ಮುಖ್ಯಮಂತ್ರಿ, ಮೈಸೂರು-ಕೊಡಗು ಸಂಸದ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳನ್ನು ಎಚ್ಚರಿಸಲು  'ವಿ ನೀಡ್‌ ಎಮರ್ಜೆನ್ಸಿ ಹಾಸ್ಪಿಟಲ್‌ ಇನ್‌ ಕೊಡಗು' ಎಂಬ ಹ್ಯಾಶ್ ಟ್ಯಾಗ್‌ ಅಡಿಯಲ್ಲಿ ಟ್ವಿಟರ್‌ ಅಭಿಯಾನ ಶುರುವಾಗಿದ್ದು, ಜಿಲ್ಲೆಯ ಯುವ ಜನತೆ ಈ ಅಭಿಯಾನಕ್ಕೆ ದೊಡ್ಡ ಪ್ರಮಾಣದಲ್ಲಿ ಕೈ ಜೋಡಿಸಿದ್ದಾರೆ.

ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆ ಮುಂದಿಟ್ಟುಕೊಂಡು ಕೊಡಗಿನಲ್ಲೂ ಟ್ವಿಟರ್‌ ಅಭಿಯಾನಕ್ಕೆ ಚಾಲನೆ ಸಿಕ್ಕಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

'ಅಗ್ನಿಸಾಕ್ಷಿ' ಧಾರಾವಾಹಿಯಿಂದ ಹೊರಬಿದ್ದ ಸಿದ್ಧಾರ್ಥ್

ಐಶಾರಾಮಿ ರೆಸಾರ್ಟ್, ಹೋಮ್ ಸ್ಟೇ ಇದೆ. ಆದ್ರೆ ಸುಸಜ್ಜಿತ ಆಸ್ಪತ್ರೆ ಇಲ್ಲ. #WeNeedEmergencyHospitalInKodagu ಎಂದು ಅಭಿಯಾನ ಆರಂಭವಾಗಿದೆ.

ಮುಖ್ಯಮಂತ್ರಿ, ಮೈಸೂರು-ಕೊಡಗು ಸಂಸದ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳನ್ನು ಎಚ್ಚರಿಸಲು 'ವಿ ನೀಡ್‌ ಎಮರ್ಜೆನ್ಸಿ ಹಾಸ್ಪಿಟಲ್‌ ಇನ್‌ ಕೊಡಗು' ಎಂಬ ಹ್ಯಾಶ್ ಟ್ಯಾಗ್‌ ಅಡಿಯಲ್ಲಿ ಟ್ವಿಟರ್‌ ಅಭಿಯಾನ ಶುರುವಾಗಿದ್ದು, ಜಿಲ್ಲೆಯ ಯುವ ಜನತೆ ಈ ಅಭಿಯಾನಕ್ಕೆ ದೊಡ್ಡ ಪ್ರಮಾಣದಲ್ಲಿ ಕೈ ಜೋಡಿಸಿದ್ದಾರೆ.

ಟ್ವಿಟ್ಟರ್ ಖಾತೆ ಇಲ್ಲದವರು ಫೇಸ್‌ಬುಕ್ ಹಾಗೂ ವಾಟ್ಸಪ್‌ಗಳಲ್ಲಿ ಜಿಲ್ಲೆಯ ಯುವ ಸಮೂಹ ದೊಡ್ಡ ಸಂಖ್ಯೆಯಲ್ಲಿ ಈ ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. 

View post on Instagram

ನಟ ಶಿವರಾಜ್ ಕುಮಾರ್ ಈ ಅಭಿಯಾನಕ್ಕೆ ಸ್ಪಂದಿಸಿದ್ದಾರೆ. " ಕೊಡಗು ಬಗ್ಗೆ ನಮಗೆ ಹೆಮ್ಮೆಯಿದೆ. ಕೊಡಗಿಗೆ ಸುಸಜ್ಜಿತ ಆಸ್ಪತ್ರೆ ಇಲ್ಲವೆಂದು ಕೇಳಲ್ಪಟ್ಟೆ. ನೀವ್ಯಾರೂ ನೊಂದುಕೊಳ್ಳುವ ಅಗತ್ಯ ಇಲ್ಲ. ನಾವೆಲ್ಲಾ ನಿಮ್ಮ ಜೊತೆಗಿದ್ದೇವೆ. ಚಿತ್ರರಂಗದಿಂದ ಸರ್ಕಾರಕ್ಕೆ ಒತ್ತಾಯಪಡಿಸುತ್ತೇವೆ. ನೀವು ಹೆದರಬೇಡಿ. ನಾವಿದ್ದೇವೆ ಎಂದು" ಶಿವಣ್ಣ ಕೊಡಗಿನ ಜನತೆಗೆ ಹೇಳಿದ್ದಾರೆ.