ಸೀತಾರಾಮ ಸೀರಿಯಲ್​ ಸೂಪರ್​ ಜೋಡಿಯಾಗಿದ್ದ ವೈಷ್ಣವಿ ಗೌಡ ಮತ್ತು ಗಗನ್​ ಚಿನ್ನಪ್ಪ ಅವರ ಕೆಮೆಸ್ಟ್ರಿಯನ್ನು ಅಭಿಮಾನಿಗಳು ಮೆಚ್ಚಿಕೊಂಡಿದ್ದರು. ವೈಷ್ಣವಿ ಅವರ ಮದುವೆಯಾಗಿದ್ದು, ಈಗ ಗಗನ್​ ಅವರ ಮದ್ವೆ ಯಾವಾಗ ಎಂದು ಕೇಳ್ತಿರೋ ನಡುವೆಯೇ ನಟ ಪೋಸ್ಟ್​ ಒಂದನ್ನು ಶೇರ್​ ಮಾಡಿದ್ದಾರೆ. ಏನಿದೆ ಅದರಲ್ಲಿ? 

ಸೀತಾರಾಮ ಸೀತಾ ಉರ್ಫ್​ ನಟಿ ವೈಷ್ಣವಿ ಗೌಡ ಸದ್ಯ ಪತಿಯ ಜೊತೆ ಬಿಜಿಯಾಗಿದ್ದಾರೆ. ಆದರೆ, ವೈಷ್ಣವಿ ಅವರು ಅನುಕೂಲ್​ ಎನ್ನುವವರ ಜೊತೆ ಎಂಗೇಜ್​ಮೆಂಟ್​ ಆಗುವುದಕ್ಕೂ ಮುನ್ನ ಅವರ ಮತ್ತು ಸೀತಾರಾಮ ಸೀರಿಯಲ್​ ರಾಮ್​ ಅರ್ಥಾತ್​ ಗಗನ್​ ಚಿನ್ನಪ್ಪ ಅವರು ಮದ್ವೆಯಾದರೆ ಎಷ್ಟು ಚೆನ್ನಾಗಿರತ್ತೆ ಎಂದು ಹೇಳುತ್ತಲೇ ಬಂದವರು ಅಭಿಮಾನಿಗಳು. ಅಷ್ಟಕ್ಕೂ ಸೀರಿಯಲ್​ಗಳಲ್ಲಿ ಒಂದು ಜೋಡಿ ಇಷ್ಟ ಆಯ್ತು ಎಂದರೆ ರಿಯಲ್​ ಲೈಫ್​ನಲ್ಲಿಯೂ ಅವರು ಮದ್ವೆಯಾಗಲಿ ಎಂದು ಬಯಸುವವರೇ ಹಲವರು. ಅದೇ ರೀತಿ ವೈಷ್ಣವಿ ಮತ್ತು ಗಗನ್​ ಅವರ ಜೋಡಿ, ಕೆಮೆಸ್ಟ್ರಿ ಫ್ಯಾನ್ಸ್​ಗೆ ಇಷ್ಟವಾಗಿದೆ. ಅವರಿಬ್ಬರು ಹಲವಾರು ರೀಲ್ಸ್​ಗಳನ್ನು ಒಟ್ಟಿಗೇ ಮಾಡುತ್ತಲೇ ಇದ್ದಾರೆ. ಹೀಗೆ ಮಾಡಿದಾಗಲೆಲ್ಲಾ ಇವರಿಬ್ಬರ ನಡುವೆ ಏನೋ ನಡೆಯುತ್ತಿದೆ ಎಂದವರೇ ಹೆಚ್ಚು. ಆದರೆ ಅವರಿಬ್ಬರೂ ಇದಕ್ಕೆ ತಲೆ ಕೆಡಿಸಿಕೊಂಡವರಲ್ಲ. ಕೊನೆಗೆ, ವೈಷ್ಣವಿ ಮದುವೆಯ ಬಗ್ಗೆ ಏಕಾಏಕಿ ನ್ಯೂಸ್​ ಕೊಟ್ಟರು.

ಸೀತಾರಾಮ ಸೀರಿಯಲ್​ ಬಳಿಕ ಇದೀಗ ರಾಮ್​ ಪಾತ್ರಧಾರಿ ಅರ್ಥಾತ್​ ಗಗನ್​ ಚಿನ್ನಪ್ಪ ಅವರು ಏನು ಮಾಡುತ್ತಿದ್ದಾರೆ ಎನ್ನುವ ಕುತೂಹಲ ಅವರ ಅಭಿಮಾನಿಗಳದ್ದು. ಆದರೆ ಸದ್ಯ ಅವರು ಈ ಬಗ್ಗೆ ಅಪ್​ಡೇಟ್​ ನೀಡಿಲ್ಲ. ಬದಲಾಗಿ, ಥಹರೇವಾರಿ ತಿನಿಸುಗಳ ಜೊತೆ ಫೋಟೋ ಒಂದನ್ನು ಶೇರ್​ ಮಾಡಿಕೊಂಡಿದ್ದಾರೆ. ಇದು ಅಭಿಮಾನಿಗಳ ಕುತೂಹಲವನ್ನು ಹೆಚ್ಚಿಸಿದೆ. ಸರಿಯಾಗಿ ಊಟ ಮಾಡದಿದ್ದರೆ ಚೆನ್ನಾಗಿ ಯೋಚಿಸಲು, ಚೆನ್ನಾಗಿ ಪ್ರೀತಿಸಲು, ಚೆನ್ನಾಗಿ ನಿದ್ದೆ ಮಾಡಲು ಸಾಧ್ಯವಿಲ್ಲ ಎನ್ನುವ ಕ್ಯಾಪ್ಷನ್​ ಕೊಡುವ ಮೂಲಕ ವಿಭಿನ್ನ ರೀತಿಯ ಆಹಾರಗಳನ್ನು ಎದುರಿಗೆ ಇರಿಸಿಕೊಂಡಿದ್ದಾರೆ. ಅಷ್ಟಕ್ಕೂ ಒಬ್ಬರೇ ತಿನ್ನುತ್ತೀರಾ ಎಂದು ಹಲವರು ಅವರಿಗೆ ತಮಾಷೆ ಮಾಡಿದ್ದಾರೆ.

ಗಗನ್​ ಅವರ ಮದುವೆ ಯಾವಾಗ ಎನ್ನುವ ಪ್ರಶ್ನೆ ಈಗ ಅಭಿಮಾನಿಗಳದ್ದು, ಸೀತಾರದ್ದು ಆಯ್ತು, ಈಗ ಗಗನ್​ ಅವರ ಮೇಲೆ ಅಭಿಮಾನಿಗಳ ದೃಷ್ಟಿ ಹರಿದಿದೆ. ಗಗನ್ ಈ ಹಿಂದೆ, ತಮಗೆ ಬ್ರೇಕಪ್​ ಆಗಿದ್ದ ವಿಷಯ ತಿಳಿಸಿದ್ದರು. ವೈಷ್ಣವಿ ಅವರಿಗೆ ಇನ್ನೂ ಮದುವೆಯಾಗಿಲ್ಲದ ಹಿನ್ನೆಲೆಯಲ್ಲಿ ನಿಜ ಜೀವನದಲ್ಲಿಯೂ ಇಬ್ಬರೂ ಜೊತೆಯಾಗಲಿ ಎಂದು ಬಯಸಿದ್ದರು. ಇನ್ನು ರಾಮ್​ ಪಾತ್ರಧಾರಿ ಗಗನ್​ ಚಿನ್ನಪ್ಪ ಕುರಿತು ಹೇಳುವುದಾದರೆ, ಕೊಡಗು ಮೂಲದ ಗಗನ್​, ಬಣ್ಣ ಲೋಕಕ್ಕೆ ಎಂಟ್ರಿ ಕೊಡುವ ಮೊದಲದು ಎರಡು ವರ್ಷ ಓಮನ್‌ ದೇಶದಲ್ಲಿ ಅದಾದ ಬಳಿಕ ಒಂದು ವರ್ಷ ಅಬುದಾಬಿಯಲ್ಲಿ ಕೆಲಸ ಮಾಡಿದ್ದರು. ಶಿಕ್ಷಣ ಮುಗಿಸಿದ ಬಳಿಕ ಕೆಲಸಕ್ಕೆ ಸೇರಿದ್ದವರು. ವಿದೇಶಗಳಲ್ಲಿ ಕೆಲಸ ಮಾಡಿದ ಸಂದರ್ಭದಲ್ಲಿ ಅವರ ಒಂದು ಫೋಟೋಶೂಟ್​ ಅವರನ್ನು ಬಣ್ಣದ ಲೋಕಕ್ಕೆ ಬರುವಂತೆ ಮಾಡಿತು. 2014 ರಲ್ಲಿ ಫೋಟೋಶೂಟ್​ ಮಾಡಿಸಿ ಸೋಷಿಯಲ್​ ಮೀಡಿಯಾದಲ್ಲಿ ಹಾಕಿದ್ದರು. ಆಗ ಅವರಿಗೆ ಚಿತ್ರವೊಂದಕ್ಕೆ ಆಫರ್​ ಬಂದಿತ್ತು. ಬಣ್ಣದ ಲೋಕದ ಸೆಳೆತದಿಂದ ಅಬುದಾಬಿ ಬಿಟ್ಟು ಬೆಂಗಳೂರಿಗೆ ಬಂದರು.

ಚಿತ್ರದಲ್ಲಿ ನಟಿಸಿದರೂ ಅದು ರಿಲೀಸ್​ ಆಗಲೇ ಇಲ್ಲ. ಸೀರಿಯಲ್​ಗಳಲ್ಲಿ ಆಡಿಷನ್​ ಕೊಟ್ಟರೂ ಭಾಷೆ ಸರಿಯಿಲ್ಲವೆಂದು ರಿಜೆಸ್ಟ್​ ಆಗುತ್ತಿದ್ದಂತೆ. ನಂತರ ಬಣ್ಣದ ಲೋಕ ಬೇಡ ಎಂದು ಮಾರ್ಕೆಟಿಂಗ್‌ ಮ್ಯಾನೇಜರ್‌ ಆಗಿ ಕೆಲಸ ಶುರು ಮಾಡಿದರು. ಆದರೆ ಬಣ್ಣದ ಲೋಕದ ಸೆಳೆತ ಇದ್ದೇ ಇದ್ದು. ಮಂಗಳಗೌರಿ ಮದುವೆ ಸೀರಿಯಲ್‌ನಲ್ಲಿ ಅವಕಾಶ ಸಿಕ್ಕಿತು. ಈ ಧಾರಾವಾಹಿಯಲ್ಲಿ ಅವರು ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಮಿನಿ ಬಿಗ್ ಬಾಸ್​ಗೂ ಎಂಟ್ರಿ ಕೊಟ್ಟು ಈಗ ಸೀತಾರಾಮ ಸೀರಿಯಲ್​ ಮೂಲಕ ಕನ್ನಡ ಧಾರಾವಾಹಿ ಲೋಕದಲ್ಲಿ ಪೂರ್ಣಪ್ರಮಾಣದ ನಾಯಕರಾಗಿ ಮಿಂಚುತ್ತಿದ್ದಾರೆ. ತೆಲುಗು ಕಿರುತೆರೆಗೂ ಕಾಲಿಟ್ಟಿರೋ ಗಗನ್​ ಅವರು, ‘ಕೃಷ್ಣ ಮುಕುಂದ ಮುರಾರಿ’ ಸೀರಿಯಲ್​ನಲ್ಲಿ ನಟಿಸುತ್ತಿದ್ದಾರೆ. ಇದರಲ್ಲಿ ಅವವರು ಮುರಾರಿ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಪ್ರೇರಣಾ ಕಂಬಮ್, ಯಶ್ಮಿ ಗೌಡ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.