ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಲವೆಡೆ ಚೆಕ್ ಪೋಸ್ಟ್ ಗಳಿದ್ದು ವಾಹನಗಳ ತಪಾಸಣೆ ಮಾಡುವಾಗ ನಟ ಶಿವರಾಜ್ಕುಮಾರ್ ಅವರನ್ನು ಅಧಿಕಾರಿಗಳು ತಪಾಸಣೆ ನಡೆಸಿ ಅವರೊಂದಿಗೆ ಫೋಟೋ ಕ್ಲಿಕ್ಕಿಸಿ ಸಂಭ್ರಮಿಸಿದ್ದಾರೆ.
ಗೌರಿಬಿದನೂರು ತಾಲೂಕಿನ ಗಡಿ ಭಾಗದಲ್ಲಿ ಸಂಚರಿಸುತ್ತಿದ್ದ ಶಿವರಾಜ್ ಕುಮಾರ್ ಕಾರನ್ನು ಚೆಕ್ ಪೋಸ್ಟ್ ಅಧಿಕಾರಿಗಳು ಲೋಕಸಭಾ ಚುನಾವಣೆ ನೀತಿ ಸಂಹಿತೆಯನ್ವಯ ತಪಾಸಣೆ ಮಾಡಿದ್ದಾರೆ. ಚಿತ್ರೀಕರಣ ಮುಗಿಸಿಕೊಂಡು ಬೆಂಗಳೂರಿಗೆ ಹಿಂದಿರುಗಿ ಬರುವಾಗ ಅವರ ಕಾರನ್ನು ತಾಲೂಕಿನ ತಿಪ್ಪಗಾನಹಳ್ಳಿ ಬಳಿ ತಪಾಸಣೆ ನಡೆಸಿದ ಸಿಬ್ಬಂದಿ, ಕಾರ್ ನೋಂದಣಿ ಸಂಖ್ಯೆ, ಮೊಬೈಲ್ ಸಂಖ್ಯೆ ದಾಖಲಿಸಿಕೊಂಡಿದ್ದಾರೆ.
ಅಷ್ಟೇ ಅಲ್ಲದೇ ನಟನನ್ನು ಕಂಡ ಸಂತಸದಲ್ಲಿ ಅವರೊಂದಿಗೆ ಒಂದು ಗ್ರೂಪ್ ಪೋಟೋ ತೆಗೆಸಿಕೊಂಡಿರುವುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಜನಸಾಮಾನ್ಯರಂತೆ ವರ್ತಿಸಿ ಸಹಕರಿಸಿದ್ದಕ್ಕೆ ಸಿಬ್ಬಂದಿ, ಹಾಗೂ ಸಾರ್ವಜನಿಕ ಮೆಚ್ಚುಗೆಗೆ ಶಿವಣ್ಣ ಪಾತ್ರರಾಗಿದ್ದಾರೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Mar 29, 2019, 11:28 AM IST