ಆರ್ಥಿಕ ಸಂಕಷ್ಟದಲ್ಲಿದ್ದಾರೆ ನಟಿ ವಿಜಯಲಕ್ಷ್ಮೀ | ವಿಜಯಲಕ್ಷ್ಮೀಗೆ ಹಣಕಾಸಿನ ನೆರವು ನೀಡಿದ ಕಿಚ್ಚ ಸುದೀಪ್ | ಮದಗಜ ಚಿತ್ರತಂಡವೂ ವಿಜಯಲಕ್ಷ್ಮಿಗೆ ನೆರವು ನೀಡಿದೆ 

ಬೆಂಗಳೂರು (ಫೆ. 26): ನಾಗಮಂಡಲ, ಸೂರ್ಯವಂಶ ಖ್ಯಾತಿಯ ವಿಜಯಲಕ್ಷ್ಮೀ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ವಿಜಯಲಕ್ಷ್ಮೀ ಅನಾರೋಗ್ಯದಿಂದ ಬಳಲುತ್ತಿದ್ದು ಆಸ್ಪತ್ರೆ ಖರ್ಚು ಭರಿಸಲು ಕಷ್ಟಪಡುತ್ತಿದ್ದಾರೆ. ನೆಲೆಸಲು ನೆಲೆಯಿಲ್ಲ. ಕೈಯಲ್ಲಿ ಹಣವಿಲ್ಲ ಎಂಬ ಸ್ಥಿತಿಯಲ್ಲಿದ್ದಾರೆ. ಹಾಗಾಗಿ ಸಹಾಯ ಮಾಡಿ ಎಂದು ಇಂಡಸ್ಟ್ರಿಯವರ ಸಹಾಯ ಯಾಚಿಸಿದ್ದರು. 

Add Asianetnews Kannada as a Preferred SourcegooglePreferred

ಶ್ರೀಮುರಳಿ 'ಮದಗಜ' ಚಿತ್ರದಲ್ಲಿ ವಿಜಯಲಕ್ಷ್ಮಿ!

ವಿಷಯ ತಿಳಿದ ನಟ ಕಿಚ್ಚ ಸುದೀಪ್ ವಿಜಯಲಕ್ಷ್ಮಿಯವರಿಗೆ ಸಹಾಯ ಮಾಡಿದ್ದಾರೆ. ಒಂದು ಲಕ್ಷ ರೂಪಾಯಿ ಹಣ ಸಹಾಯ ಮಾಡಿದ್ದಾರೆ. ಈ ವಿಚಾರವನ್ನು ಸುದೀಪ್ ಆಪ್ತರು ಹೇಳಿದ್ದಾರೆ. 

ಟ್ರೋಲ್‌ಗಳಿಗೆ ಉತ್ತರಿಸುವಷ್ಟು ಪುರುಸೊತ್ತಿಲ್ಲ: ರಶ್ಮಿಕಾ ಮಂದಣ್ಣ

Scroll to load tweet…

ಶ್ರೀ ಮುರಳಿ ನಟಿಸುತ್ತಿರುವ ಮದಗಜ ಚಿತ್ರದಲ್ಲಿ ವಿಜಯಲಕ್ಷ್ಮಿಗೆ ಅವರಿಗೆ ಪಾತ್ರವೊಂದನ್ನು ನೀಡಲು ಚಿತ್ರತಂಡ ನಿರ್ಧರಿಸಿದೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಶೂಟಿಂಗ್ ನಲ್ಲಿ ಭಾಗಿಯಾಗಲಿದ್ದಾರೆ.