ಮುಂಬಯಿ(ಸೆ.16): ಸಾಮಾಜಿಕ ಜಾಲತಾಣದಲ್ಲಿ ಕಮೆಂಟ್ ಮೂಲಕ ಎಲ್ಲರ ಕಾಲೆಳೆದ ಬಾಲಿವುಡ್‌ ನಟ ರಿಷಿ ಕಪೂರ್‌ ಮತ್ತೆ ವಿವಾದದಲ್ಲಿ ಸಿಲುಕಿದ್ದಾರೆ.

Add Asianetnews Kannada as a Preferred SourcegooglePreferred

ನಿನ್ನೆ ಮುಂಬೈನಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ಬಾಲಿವುಡ್‌‌ ತಾರೆಯರು ಸೇರಿದಂತೆ ರಾಜಕೀಯ ನಾಯಕರು ವಿಘ್ನ ನಿವಾರಕನಿಗೆ ಭಕ್ತಿಯಿಂದ ಪೂಜೆ ಸಲ್ಲಿಸಿ ಗಣೇಶನ ನಿಮಜ್ಜನದಲ್ಲಿ ನಿರತರಾಗಿದ್ದರು. ಈ ವೇಳೆ ರಿಶಿ ಕಪೂರ್‌ ಮಾಧ್ಯಮ ಪ್ರತಿನಿಧಿ ಮೇಲೆ ಹಲ್ಲೆ ಮಾಡಿದ್ದಾರೆ. ರಿಷಿ ಕಪೂರ್ ಮದ್ಯಪಾನ ಮಾಡಿದ್ದು, ಇದರಿಂದ ಸ್ಥಿಮಿತ ಕಳೆದುಕೊಂಡು ವರದಿಗಾರನೊಂದಿಗೆ ಅಸಭ್ಯವಾಗಿ ವರ್ತನೆ ಮಾಡಿ, ಆತನಿಗೆ ಕಪಾಳಮೋಕ್ಷ ಮಾಡಿದ್ದಾರೆ.

ಈ ವೇಳೆ ಪುತ್ರ ರಣಬೀರ್‌ ಕಪೂರ್‌ ಕೂಡ ಸ್ಥಳದಲ್ಲಿ ಉಪಸ್ಥಿತರಿದ್ದರು.