ಟಿಕೆಟ್ ಸಿಗಲಿಲ್ಲ ಅಂತಾ ಬಿಜೆಪಿ ತ್ಯಜಿಸಿದ ಹಾಲಿ ಸಂಸದ!
ಬಿಜೆಪಿಗೆ ಶಾಕ್ ಮೇಲೆ ಶಾಕ್ ಕೊಡುತ್ತಿರುವ ಸ್ವಪಕ್ಷೀಯರು| ಬೆಳೆಯುತ್ತಲೇ ಇರುವ ಪಕ್ಷ ತ್ಯಜಿಸುತ್ತಿರುವವರ ಪಟ್ಟಿ| ಪಕ್ಷ ತೊರೆದ ಅಸ್ಸಾಂನ ತೇಜ್ಪುರ್ ಕ್ಷೇತ್ರದ ಬಿಜೆಪಿ ಸಂಸದ ಆರ್.ಪಿ.ಶರ್ಮಾ| ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಿಜೆಪಿ ತ್ಯಜಿಸಿದ ಆರ್.ಪಿ.ಶರ್ಮಾ|
ಗುವಹಾಟಿ(ಮಾ.16): ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೇ ಬಿಜೆಪಿಯಲ್ಲಿ ತಳಮಳ ಶುರುವಾಗಿದ್ದು, ಪಕ್ಷ ತ್ಯಜಿಸುತ್ತಿರುವವರ ಪಟ್ಟಿ ಬೆಳೆಯುತ್ತಲೇ ಇದೆ.
ಉತ್ತರಪ್ರದೇಶದ ಪ್ರಯಾಗರಾಜ್ ಸಂಸದ ಶ್ಯಾಮಾ ಚರಣ್ ಗುಪ್ತಾ ಪಕ್ಷ ತೊರೆದ ಬೆನ್ನಲ್ಲೇ, ಅಸ್ಸಾಂನ ತೇಜ್ಪುರ್ ಕ್ಷೇತ್ರದ ಬಿಜೆಪಿ ಸಂಸದ ಆರ್.ಪಿ.ಶರ್ಮಾ ಕೂಡ ಪಕ್ಷ ತೊರೆದಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಯ ಸ್ಪರ್ಧಿಗಳ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲ ಎಂಬ ಕಾರಣಕ್ಕೆ ಪಕ್ಷ ತೊರೆದಿರುವುದಾಗಿ ಆರ್.ಪಿ.ಶರ್ಮಾ ಹೇಳಿದ್ದಾರೆ.
Sitting MP from Tezpur constituency, Ram Prasad Sarmah, has resigned from Bharatiya Janata Party (BJP). #Assam pic.twitter.com/n2vkeryi5z
— ANI (@ANI) March 16, 2019
ಆರ್ಎಸ್ಎಸ್ ಹಾಗೂ ವಿಎಚ್ಪಿಯಲ್ಲಿ 15 ವರ್ಷ ಮತ್ತು ಬಿಜೆಪಿಯಲ್ಲಿ 29 ವರ್ಷ ಸೇವೆ ಸಲ್ಲಿಸಿದ್ದ ಆರ್.ಪಿ.ಶರ್ಮಾ, ಕೇವಲ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ರಾಜೀನಾಮೆ ನೀಡಿರುವುದು ಚರ್ಚೆಗೆ ಗ್ರಾಸ ಒದಗಿಸಿದೆ.
ಇದೇ ಏಪ್ರಿಲ್ 11ರಿಂದ ಒಟ್ಟು 7 ಹಂತಗಳಲ್ಲಿ ಲೋಕಸಭೆಗೆ ದೇಶಾದ್ಯಂತ ಚುನಾವಣೆ ನಡೆಯಲಿದ್ದು, ಕರ್ನಾಟಕದಲ್ಲಿ ಏಪ್ರಿಲ್ 18 ಮತ್ತು ಏಪ್ರಿಲ್ 23ರಂದು ಒಟ್ಟು ಎರಡು ಹಂತಗಳಲ್ಲಿ ಚುನಾವಣೆ ಘೋಷಣೆಯಾಗಿದೆ. ಮೇ 23 ರಂದು ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟಣೆಯಾಗಲಿದೆ.