ಮೈತ್ರಿ ಧರ್ಮ ಪರಿಪಾಲನೆಗೆ ದಶಕದಿಂದ ದೂರವಿದ್ದ ಹಳೇ ದೋಸ್ತಿಗಳು ಮತ್ತೆ ಒಂದಾಗಿದ್ದಾರೆ. ಈ ಮೂಲಕ ಮೈಸೂರು ಕೊಡಗು ಮೈತ್ರಿ ಅಭ್ಯರ್ಥಿ ಪರ ಒಟ್ಟಾಗಿ ಮತಯಾಚನೆ ಮಾಡಿದ್ದಾರೆ.
ಮೈಸೂರು[ಏ.15]: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪರಸ್ಪರ ಎದುರಾಳಿಗಳಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಜಿ.ಟಿ.ದೇವೇಗೌಡ ದಶಕಗಳ ನಂತರ ಒಂದಾಗಿ ಭಾನುವಾರ ಮೈತ್ರಿ ಅಭ್ಯರ್ಥಿ ವಿಜಯಶಂಕರ್ ಪರವಾಗಿ ಮತ ಯಾಚನೆ ಮಾಡಿದರು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜಕೀಯ ಎಂಬುದು ಗಣಿತ ಅಲ್ಲ, ಅದೊಂದು ಕೆಮಿಸ್ಟ್ರಿ. 2 ಮತ್ತು 2 ಸೇರಿ 4 ಆಗಲ್ಲ. 2 ಪ್ಲಸ್ ಎಷ್ಟುಬೇಕಾದರೂ ಆಗಬಹುದು. ರಾಜಕೀಯದಲ್ಲಿ ಯಾರೂ ಪರ್ಮನೆಂಟ್ ಸ್ನೇಹಿತರು ಇರೋಲ್ಲ, ಪರ್ಮನೆಂಟ್ ವೈರಿಗಳೂ ಇರಲ್ಲ ಎಂದರು.
Scroll to load tweet…
ನಾನು ಜಿ.ಟಿ. ದೇವೇಗೌಡ ಒಟ್ಟಿಗೆ ಪ್ರಚಾರಕ್ಕೆ ಹೋಗದಿದ್ದರೆ ಗೊಂದಲ ಏರ್ಪಡುತ್ತದೆ. ಅದು ಹಾಗೆಯೇ ಉಳಿಯುತ್ತದೆ ಎಂಬ ಕಾರಣಕ್ಕೆ ಒಗ್ಗಟ್ಟಾಗಿ ಬಂದಿದ್ದೇವೆ. ನಾನು ಜಿ.ಟಿ.ದೇವೇಗೌಡಗೆ ಹೇಳಿದ್ದೆ. ನಾನು ಬರ್ತೀನಿ, ನೀನು ಬಾ ಎಂದಿದ್ದೆ. ನಾವಿಬ್ಬರೂ ಬೆಂಗಳೂರಿನಲ್ಲಿ ಸಭೆ ಮಾಡಿದ್ದೆವು ಎಂದು ಹೇಳಿದರು.
