ರಾಕಿಂಗ್ ಸ್ಟಾರ್ ಯಶ್ ಅವರು ಮತ್ತೊಮ್ಮೆ ಮ್ಯಾಜಿಕ್ ಮಾಡಲಿದ್ದಾರೆ. ನಾವು ಹೇಳ್ತಾ ಇರುವುದು ಕೆಜಿಎಫ್ ಚಾಪ್ಟರ್ 2ದ ಕತೆ ಅಲ್ಲ.. ಇದು ಬೇರೆಯದೇ ಚಿತ್ರ.

ಬೆಂಗಳೂರು[ಜು. 30] ಪ್ರಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಜನ ಗಣ ಮನ’ ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ಕಾಣಿಸಿಕೊಳ್ಳುವುದು ಪಕ್ಕಾ ಆಗಿದೆ.

Add Asianetnews Kannada as a Preferred SourcegooglePreferred

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ತೆಲುಗು ಸ್ಟಾರ್ ಮಹೇಶ್ ಬಾಬು ಜನ ಗಣ ಮನದಲ್ಲಿ ಕಾಣಿಸಿಕೊಳ್ಳಬೇಕಿತ್ತು. ಯಶ್ ಅವರೊಂದಿಗೆ ಬೆಂಗಳೂರಿನಲ್ಲಿಯೇ ಎರಡು ಸಾರಿ ಮಾತುಕತೆ ನಡೆಸಿರುವ ಜಗನ್ನಾಥ್ ಎಲ್ಲವನ್ನು ಫೈನಲ್ ಮಾಡಿಕೊಂಡಿದ್ದಾರೆ. ಕೊನೆ ಹಂತದ ಮಾತುಕತೆಗೆ ಇನ್ನೊಮ್ಮೆ ಬರುವ ಸಾಧ್ಯತೆ ಇದೆ.

ಕೆಜಿಎಫ್‌-2 ಟೀಂನಿಂದ ಬಿಗ್ ನ್ಯೂಸ್; ಕುತೂಹಲ ಮೂಡಿಸಿದೆ ‘ಅಧೀರ’

ಕನ್ನಡ ಮತ್ತು ತೆಲುಗಿನಲ್ಲಿ ಚಿತ್ರ ನಿರ್ಮಾಣವಾಗಲಿದ್ದು ನಂತರ ಹಿಂದಿ ಮತ್ತು ತಮಿಳಿಗೆ ಡಬ್ ಆಗಲಿದೆ. ಸದ್ಯ ಯಶ್ ತಮ್ಮ ಕೆಜಿಎಫ್ ಚಾಪ್ಟರ್-2 ನಲ್ಲಿ ಬಿಸಿಯಾಗಿದ್ದಾರೆ.