ಜಯಾಪ್ರದಾ ಒಳವಸ್ತ್ರದ ಬಗ್ಗೆ ವ್ಯಂಗ್ಯವಾಡಿದ ಸಮಾಜವಾದಿ ಪಕ್ಷದ ಆಜಂ ಖಾನ್ ವಜಾಕ್ಕೆ ಆಗ್ರಹ

ರಾಂಪುರ[ಏ.15]: ಕೀಳು ಮಾತುಗಳ ಮೂಲಕವೇ ಸದಾ ಸುದ್ದಿಯಲ್ಲಿರುವ ಸಮಾಜವಾದಿ ಪಕ್ಷದ ನಾಯಕ ಆಜಂ ಖಾನ್‌, ಮತ್ತೊಮ್ಮೆ ತಮ್ಮ ನಾಲಗೆಯನ್ನು ಮನಬಂದಂತೆ ಹರಿಯಬಿಟ್ಟಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಂಪುರದಲ್ಲಿ ತಮ್ಮ ಪ್ರತಿಸ್ಪರ್ಧಿ ಜಯಪ್ರದಾ ಬಗ್ಗೆ ಮಾತನಾಡುವ ವೇಳೆ ಅವರ ಬಳಸಿದ ಕೀಳುಪದವೊಂದು ಭಾರೀ ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದಲೇ ವಜಾಮಾಡಬೇಕೆಂಬ ಭಾರೀ ಒತ್ತಾಯ ಕೇಳಿಬಂದಿದೆ. ಇಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಆಜಂ ಖಾನ್‌, 17 ವರ್ಷಗಳ ಹಿಂದೆ ನಾನು ಜಯಪ್ರದಾರನ್ನು ಈ ಕ್ಷೇತ್ರಕ್ಕೆ ಕರೆತಂದಿದ್ದೆ. ಇಷ್ಟು ವರ್ಷ ಯಾರಿಗೂ ಆಕೆಯನ್ನು ಮುಟ್ಟಲು ಬಿಟ್ಟಿರಲಿಲ್ಲ. ಆದರೆ 17 ದಿನಗಳ ಹಿಂದೆ ಆಕೆ ಖಾಕಿ ಒಳವಸ್ತ್ರ ತೊಟ್ಟಿದ್ದು ಗೊತ್ತಾಯ್ತು ಎಂದಿದ್ದಾರೆ.

ಜಯಪ್ರದ ಬಿಜೆಪಿ ತೆಕ್ಕೆಗೆ: ಅಮರ್ ಸಿಂಗ್ ನಗುತ್ತಿದ್ದಾರೆ ಮೆತ್ತಗೆ!

ಈ ಮೂಲಕ ಜಯಾ ಬಿಜೆಪಿ ಸೇರ್ಪಡೆಯನ್ನು ವ್ಯಂಗ್ಯವಾಡಿದ್ದಾರೆ. ಅವರ ಈ ಕೀಳು ಹೇಳಿಕೆ ಬಗ್ಗೆ ಆನ್‌ಲೈನ್‌ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ ವ್ಯಕ್ತವಾಗಿದೆ.

ದೇಶದಲ್ಲಿ ಏ.11ರಿಂದ ಮೇ.19ರವೆರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ, ಕರ್ನಾಟಕದಲ್ಲಿ 28.