ಪವರ್ ಸ್ಟಾರ್ ಹೇರ್ ಸ್ಟೈಲ್’ಗೆ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಅಧ್ಯಕ್ಷರ ಆಕ್ಷೇಪ
ಕನ್ನಡದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ವಿರುದ್ಧ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್ ಗೌಡ ತಮ್ಮ ಫೇಸ್ ಬುಕ್ ಖಾತೆಯ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು : ಕನ್ನಡದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ವಿರುದ್ಧ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್ ಗೌಡ ತಮ್ಮ ಫೇಸ್ ಬುಕ್ ಖಾತೆಯ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.
ಇದಕ್ಕೆ ಕಾರಣವಾಗಿದ್ದು, ನಟ ಪುನೀತ್ ರಾಜಕುಮಾರ್ ಅವರು ತಮ್ಮ ಹೊಸಚಿತ್ರಕ್ಕಾಗಿ ಹೇರ್ ಸ್ಟೈಲ್ನಲ್ಲಿ ಬದಲಾವಣೆ ಮಾಡಿರುವುದೇ ಆಗಿದೆ.
ನಿರ್ದೇಶಕ ಪವನ್ ಒಡೆಯರ್ ನಿರ್ದೇಶನದ ಹೊಸ ಚಿತ್ರಕ್ಕಾಗಿ ಪುನೀತ್ ಈ ರೀತಿಯ ಹೊಸ ಕೇಶ ವಿನ್ಯಾಸ ಮಾಡಿಸಿದ್ದಾರೆ. ಆದರೆ ಪುನೀತ್ ರಾಜಕುಮಾರ್ ಅವರಿಗೆ ಇದು ಬೇಕಿರಲಿಲ್ಲ ಎಂದು ರಮೇಶ್ ಗೌಡ ಬಹಿರಂಗವಾಗಿಯೇ ಹೇಳಿದ್ದಾರೆ.
ಏಕೆಂದರೆ ನಾವು ಪುನೀತ್ರಲ್ಲಿ ಡಾ. ರಾಜಕುಮಾರ್ ಅವರನ್ನ ಕಾಣುತ್ತಿದ್ದೇವೆ. ಅವರು ಸರಳವಾಗಿಯೇ ತಮ್ಮ ಚಿತ್ರಗಳಲ್ಲಿ ಕಾಣಿಸಿಕೊಂಡು ಜನಸಾಮಾನ್ಯರಿಗೆ, ಸಮಾಜಕ್ಕೆ ಒಳ್ಳೆಯ ಸಂದೇಶ ಕೊಟ್ಟಿದ್ದಾರೆ. ಆದರೆ ಚಿತ್ರ ಗೆಲ್ಲುವುದಕ್ಕೆ ಇಂತಹ ಗಿಮಿಕ್ ಬೇಕಿಲ್ಲ ಎಂದು ತಮ್ಮ ಕಾಮೆಂಟ್ನಲ್ಲಿ ತಿಳಿಸಿದ್ದಾರೆ.