ಎರಡನೇ ಹಂತದ ಮತದಾನ ಪ್ರಕ್ರಿಯೆಲ್ಲಿ ಭಾರತ ಬ್ಯುಸಿ| ಕರ್ನಾಟಕ ಸೇರಿದಂತೆ ದೇಶದ 11 ರಾಜ್ಯ ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ಮತದಾನ| ಒಟ್ಟು 95 ಲೋಕಸಭಾ ಕ್ಷೇತ್ರಗಳಿಗೆ ಮತದಾನ| ಸೂಟ್‌ಕೇಸ್ ತಪಾಸಣೆಗೆ ಮುಂದಾದ ಚುನಾವಣಾಧಿಕಾರಿಗಳ ಮೇಲೆ ಧರ್ಮೇಂದ್ರ ಪ್ರಧಾನ್ ಕಿಡಿ|  ಚುನಾವಣಾಧಿಕಾರಿಗಳ ಮೇಲೆ ಹರಿಹಾಯ್ದ ಧರ್ಮೇಂದ್ರ ಪ್ರಧಾನ್ ವಿಡಿಯೋ ವೈರಲ್| ಕೇಂದ್ರ ಸಚಿವರ ವಿರುದ್ಧ ಕ್ರಮಕ್ಕೆ ಬಿಜೆಡಿ, ಕಾಂಗ್ರೆಸ್ ಒತ್ತಾಯ|

ಭುವನೇಶ್ವರ್(ಏ.18): ಚುನವಣಾ ಪ್ರಚಾರದ ವೇಳೆ ತಮ್ಮ ಸೂಟ್‌ಕೇಸ್ ತಪಾಸಣೆಗೆ ಮುಂದಾದ ಚುನವಣಾ ಅಧಿಕಾರಿಗಳ ಮೇಲೆ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಸಿಟ್ಟಾದ ಪ್ರಸಂಗ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತಮ್ಮ ಬಳಿ ಇದ್ದ ಸೂಟ್‌ಕೇಸ್‌ನ್ನು ತಪಾಸಣೆ ಮಾಡಲು ಮುಂದಾದಾಗ, ಧರ್ಮೇಂದ್ರ ಪ್ರಧಾನ್ ಚುನಾವಣಾಧಿಕಾರಿಗಳ ಮೇಲೆ ಸಿಟ್ಟಾಗಿದ್ದಾರೆ.

Scroll to load tweet…


ಚುನಾವಣಾಧಿಕಾರಿಗಳ ಮೇಲೆ ಹರಿಹಾಯ್ದ ಧರ್ಮೇಂದ್ರ ಪ್ರಧಾನ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಕೇಂದ್ರ ಸಚಿವರ ವರ್ತನೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

Scroll to load tweet…

ಇನ್ನು ಧರ್ಮೇಂದ್ರ ಪ್ರಧಾನ್ ವರ್ತನೆ ಖಂಡಿಸಿ ಬಿಜೆಡಿ ಮತ್ತು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕೇಂದ್ರ ಸಚಿವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿವೆ.

ದೇಶದಲ್ಲಿ ಏ.11ರಿಂದ ಮೇ.19ರವರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ. ಕರ್ನಾಟಕದಲ್ಲಿ 28.