ಮಂಡ್ಯ ಡಿಸಿ ಮಂಜುಶ್ರೀ ವರ್ಗಾವಣೆಯಾಗ್ತರಾ? ಮಂಡ್ಯ ಡಿಸಿ ವರ್ಗಾವಣೆಗೆ ಮನವಿ ಮಾಡಿದ ಸುಮಲತಾ ಚುನಾವಣಾ ಏಜೆಂಟ್ ಮದನ್ | ಮೈಸೂರು ಪ್ರಾದೇಶಿಕ ಆಯುಕ್ತರ ಬಳಿ ಮನವಿ ಮಾಡಿದ ಮದನ್ |

ಮಂಡ್ಯ, [ಮಾ.31]: ಮಂಡ್ಯ ಲೋಕಸಭಾ ಕ್ಷೇತ್ರದ ಕಣದಲ್ಲಿ ದಿನದಿಂದ ದಿನಕ್ಕೆ ಸಿನಿಮೀಯ ಬೆಳವಣಿಗೆಗಳು ನಡೆಯುತ್ತಿವೆ.

Add Asianetnews Kannada as a Preferred SourcegooglePreferred

ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ನಡುವೆ ನೆಕ್ ಟು ನೆಕ್ ಫೈಟ್ ಏರ್ಪಟ್ಟಿದೆ.

ನಮಗೆ 99 % ನ್ಯಾಯ ಸಿಗಲ್ಲ: ಸಿಎಂ ಮೇಲೆ ಸುಮಲತಾ ಆಕ್ರೋಶ

ಮತ್ತೊಂದು ಕಡೆ ಸಿಎಂ ಕುಮಾರಸ್ವಾಮಿ ಅವರು ತಮ್ಮ ಪುತ್ರನ ಗೆಲುವಿಗಾಗಿ ಅಧಿಕಾರ ದುರ್ಬಳಿಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸುನಮಲತಾ ಅಂಬರೀಶ್ ಆರೋಪಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಚುನಾವನಾಧಿಕಾರಿ [ಮಂಡ್ಯ ಡಿಸಿ] ಮಂಜುಶ್ರೀ ಅವರು ಜೆಡಿಎಸ್ ಪರ ಕೆಲಸ ಮಾಡುತ್ತಿದ್ದಾರೆ ಎನ್ನುವ ಆರೋಪಗಳು ಬಲವಾಗಿ ಕೇಳಿಬರುತ್ತಿವೆ.

ನಿಖಿಲ್ ನಾಮಪತ್ರದಲ್ಲಿ ದೋಷ ಇದ್ದರೂ ಮಂಜುಶ್ರೀ ಅವರು ಸಿಂಧು ಮಾಡಿದ್ದು, ಸಿಎಂ ಆಣತಿಯಂತೆ ಕೆಲಸ ಮಾಡುತ್ತಿದ್ದಾರೆ ಅಂತೆಲ್ಲಾ ಆರೋಪಗಳಿವೆ. ಈ ಹಿನ್ನೆಯಲ್ಲಿ ಕೂಡಲೇ ಚುನಾವಣಾಧಿಕಾರಿ ಮಂಜುಶ್ರೀ ಅವರನ್ನು ವರ್ಗಾವಣೆ ಮಾಡುವಂತೆ ಮನವಿ ಮಾಡಲಾಗಿದೆ.

ನಿಖಿಲ್ ನಾಮಪತ್ರ ವಿವಾದ: ವರದಿ ಮಂಡ್ಯದಿಂದ ದೆಹಲಿಗೆ ಶಿಫ್ಟ್..!

ಸುಮಲತಾ ಅಂಬರೀಶ್ ಪರವಾಗಿ ಅವರ ಚುನಾವಣೆ ಏಜೆಂಟ್ ಮದನ್ ಅವರು ಮೈಸೂರು ಪ್ರಾದೇಶಿಕ ಚುನಾವಣಾಧಿಕಾರಿಗಳಿಗೆ ಪತ್ರಬರೆದಿದ್ದಾರೆ. ಮಂಡ್ಯ ಡಿಸಿ ವಿರುದ್ಧ ಸಾಲು-ಸಾಲು ದೂರುಗಳನ್ನ ನೀಡಿರುವ ಮದನ್, ಇದೀಗ ಮಂಜುಶ್ರೀ ಅವರನ್ನ ವರ್ಗಾವಣೆ ಮಾಡುವಂತೆ ಮೈಸೂರು ಪ್ರಾದೇಶಿಕ ಆಯುಕ್ತರಿಗೆ ಲಿಖಿತ ರೂಪದಲ್ಲಿ ಮನವಿ ಮಾಡಿದ್ದಾರೆ.