ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಸಂವಿಧಾನ ನಿರ್ಮಾತೃ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಪೋಟೋ ಇರುವುದನ್ನು ರಾಜಸ್ಥಾನ ಸರ್ಕಾರ ಕಡ್ಡಾಯ ಮಾಡಿದೆ ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ. ಕಡ್ಡಾಯ ಮಾಡಿದ್ದು ನಿಜನಾ? 

ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಸಂವಿಧಾನ ನಿರ್ಮಾತೃ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಪೋಟೋ ಇರುವುದನ್ನು ರಾಜಸ್ಥಾನ ಸರ್ಕಾರ ಕಡ್ಡಾಯ ಮಾಡಿದೆ ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

fact Check: ಹತ್ರಾಸ್ ಅತ್ಯಾಚಾರ: ಠಾಕೂರರದ್ದು ಬಿಸಿ ರಕ್ತ ಎಂದರಾ ಯೋಗಿ ಆದಿತ್ಯನಾಥ್?

ಪತ್ರಿಕೆಯೊಂದರ ತುಣುಕನ್ನು ಪೋಸ್ಟ್‌ ಮಡಿ ಹೀಗೆ ಹೇಳಲಾಗುತ್ತಿದೆ. ಅದರಲ್ಲಿ ಸರ್ಕಾರಿ ಶಾಲಾ-ಕಾಲೇಜು, ಆಸ್ಪತ್ರೆ ಮತ್ತು ಕಚೇರಿಗಳಲ್ಲಿ ಅಂಬೇಡ್ಕರ್‌ ಫೋಟೋ ಕಟ್ಟಾಯ ಎಂದು ರಾಜಸ್ಥಾನ ಸರ್ಕಾರ ಆದೇಶಿಸಿ ಸುತ್ತೋಲೆ ಹೊರಡಿಸಿದೆ’ ಎಂದು ಹೇಳಲಾಗಿದೆ. ಈ ಪೋಸ್ಟ್‌ ಬುಕ್‌ನಲ್ಲಿ ಸಾವಿರಾರು ಬಾರಿ ಶೇರ್‌ ಆಗಿದೆ. ಆಜ್‌ ಸಮಾಜ್‌ ದಿನಪತ್ರಿಕೆ ಹೆಸರಿನಲ್ಲಿ ಈ ಸುದ್ದಿ ವೈರಲ್‌ ಆಗುತ್ತಿದೆ.

ಆರೆ ನಿಜಕ್ಕೂ ರಾಜಸ್ಥಾನ ಸರ್ಕಾರ ಅಂಬೇಡ್ಕರ್‌ ಫೋಟೋ ಕಡ್ಡಾಯ ಮಾಡಿದೆಯೇ ಎಂದು ಪರಿಶೀಲಿಸಿದಾಗ ಇದು ಸುಳ್ಳುಸುದ್ದಿ ಎಂಬುದು ಖಚಿತವಾಗಿದೆ. ಈ ಸುದ್ದಿಯ ಜಾಡು ಹಿಡಿದು ರಿವರ್ಸ್‌ ಇಮೇಜ್‌ ಪರಿಶೀಲಿಸಿದಾಗ 2018 ರ ಮಾಚ್‌ರ್‍ನಲ್ಲಿ ಸುದ್ದಿಸಂಸ್ಥೆಯೊಂದರಲ್ಲಿ ಪ್ರಕಟವಾದ ಈ ಕುರಿತ ವರದಿ ಪತ್ತೆಯಾಗಿದೆ.

ಅದರಲ್ಲಿ ಉತ್ತರ ಪ್ರದೇಶ ಸರ್ಕಾರ ಅಲ್ಲಿನ ಸರ್ಕಾರಿ ಕಚೇರಿಗಳಲ್ಲಿ ಏಪ್ರಿಲ್‌ 1, 2018ರ ವರೆಗೆ ಅಂಬೇಡ್ಕರ್‌ ಫೋಟೋ ಇರುವುದು ಕಡ್ಡಾಯ ಎಂದು ಆದೇಶ ಹೊರಡಿಸಿದ ಬಗ್ಗೆ ವರದಿ ಇದೆ. ಅದರ ಹೊರತಾಗಿ ರಾಜಸ್ಥಾನ ಸರ್ಕಾರ ಈ ಬಗ್ಗೆ ಆದೇಶಿಸಿದ ಬಗ್ಗೆ ಯಾವುದೇ ವರದಿಗಳೂ ಲಭ್ಯವಾಗಿಲ್ಲ. ಹಾಗಾಗಿ ಈ ಸುದ್ದಿ ಸುಳ್ಳು ಎಂಬುದು ಸ್ಪಷ್ಟ.

- ವೈರಲ್ ಚೆಕ್