ಸೀತಾರಾಮ ಸೀರಿಯಲ್​ನ ಕೊನೆಯ ದಿನದ ಶೂಟಿಂಗ್​ನಲ್ಲಿ ಸಂತೋಷದಿಂದ ಮಾಡಿದ್ದ ಪಾನಿಪುರಿ ಪಾರ್ಟಿ, ಕೊನೆಗೆ ಕಣ್ಣೀರಿನ ಕೇಕ್​ ಪಾರ್ಟಿಯಾಯಿತು ಎನ್ನುವ ವಿಡಿಯೋ ಪ್ರಿಯಾ ಪಾತ್ರಧಾರಿ ಮೇಘನಾ ಶಂಕರಪ್ಪ ಶೇರ್​ ಮಾಡಿಕೊಂಡಿದ್ದಾರೆ.

ಕಳೆದ ಎರಡೂವರೆ ವರ್ಷಗಳಿಂದ ಲಕ್ಷಾಂತರ ವೀಕ್ಷಕರನ್ನು ರಂಜಿಸಿದ್ದ ಸೀತಾರಾಮ ಸೀರಿಯಲ್ ಮುಗಿದಿದೆ. ಕೊನೆಯ ದಿನದ ಶೂಟಿಂಗ್​ನಲ್ಲಿ ನಡೆದ ಘಟನೆಗಳನ್ನು ಹಲವು ಕಲಾವಿದರ ಇದಾಗಲೇ ಶೇರ್​ ಮಾಡಿಕೊಂಡಿದ್ದಾರೆ. ಆದರೆ ಇದೀಗ ಪ್ರಿಯಾ ಪಾತ್ರಧಾರಿ ಮೇಘನಾ ಶಂಕರಪ್ಪ ಅವರು, ಕೊನೆಯ ದಿನ ಪಾನೀಪುರಿ ಪಾರ್ಟಿ ಮಾಡಿರುವ ವಿಡಿಯೋ ಶೇರ್​ ಮಾಡಿದ್ದಾರೆ. ಹೇಗೆ ಕೊನೆಯ ದಿನ ಎಂಜಾಯ್​ ಮಾಡಿದ್ವಿ ಎನ್ನುವುದರ ಬಗ್ಗೆ ಅವರು ತಮ್ಮ ಯುಟ್ಯೂಬ್​ ಚಾನೆಲ್​ನಲ್ಲಿ ತಿಳಿಸಿದ್ದಾರೆ. ಆದರೆ ಆ ಪಾನೀಪುರಿಯ ಪಾರ್ಟಿಯಲ್ಲಿ ಇದ್ದ ಖುಷಿ ಕೊನೆಯ ಕ್ಷಣದಲ್ಲಿ ನಡೆದ ಕೇಕ್​ ಪಾರ್ಟಿಯನ್ನು ಹೇಗೆ ಕಣ್ಣೀರಿನ ಅಲೆಯಲ್ಲಿ ತೇಲಿಸಿತು ಎನ್ನುವುದನ್ನು ಇದರಲ್ಲಿ ನೋಡಬಹುದು. ರಾಮ್​, ಸಿಹಿ ಪಾತ್ರಧಾರಿ ಸೇರಿದಂತೆ ಉಳಿದ ಕಲಾವಿದರು ಹೇಗೆ ಭಾವುಕರಾಗಿದ್ದರು ಎನ್ನುವುದನ್ನು ನೋಡಬಹುದು. ಸಿಹಿ ಅಳುತ್ತಲೇ ಕೇಕ್​ ಮಾಡುತ್ತಿರುವುದನ್ನು ನೋಡಿದರೆ ಆಕೆಯಷ್ಟು ನೊಂದುಕೊಂಡಿದ್ದಳು ಎನ್ನುವುದನ್ನೂ ನೋಡಬಹುದಾಗಿದೆ.

ಅಷ್ಟಕ್ಕೂ ಒಂದು ಧಾರಾವಾಹಿ ಎಂದರೆ ಅದರಲ್ಲಿ ನಟಿಸುವ ಕಲಾವಿದರಿಗೆ ಅದೊಂದು ರೀತಿಯಲ್ಲಿ ಮನೆಯೇ ಆಗಿಬಿಟ್ಟಿರುತ್ತದೆ. ಅಲ್ಲಿ ಇರುವವರೆಲ್ಲರೂ ಕುಟುಂಬದವರೇ ಆಗಿಬಿಡುತ್ತಾರೆ. 3-4 ವರ್ಷಗಳ ವರೆಗೆ ದಿನಂಪ್ರತಿ ಮನೆಗಿಂತಲೂ ಹೆಚ್ಚಾಗಿ, ಮನೆಯ ಸದಸ್ಯರಿಗಿಂತಲೂ ಹೆಚ್ಚಾಗಿ ಆ ಸೀರಿಯಲ್​ ನಟ-ನಟಿಯರ ಜೊತೆ ಹೆಚ್ಚು ಕಾಲ ಕಳೆಯುವ ಕಾರಣದಿಂದ ಅದೊಂದು ರೀತಿಯ ಸುಮಧುರ ಬಾಂಧವ್ಯ ಮೂಡಿಬಿಟ್ಟಿರುತ್ತದೆ. ಹಲವಾರು ಕಲಾವಿದರು ಸೀರಿಯಲ್​ಗಳಲ್ಲಿ ತುಂಬಾ ಎಂಜಾಯ್​ ಮಾಡುತ್ತಾ, ಅಲ್ಲಿರುವ ನಟ-ನಟಿಯರ ಜೊತೆ ತಮಾಷೆ ಮಾಡುತ್ತಾ ಕಾಲ ಕಳೆಯುತ್ತಿರುತ್ತಾರೆ. ಆದ್ದರಿಂದ ಅವರಿಗೆ ಮನೆಯವರಂತೆಯೇ ಸಹ ನಟರೂ ತುಂಬಾ ಕ್ಲೋಸ್​ ಆಗಿರುತ್ತಾರೆ. ಇಂಥ ಸಂದರ್ಭಗಳಲ್ಲಿ ಆ ಸೀರಿಯಲ್​ ಮುಗಿಯುತ್ತೆ ಎಂದಾಗ ಹೇಳಿಕೊಳ್ಳಲಾಗದ ನೋವು, ಸಂಕಟ ಉಂಟಾಗುವುದು ಸಹಜ. ತಮ್ಮದೇ ಮನೆಯವರಿಂದ ದೂರ ಆಗ್ತಿದ್ದವೋ ಎನ್ನುವ ಭಾವನೆ ಬರುತ್ತದೆ.

ಕೆಲವು ಕಲಾವಿದರು ಈ ಸಂಕಟವನ್ನು ತಡೆದುಕೊಳ್ಳುತ್ತಾರೆ. ಮತ್ತೆ ಕೆಲವರಿಗೆ ಇನ್ನೊಂದು ಸೀರಿಯಲ್​ನಲ್ಲಿ ನಟಿಸುವ ಅವಕಾಶ ಇರುವುದಿಂದ ಅದರಲ್ಲಿ ಬಿಜಿಯಾಗಿ, ಹಿಂದಿನ ಸೀರಿಯಲ್​ ಮರೆತೇ ಬಿಡುತ್ತಾರೆ. ಮತ್ತೆ ಕೆಲವರು ತಾವೊಬ್ಬರು ಕಲಾವಿದರು ಅಷ್ಟೇ ಎನ್ನುವುದನ್ನು ಅರ್ಥ ಮಾಡಿಕೊಂಡಿರುತ್ತಾರೆ. ಮತ್ತೆ ಕೆಲವರಿಗೆ ಇದುಕಲಾವಿದನ ಲೈಫ್​ ಅಷ್ಟೇ ಎನ್ನುವುದು ತಿಳಿದಿರುತ್ತದೆ. ಆದರೆ ಕೆಲವರು ಹಾಗಲ್ಲ. ತುಂಬಾ ಭಾವನಾಜೀವಿಗಳಾಗಿ ಬಿಟ್ಟಿರುತ್ತಾರೆ. ಅದರಲ್ಲಿಯೂ ರಿಯಲ್​ ಲೈಫ್​ನಲ್ಲಿ ಏನೇನೋ ನೋವು ಅನುಭವಿಸಿದ ಕಲಾವಿದರ ವಿಷಯಕ್ಕೆ ಬಂದರೆ, ಸೀರಿಯಲ್​ ನಟರನ್ನೇ ತಮ್ಮ ಬಂಧುಗಳು ಎಂದುಕೊಂಡಿರುವ ಅವರಿಗೆ ಈ ವಿದಾಯ ಅಕ್ಷರಶಃ ನಲುಗಿಸಿಬಿಡುತ್ತದೆ.

ಸೀತಾರಾಮ ಸೀರಿಯಲ್​ನಲ್ಲಿ ತುಂಬಾ ನೋವು, ಸಂಕಟ ಅನುಭವಿಸುತ್ತಲೇ ಆ ದುಃಖವನ್ನು ನಿಯಂತ್ರಿಸಿಕೊಳ್ಳಲು ಆಗದವರು ಎಂದರೆ ರಾಮ್​ ಪಾತ್ರಧಾರಿ ಗಗನ್​ ಚಿನ್ನಪ್ಪ ಮತ್ತು ಸೀರಿಯಲ್​ನ ಸೆಂಟರ್​ ಆಫ್​ ಅಟ್ರಾಕ್ಷನ್​ ಸಿಹಿ-ಸುಬ್ಬಿ ರೀತು ಸಿಂಗ್​. ಸೀತಾ ಪಾತ್ರಧಾರಿ ವೈಷ್ಣವಿಗೆ ಮದುವೆ ಫಿಕ್ಸ್​ ಆಗಿದ್ದು, ಅದರ ಬಿಜಿಯಲ್ಲಿದ್ದಾರೆ. ಪ್ರಿಯಾ ಪಾತ್ರಧಾರಿ ಮೇಘನಾ ಶಂಕರಪ್ಪ ಅವರದ್ದೂ ಜಸ್ಟ್​ ಮ್ಯಾರೇಜ್​ ಆಗಿದೆ. ಅಶೋಕ್​ ಪಾತ್ರಧಾರಿ ಅಶೋಕ್​ ಶರ್ಮಾ ಇದಾಗಲೇ ಸಂದರ್ಶನವೊಂದರಲ್ಲಿ ತಮಗೂ ಸಂಕಟ ಆಗಿದ್ದರೂ ಅದನ್ನು ಮ್ಯಾಜೇಜ್ ಮಾಡಿದೆ ಎಂದಿದ್ದಾರೆ. ಉಳಿದ ಕಲಾವಿದರು ಹಿರಿಯ ಕಲಾವಿದರಾಗಿದ್ದು, ಅವರಿಗೆ ಇದಾಗಲೇ ಸಾಕಷ್ಟು ಅನುಭವವಾಗಿದೆ. ಈ ಸೀರಿಯಲ್​ ದೊಡ್ಡ ಬ್ರೇಕ್​ ಕೊಟ್ಟಿರೋದು ರಾಮ್​ ಆಗಿರೋ ಗಗನ್​ ಮತ್ತು ಸಿಹಿ ಆಗಿರೋ ರೀತು ಸಿಂಗ್​ಗೆ. ಅದರಲ್ಲಿಯೂ ರೀತು ದೊಡ್ಡ ಮಟ್ಟದ ಸ್ಟಾರ್​ ಆಗಿ ಬೆಳೆದುಬಿಟ್ಟಿದ್ದಾಳೆ.

YouTube video player