ನವರಸ ನಾಯಕ ಜಗ್ಗೇಶ್ ತಮ್ಮ ಹುಟ್ಟೂರಿನಲ್ಲಿ ಕುಲದೈವ ಕಾಲಭೈರನಿಗೆ ಕಾಯಕಲ್ಪ ನೀಡುವ ದೈವ ಭಕ್ತಿ ಮೆರೆದಿದ್ದಾರೆ. ಹುಟ್ಟೂರಾದ ತುಮಕೂರು‌‌ ಜಿಲ್ಲೆ ತುರುವೇಕೆರೆ ತಾಲೂಕಿನ ಆನಗೋಡು ಗ್ರಾಮದಲ್ಲಿ ದೇವಾಲಯ ಜೀರ್ಣೋದ್ಧಾರ ಮಾಡಿದ್ದಾರೆ.

ತುಮಕೂರು[ಫೆ.08] ನವರಸ ನಾಯಕ ಜಗ್ಗೇಶ್ ಅವರ ಒಲವು ಅಧ್ಯಾತ್ಮದತ್ತ ಸಾಗಿದೆ. ತಮ್ಮ ಮುತ್ತಾತನ ಕಾಲದಿಂದಲೂ ಪೂಜಿಸಿಕೊಂಡು ಬಂದ ಕಾಲ ಭೈರವ ದೇವರಿಗೆ ನೂತನ ದೇವಸ್ಥಾನ ಕಟ್ಟಿ ಲೋಕಾರ್ಪಣೆ ಮಾಡಿದ್ದಾರೆ. ಗುರುವಾರ ಮತ್ತು ಶುಕ್ರವಾರ ಎರಡು ದಿನಗಳ ಕಾಲ ವಿವಿಧ ವಿವಿಧ ಪೂಜಾ ವಿಧಾನಗಳೊಂದಿಗೆ ಕಳಸಾರೋಹಣ ಮಾಡಿ ದೇವಾಲಯ ಉದ್ಘಾಟನೆ ಮಾಡಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದೇವಾಲಯದ ಉದ್ಘಾಟನೆಗೆ ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್, ಚುಂಚನಗಿರಿ ಶಾಖಾ ಮಠದ ಸ್ವಾಮೀಜಿ ಪ್ರಸನ್ನನಾಥ ಸ್ವಾಮೀಜಿಯೂ ಆಗಮಿಸಿದ್ದರು.

ಜಗ್ಗೇಶ್‌ ಸಂಕಲ್ಪದ ಹಿಂದಿನ ಕತೆ: ಒಂದು ವರ್ಷದಿಂದ ನಟ ಜಗ್ಗೇಶ್ ತಮ್ಮ ಊರಿಗೆ ಹೋದಾಗ ದೇವಸ್ಥಾನ ಕಂಡು ನೂತನ ದೇವಸ್ಥಾನ ಕಟ್ಟಿಸುವ ಸಂಕಲ್ಪ ಮಾಡಿಕೊಂಡರು ಪುರೋಹಿತರನ್ನು ಸಂಪರ್ಕಿಸಿ ದೇವಸ್ಥಾನ ಕಟ್ಟುವ ಕಾರ್ಯದಲ್ಲಿ ತಲ್ಲೀನರಾದರು ಜ್ಯೋತಿಷಿಗಳ ಮಾರ್ಗದರ್ಶನದಂತೆ ಕಾಶಿ ಪಟ್ಟಣಕ್ಕೆ ಹೋಗಿ ಬಂದರು.

ಇದಾದ ಮೇಲೆ ಒಂದು ರಾತ್ರಿ ಚಾಂಡಾಲ ವೃತ್ತಿಯನ್ನ ಮಾಡೋ ಸಲುವಾಗಿ ಬೆಂಗಳೂರಿನ ಹರಿಶ್ಚಂದ್ರ ಘಾಟ್‌ನಲ್ಲಿ ಸಂಜೆ 7 ಗಂಟೆಯಿಂದ ಬೆಳಗಿನ ಜಾವ ನಾಲ್ಕೂವರೆ ವರೆಗೂ 11 ಶವ ಸಂಸ್ಕಾರದಲ್ಲಿ ಭಾಗಿಯಾಗಿಯಾದರು. ಮತ್ತೆ ಕಾಶಿಗೆ ತೆರಳಿ ರುದ್ರಾಭಿಷೇಕ ಮುಗಿಸಿ ಕಾಲಭೈರವೇಶ್ವರನ ಮುಂದೆ ನಿಂತು ಪ್ರಾರ್ಥನೆ ಮಾಡಿ ಕಾಲಿಗೊಂದು ಬಳೆ ಧರಿಸಿ ವ್ರತ ಕೈಗೊಂಡರು.

ಸದಾ ರಾಜಕೀಯ ಹಾಗೂ ಚಿತ್ರರಂಗದ ಕೆಲಸ ಕಾರ್ಯಗಳಲ್ಲಿ ಬ್ಯುಸಿ ಇರ್ತಿದ್ದ ಜಗ್ಗೇಶ್ ತಮ್ಮ ಹುಟ್ಟೂರಿನಲ್ಲಿ ದೇವಾಲಯ ಜೀರ್ಣೋದ್ಧಾರ ಮಾಡುವ ಮೂಲಕ ಮಾದರಿಯಾಗಿದ್ದಾರೆ.

Scroll to load tweet…