ನಾನು ಆರೋಗ್ಯವಾಗಿದ್ದೇನೆ; ಸಾವಿನ ವದಂತಿಗೆ ಸ್ವತಃ ದ್ವಾರಕೀಶ್ ಸ್ಪಷ್ಟನೆ
ಹಿರಿಯ ನಟ ದ್ವಾರಕೀಶ್ ಆರೋಗ್ಯದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ವದಂತಿ | ದ್ವಾರಕೀಶ್ ಆರೋಗ್ಯವಾಗಿದ್ದಾರೆ ಎಂದು ಕುಟುಂಬದ ಮೂಲಗಳಿಂದ ಸ್ಪಷ್ಟನೆ
ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಆರೋಗ್ಯದಲ್ಲಿ ಏರುಪೇರಾಗಿದೆ ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ದ್ವಾರಕೀಶ್ ಆಪ್ತ ಚೈತನ್ಯ ಸ್ಪಷ್ಟನೆ ಕೊಟ್ಟಿದ್ದಾರೆ.
Dwarakish sir is fine. God bless. Please don't entertain any rumors about his condition.
— Chaitanya KM (@kmchaitanya) July 15, 2019
ದ್ವಾರಕೀಶ್ ಅವರಿಗೆ ಏನೂ ಆಗಿಲ್ಲ. ದೇವರ ದಯೆಯಿಂದ ಆರೋಗ್ಯವಾಗಿದ್ದಾರೆ. ಅವರ ಆರೋಗ್ಯದ ಬಗ್ಗೆ ಹರಿದಾಡುತ್ತಿರುವ ಸುದ್ದಿ ಸುಳ್ಳು. ಯಾರೂ ಇಂತಹ ಸುದ್ದಿಗಳನ್ನು ನಂಬಬಾರದು ಎಂದಿದ್ದಾರೆ. ಸ್ವತಃ ದ್ವಾರಕೀಶ್ ಅವರೇ, ನಾನಿನ್ನೂ ಬದುಕಿದ್ದೇನೆ. ಆರೋಗ್ಯವಾಗಿದ್ದೇನೆ’ ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.
"
ನೀ ಬರೆದ ಕಾದಂಬರಿ ಇವರ ನಿರ್ದೇಶನದ ಮೊದಲ ಚಿತ್ರ. ಸಿಂಗಾಪುರದಲ್ಲಿ ರಾಜಾ ಕುಳ್ಳ ಸಿನಿಮಾದಲ್ಲಿ ವಿಷ್ಣುವರ್ಧನ್ ಜೊತೆ ಅಭಿನಯಿಸಿದ್ದರು. ಕನ್ನಡ ಚಿತ್ರರಂಗದಲ್ಲಿ ಈ ಸಿನಿಮಾ ಸಿಕ್ಕಾಪಟ್ಟೆ ಫೇಮಸ್. ಗುರು ಶಿಷ್ಯರು, ಪ್ರಚಂಡ ಕುಳ್ಳ, ಮಾತು ತಪ್ಪದ ಮಗ, ಆಟೋ ರಾಜಾ. ಸಿಂಹದ ಮರಿ ಸೈನ್ಯ ಸೇರಿದಂತೆ 300 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. 50 ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ.