ಈ ಬಾರಿ ಸರಿಗಮಪ ಕಾರ್ಯಕ್ರಮಕ್ಕೆ ವಿಶೇಷ ಅತಿಥಿ ಆಗಮನ
ಜಿ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸರಿಗಮಪ ಲಿಲ್ ಚಾಂಪ್ಸ್ ವೇದಿಕೆಗೆ ವಿಶೇಷ ಅತಿಥಿಯೊಬ್ಬರು ಆಗಮಿಸುತ್ತಿದ್ದಾರೆ.
ಬೆಂಗಳೂರು : ಜಿ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸರಿಗಮಪ ಲಿಲ್ ಚಾಂಪ್ಸ್ ವೇದಿಕೆಗೆ ವಿಶೇಷ ಅತಿಥಿಯೊಬ್ಬರು ಆಗಮಿಸುತ್ತಿದ್ದಾರೆ. ಆ ವಿಶೇಷ ಅತಿಥಿ ಯಾರು ಗೊತ್ತಾ..? ಅವರೇ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು.
ಕಳೆದ ವಾರ ಕಾರ್ಯಕ್ರಮಕ್ಕೆ ಅತಿಥಿಯಾಗಿ ಸಂಗೀತ ಲೋಕದ ದಿಗ್ಗಜ ಎಸ್.ಪಿ ಬಾಲಸುಬ್ರಮಣ್ಯಂ ಅವರು ಆಗಮಿಸಿದ್ದರು. ಈ ಬಾರಿ ಧರ್ಮಾಧಿಕಾರಿಗಳು ಆಗಮಿಸುತ್ತಿದ್ದಾರೆ.
ಎಲ್ಲಾ ಸ್ಪರ್ಧಿಗಳೂ ಕೂಡ ಇವರ ಆಗಮನಕ್ಕಾಗಿ ಖಾತರಿಸಿ ಕಾಯುತ್ತಿದ್ದಾರೆ. ಈ ಬಾರಿ ವೀಕೆಂಡ್’ನಲ್ಲಿ ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ. ಶನಿವಾರ ಹಾಗೂ ಭಾನುವಾರದಂದು ಕಾರ್ಯಕ್ರಮ ಪ್ರಸಾರವಾಗಲಿದೆ.