ವೇದಿಕೆ ಮೇಲೆ ಮಗಳನ್ನು ನೆನೆದು ಕಣ್ಣೀರಿಟ್ಟ ರವಿಚಂದ್ರನ್ ?
ತಕಧಿಮಿತಾ ವೇದಿಕೆ ಮೇಲೆ ಮೊದಲ ಬಾರಿಗೆ ಮಗಳೊಂದಿಗೆ ಕಳೆದ ಕೆಲವೊಂದು ಅಮೂಲ್ಯ ಕ್ಷಣಗಳನ್ನು ನೆನೆದು ಮಾತುಗಳೇ ಇಲ್ಲದ ಹಾಗೆ ತಡವರಿಸಿದ ಕ್ರೇಜಿ ಸ್ಟಾರ್ ರವಿಚಂದ್ರನ್.
ಮೇ. 28 ಹಾಗೂ 29 ರಂದು ಅರಮನೆ ಮೈದಾನದಲ್ಲಿ ಹೂ ಬಳಸದೇ ಗಾಜಿನ ಅರಮನೆಯಂತೆ ಅಲಂಕಾರ ಮಾಡಿಸಿ ಮಗಳ ಮದುವೆಯನ್ನು ವಿಜೃಂಭಣೆಯಾಗಿ ಮಾಡಲಿದ್ದಾರೆ ರವಿ ಚಂದ್ರನ್.
ಕ್ರೇಜಿಸ್ಟಾರ್ ಮಗಳ ಮದುವೆಗೆ ವೋಚರನ್ನೇ ಉಡುಗೊರೆಯಾಗಿ ತೆಗೆದುಕೊಂಡು ಬನ್ನಿ!
ಕಲರ್ಸ್ ಸೂಪರ್ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ತಕಧಿಮಿತಾ’ ಡ್ಯಾನ್ಸ್ ರಿಯಾಲಿಟಿ ಶೋ ಗ್ರ್ಯಾಂಡ್ ಫಿನಾಲೆ ವೇಳೆ ವೇದಿಕೆ ಮೇಲೆ ಆಗಮಿಸಿದ ರವಿಚಂದ್ರನ್ ಮಗಳ ಮದುವೆ ವಿಚಾರದಲ್ಲಿರುವ ಆತಂಕವನ್ನು ಹಂಚಿಕೊಂಡಿದ್ದಾರೆ.
'ಕಳೆದೆರಡು ವಾರಗಳಿಂದ ಮನಸ್ಸಿನಲ್ಲಿ ಏನೋ ತಳಮಳ. ದಿನಗಳು ಹತ್ತಿರವಾಗುತ್ತಿದಂತೆ ತುಂಬಾ ಭಯವಾಗುತ್ತಿದೆ. ಯಾರೂ ಮಾಡಿರದ ಹಾಗೆ ಸಂಭ್ರಮ ಮಾಡಬೇಕು ಅಂತ ಇದೆ ತಲೆಯಲ್ಲಿ. ಆದರೆ ಸಂಭ್ರಮ ಹೆಚ್ಚಾಗುತ್ತಿದಂತೆ ದಿನಗಳು ಬೇಗ ಕಳೆಯುತ್ತಿದೆ. ನಾನು ನನ್ನ ಕುಟುಂಬದವರು ಅವಳನ್ನು ಮಿಸ್ ಮಾಡಿಕೊಳ್ಳುತ್ತೇವೆ. ನನ್ನ, ಅವಳ ರಿಲೇಷನ್ಶಿಪ್ಗೆ ಚಾನ್ಸ್ ಇಲ್ಲ. ಯಾಕಂದ್ರೆ ನನ್ನನ್ನು ಬೈಯುವುದಕ್ಕೆ ಅಧಿಕಾರ ಇರುವುದು ನನ್ನ ತಂದೆಗೆ ಅದು ಬಿಟ್ಟರೆ ನನ್ನ ಮಗಳಿಗೆ. ಜೀವನದಲ್ಲಿ ನಾನು ಯಾರಿಗಾದ್ರೂ ಹೆದರಿದ್ರೆ ಅದು ನನ್ನ ಮಗಳಿಗೆ ಮಾತ್ರಾ' ಎಂದು ಭಾವುಕರಾಗಿದ್ದಾರೆ.