ಪತ್ರಕರ್ತನ ಜೊತೆ ಕಂಗನಾ ವಾಕ್ಸಮರ | ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ವಿಡಿಯೋ | ಕೊನೆಗೂ ಕ್ಷಮೆಯಾಚಿಸಿದ ಏಕ್ತಾ ಕಪೂರ್ 

ಬಾಲಿವುಡ್ ನಟಿ ಕಂಗನಾ ರಾಣಾವತ್ ’ ಜಡ್ಜ್ ಮೆಂಟಲ್ ಹೈ ಕ್ಯಾ ಸಿನಿಮಾ ಪ್ರಮೋಶನ್ ನಲ್ಲಿ ಹೈ ಡ್ರಾಮಾ ಸಿಕ್ಕಾಪಟ್ಟೆ ಸುದ್ಧಿಯಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಂಗನಾ ರಾಣಾವತ್ ಜಡ್ಜ್ ಮೆಂಟಲ್ ಕ್ಯಾ ಹೇ ಸಿನಿಮಾದ ಪ್ರಮೋಶನ್ ಗೆ ಸುದ್ದಿಗೋಷ್ಠಿ ಕರೆಯಲಾಗಿತ್ತು. ಆ ವೇಳೆ ಪತ್ರಕರ್ತ ಜಸ್ಟಿನ್ ರಾವ್ ಪ್ರಶ್ನೆ ಕೇಳಲು ಆರಂಭಿಸಿದಾಗ ಕಂಗನಾ ಗರಂ ಆಗಿದ್ದಾರೆ. 

ಮಣಿಕರ್ಣಿಕಾ ಸಿನಿಮಾ ಬಿಡುಗಡೆಯಾದಾಗ ಜಸ್ಟೀನ್ ಚಿತ್ರದ ಬಗ್ಗೆ ನೆಗೇಟಿವ್ ಆಗಿ ಬರೆದಿದ್ದರು. ಆ ಸಿಟ್ಟನ್ನು ಜಸ್ಟೀನ್ ಮೇಲೆ ತೋರಿಸಿದ್ದಾರೆ. ಇಬ್ಬರ ನಡುವೆ ವಾಕ್ಸಮರ ನಡೆದಿದೆ. ಪಕ್ಕದಲ್ಲೇ ಇದ್ದ ನಿರ್ಮಾಪಕಿ ಏಕ್ತಾ ಕಪೂರ್ , ರಾಜ್ ಕುಮಾರ್ ರಾವ್ ಪರಿಸ್ಥಿತಿಯನ್ನು ತಿಳಿಗೊಳಿಸಲು ಪ್ರಯತ್ನಿಸಿದರೂ ಇಬ್ಬರೂ ಸುಮ್ಮನಾಗಲಿಲ್ಲ. ಇಬ್ಬರ ನಡುವಿನ ಜಗಳ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. 

ಕಂಗನಾ ಹಾಗೂ ಏಕ್ತಾ ಕಪೂರ್ ಘಟನೆ ಬಗ್ಗೆ ಕ್ಷಮೆಯಾಚಿಸಬೇಕೆಂದು ಸಿನಿಮಾ ಪತ್ರಕರ್ತರ ಕೂಟ ಒತ್ತಾಯಪಡಿಸಿತ್ತು. ಏಕ್ತಾ ಕಪೂರ್ ಪ್ರೊಡಕ್ಷನ್ ಹೌಸ್ ಬಾಲಾಜಿ ಟೆಲಿಫಿಲ್ಮ್ ಕ್ಷಮೆಯಾಚಿಸಿದೆ. 

View post on Instagram

ಆದರೆ ಕಂಗನಾ ಕ್ಷಮೆಯಾಚಿಸಲು ನಿರಾಕರಿಸಿದ್ದಾರೆ. ಸಾಧ್ಯತೆಗಳನ್ನು ತಳ್ಳಿ ಹಾಕಿದ್ದಾರೆ.