ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿರುವ ಅನಂತ್ ಕುಮಾರ್ ಹೆಗಡೆ ತಮ್ಮ ಗೆಲುವಿಗೆ ಅಸಲಿ ಕಾರಣ ಯಾರಾಗುತ್ತಾರೆ ಎಂದು ಹೇಳಿದ್ದಾರೆ.
ಕಾರವಾರ[ಮಾ. 05] ಸುದೀರ್ಘ ರಾಜಕೀಯ ಚದುರಂಗದ ಪರಿಣಾಮವಾಗಿ ಕಾಂಗ್ರೆಸ್ ಉತ್ತರಕನ್ನಡ ಲೋಕಸಭಾ ಕ್ಷೇತ್ರವನ್ನ ಜೆಡಿಎಸ್ಗೆ ಬಿಟ್ಟಿದೆ. ನಮಗೆ ಚುನಾವಣೆ ಗೆಲ್ಲಲು ಸುಲಭ ಆಗಿದ್ದು ಇದರಿಂದಾಗಿಯೇ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹೇಳಿಕೆ ನೀಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕುಮಟಾದ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ ಅಭಿನಂದನಾ ಸಭೆಯಲ್ಲಿ ಮಾತನಾಡಿದ ಸಚಿವ ಅನಂತಕುಮಾರ ಹೆಗಡೆ ಚುನಾವಣೆಯಲ್ಲಿ ಪರದೆಯ ಹಿಂದೆ ಪರೋಕ್ಷವಾಗಿ ರಾಜಕಾರಣದಲ್ಲಿ ಸಹಕರಿಸಿದವರಿಗೂ ಕೃತಜ್ಞತೆ ಸಲ್ಲಿಸಬೇಕು ಎಂದು ಹೇಳಿದ್ದಾರೆ.
ನನ್ನ ಹೇಳಿಕೆ ಅರ್ಥ ಆಗದವರಿಂದ ವಿವಾದ ಸೃಷ್ಟಿ
ಆರನೇ ಬಾರಿಗೆ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಅನಂತಕುಮಾರ ಹೆಗಡೆ ತನ್ನ ಗೆಲುವಿಗೆ ಪರೋಕ್ಷವಾಗಿ ಬೇರೆ ಪಕ್ಷದ ಮುಖಂಡರೂ ಸಾಥ್ ನೀಡಿರುವ ಅರ್ಥದಲ್ಲಿ ಹೇಳಿದ್ದಾರೆ.
ಪರದೆಯ ಹಿಂದೆ ಇರುವವರ ಬಗ್ಗೆ ನಿಮಗ್ಯಾರಿಗೂ ಗೊತ್ತಿಲ್ಲ. ಗೊತ್ತಿರುವುದು ನನಗೆ ಮಾತ್ರ ಎಂದು ಅನಂತಕುಮಾರ ಹೆಗಡೆ ಹೇಳಿರುವುದು ರಾಜಕೀಯ ಕ್ಷೇತ್ರದಲ್ಲಿ ಚರ್ಚೆಗೆ ಗ್ರಾಸವಾಗಿದೆ.
