ನಿರ್ದೇಶಕ ರಾಮ್ ಗೋಪಾಲ್ ವರ್ಮಾ ವಿರುದ್ಧ ಮಾನನಷ್ಟ ಮೊಕದ್ದಮೆ |  ‘ಲಕ್ಷ್ಮೀ’ಸ್ ಎನ್‌ಟಿಆರ್’ ಚಿತ್ರದಲ್ಲಿ ಆಂಧ್ರ ಸಿಎಂ ಚಂದ್ರಬಾಬು ನಾಯ್ಡುರನ್ನು ವಿವಾದಾತ್ಮಕ ಬಿಂಬಿಸಲಾಗಿದೆ ಎಂದು ಆರೋಪಿಸಲಾಗಿದೆ. 

ಅಮರಾವತಿ (ಡಿ. 24): ‘ಲಕ್ಷ್ಮೀ’ಸ್ ಎನ್‌ಟಿಆರ್’ ಚಿತ್ರದಲ್ಲಿ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಬಗ್ಗೆ ವಿವಾದಾತ್ಮಕವಾಗಿ ಬಿಂಬಿಸಲಾಗಿದೆ ಎಂದು ಆರೋಪಿಸಿ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕರ್ನೂಲ್ ಶಾಸಕ ಎಸ್.ವಿ ಮೋಹನ್ ರೆಡ್ಡಿ ಶನಿವಾರವೇ ಈ ಸಂಬಂಧ ಕೇಸ್ ದಾಖಲಿಸಿದ್ದಾರೆ. ಲಕ್ಷ್ಮೀ’ಸ್ ಎನ್‌ಟಿಆರ್ ಚಿತ್ರದ ಗೀತೆಯೊಂದರಲ್ಲಿ ನಾಯ್ಡು ಅವರು ಟಿಡಿಪಿ ಸಂಸ್ಥಾಪಕ ಎನ್.ಟಿ. ರಾಮ್‌ರಾವ್ ಅವರ ಬೆನ್ನಿಗೆ ಚೂರಿ ಹಾಕಿ, ಅಧಿಕಾರಕ್ಕೆ ಬಂದರು ಎಂಬಂತೆ ಚಿತ್ರಿಸಲಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳ ಬೇಕು ಎಂದು ಶಾಸಕ ರೆಡ್ಡಿ ಆಗ್ರಹಿಸಿದ್ದಾರೆ.