ನಿತೀಶ್ ತಿವಾರಿ ನಿರ್ದೇಶನದ 'ರಾಮಾಯಣ' ಭಾರತದ ಅತಿದೊಡ್ಡ ಬಜೆಟ್ ಚಿತ್ರವಾಗಲಿದೆ. ಈ ಚಿತ್ರದಲ್ಲಿ ರಣಬೀರ್ ಕಪೂರ್ ರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ ನಟಿಸುತ್ತಿದ್ದಾರೆ. ಆದರೆ, ಸಾಯಿ ಪಲ್ಲವಿ ಆಯ್ಕೆ ಇದೀಗ ವಿವಾದಕ್ಕೆ ಕಾರಣವಾಗಿದೆ.

ನಿತೀಶ್ ತಿವಾರಿ ನಿರ್ದೇಶನದ 'ರಾಮಾಯಣ' ಭಾರತದ ಅತಿದೊಡ್ಡ ಬಜೆಟ್ ಚಿತ್ರವಾಗಲಿದೆ. ಈ ಚಿತ್ರದಲ್ಲಿ ರಣಬೀರ್ ಕಪೂರ್ ರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ ಮತ್ತು ಕೆಜಿಎಫ್ ಖ್ಯಾತಿಯ ಯಶ್ ರಾವಣನಾಗಿ ನಟಿಸುತ್ತಿದ್ದಾರೆ. ಆದರೆ, ಸಾಯಿ ಪಲ್ಲವಿ ಆಯ್ಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. ನಿತೀಶ್ ತಿವಾರಿ ನಿರ್ದೇಶನದ 'ರಾಮಾಯಣ' ಸಿನಿಮಾ, ಭಾರತೀಯ ಚಿತ್ರರಂಗದಲ್ಲೇ ಅತಿ ದೊಡ್ಡ ಬಜೆಟ್‌ನ ಚಿತ್ರ ಅನ್ನೋ ಹೆಗ್ಗಳಿಕೆಯೊಂದಿಗೆ ಸಿದ್ಧವಾಗುತ್ತಿದೆ. ಈ ಚಿತ್ರದಲ್ಲಿ ರಣಬೀರ್ ಕಪೂರ್ ರಾಮನಾಗಿ ಮತ್ತು ಸಾಯಿ ಪಲ್ಲವಿ ಸೀತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಮಿತಾ ಮಲ್ಹೋತ್ರಾ ನಿರ್ಮಾಣದ ಈ ಸಿನಿಮಾ ಈ ವರ್ಷದ ದೀಪಾವಳಿಗೆ ತೆರೆಗೆ ಬರುವ ಸಾಧ್ಯತೆ ಇದೆ. ಇನ್ನು, ರಾಕಿಂಗ್ ಸ್ಟಾರ್ ಯಶ್ ರಾವಣನ ಪಾತ್ರದಲ್ಲಿ, ರವಿ ದುಬೆ ಲಕ್ಷ್ಮಣನಾಗಿ ಮತ್ತು ಸನ್ನಿ ಡಿಯೋಲ್ ಹನುಮಂತನಾಗಿ ನಟಿಸುತ್ತಿದ್ದಾರೆ. ಆದರೆ, ಈಗ ಈ ಚಿತ್ರದ ನಾಯಕಿ ಸಾಯಿ ಪಲ್ಲವಿ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದ ಸೈಬರ್ ದಾಳಿ ಶುರುವಾಗಿದೆ. "ಹಿಂದಿ ಸರಿಯಾಗಿ ಮಾತಾಡೋಕೆ ಬರದ ಸಾಯಿ ಪಲ್ಲವಿಯನ್ನ ಯಾಕೆ ಸೀತೆಯ ಪಾತ್ರಕ್ಕೆ ನಿತೀಶ್ ತಿವಾರಿ ಆಯ್ಕೆ ಮಾಡಿದ್ರು?" ಅಂತ ನೆಟ್ಟಿಗರು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ನಟನೆಗೆ ಭಾಷೆ ಮುಖ್ಯವಲ್ಲ

ಈ ಹಿಂದೆ, ರಾಮನ ಪಾತ್ರಧಾರಿ ರಣಬೀರ್ ಕಪೂರ್ ಆಯ್ಕೆ ಬಗ್ಗೆಯೂ ವಿವಾದ ಎದ್ದಿತ್ತು. "ಮಾಂಸಾಹಾರ ಸೇವಿಸುವ ರಣಬೀರ್‌ನನ್ನು ಯಾಕೆ ರಾಮನ ಪಾತ್ರಕ್ಕೆ ಹಾಕಿಕೊಂಡಿದ್ದೀರಿ?" ಎಂದು ಹಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ಸಾಯಿ ಪಲ್ಲವಿ ಪರವಾಗಿಯೂ ಅನೇಕರು ಧ್ವನಿ ಎತ್ತಿದ್ದಾರೆ. "ನಟನೆಗೆ ಭಾಷೆ ಮುಖ್ಯವಲ್ಲ" ಎಂದು ಹಲವರು ಕಮೆಂಟ್ ಮಾಡುತ್ತಿದ್ದಾರೆ. ಅಷ್ಟೇ ಅಲ್ಲ, "ಮೂಲ ರಾಮಾಯಣ ಇದ್ದಿದ್ದು ಸಂಸ್ಕೃತದಲ್ಲಿ ಅಲ್ವಾ? ಹಾಗಾಗಿ ಇಲ್ಲಿ ಹಿಂದಿ ಭಾಷೆಯದ್ದೇನು ಸಮಸ್ಯೆ?" ಎಂದು ಕೆಲವರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

Scroll to load tweet…

ಈ ಚಿತ್ರಕ್ಕೆ ಎ.ಆರ್. ರೆಹಮಾನ್ ಜೊತೆಗೆ ವಿಶ್ವಪ್ರಸಿದ್ಧ ಸಂಗೀತ ನಿರ್ದೇಶಕ ಹ್ಯಾನ್ಸ್ ಜಿಮ್ಮರ್ ಕೂಡ ಕೈಜೋಡಿಸಿರುವುದು ಪ್ರೇಕ್ಷಕರ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ಶ್ರೀಧರ್ ರಾಘವನ್ ಮತ್ತು ನಿತೀಶ್ ತಿವಾರಿ ಸೇರಿ ಚಿತ್ರಕಥೆ ಬರೆದಿದ್ದಾರೆ. ವರದಿಗಳ ಪ್ರಕಾರ, ಮೊದಲ ಭಾಗ ಈ ವರ್ಷದ ದೀಪಾವಳಿಗೆ ಮತ್ತು ಎರಡನೇ ಭಾಗ ಮುಂದಿನ ವರ್ಷ ಬಿಡುಗಡೆಯಾಗಲಿದೆ. ಈ ಚಿತ್ರಕ್ಕೆ ಸುಮಾರು 875 ಕೋಟಿ ರೂಪಾಯಿ ಬಜೆಟ್ ಅಂದಾಜಿಸಲಾಗಿದೆ.