವರಿಗೆ ಮಹತ್ವದ ಜವಾಬ್ದಾರಿ ಒಂದನ್ನು ನೀಡಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪ್ರಿಯಾಂಕಾ ಅವರನ್ನು ಶಿವಸೇನೆಯ ಉಪನೇತಾ ಆಗಿ ನೇಮಿಸಲಾಗಿದೆ. ಪಕ್ಷದಲ್ಲಿ ಹೆಚ್ಚಿನ ಜವಾಬ್ದಾರಿ ನೀಡಿದ್ದಕ್ಕೆ ಪ್ರಿಯಾಂಕಾ ಧನ್ಯವಾದ ಹೇಳಿದ್ದಾರೆ.

ಪ್ರಿಯಾಂಕಾ ಶಿವಸೇನೆ ಸೇರಿದ್ದು ಯಾಕೆ?

ಅನುಚಿತವಾಗಿ ವರ್ತಿಸಿದ ಕಾಂಗ್ರೆಸ್‌ ಕಾರ್ಯಕರ್ತರ ಅಮಾನತನ್ನು ತೆರವುಗೊಳಿಸಿದ್ದಕ್ಕೆ ಅಸಮಾಧಾನಗೊಂಡಿದ್ದ ಪ್ರಿಯಾಂಕಾ ಈ ಬಗ್ಗೆ ಟ್ವೀಟ್‌ ಮಾಡಿ ಪಕ್ಷದ ಮುಜುಗರಕ್ಕೆ ಕಾರಣವಾಗಿದ್ದರು. ನಂತರ ಶಿವಸೇನೆ ಜಾಯಿನ್ ಆಗಿದ್ದರು.

Scroll to load tweet…