ತಲಕಾವೇರಿಯಲ್ಲಿ ಒಂದು ನಿಮಿಷ ತಡವಾಗಿ ತೀರ್ಥರೂಪಿಣಿಯಾದ ಕಾವೇರಿ ಮಾತೆ!
ಬ್ರಹ್ಮಗಿರಿ ತಪ್ಪಲಿನ ಕಾವೇರಿ ಕ್ಷೇತ್ರದಲ್ಲಿ ಭಕ್ತರ ಹಷೋ೯ದ್ಘಾರದ ನಡುವೇ ಮಾತೆ ಕಾವೇರಿ ತೀರ್ಥಸ್ವರೂಪಿಣಿಯಾದಳು. ತುಲಾಲಗ್ನದಲ್ಲಿ ಬೆಳಗ್ಗೆ 7 ಗಂಟೆ 41 ನಿಮಿಷಕ್ಕೆ ಬ್ರಹ್ಮಕುಂಡಿಕೆಯಲ್ಲಿ ಕಾವೇರಿ ದರ್ಶನ ರೂಪ ತೋರಿದಳು.
ಕೊಡಗು (ಅ.17): ಬ್ರಹ್ಮಗಿರಿ ತಪ್ಪಲಿನ ಕಾವೇರಿ ಕ್ಷೇತ್ರದಲ್ಲಿ ಭಕ್ತರ ಹಷೋ೯ದ್ಘಾರದ ನಡುವೇ ಮಾತೆ ಕಾವೇರಿ ತೀರ್ಥಸ್ವರೂಪಿಣಿಯಾದಳು. ತುಲಾಲಗ್ನದಲ್ಲಿ ಬೆಳಗ್ಗೆ 7 ಗಂಟೆ 41 ನಿಮಿಷಕ್ಕೆ ಬ್ರಹ್ಮಕುಂಡಿಕೆಯಲ್ಲಿ ಕಾವೇರಿ ದರ್ಶನ ರೂಪ ತೋರಿದಳು. ಅಚ೯ಕರಿಂದ ಭಕ್ತರ ಮೇಲೆ ಕಾವೇರಿ ತೀಥ೯ ಸಿಂಪಡಣೆ ಮಾಡಲಾಯಿತು.
ಪ್ರಧಾನ ಅಚ೯ಕ ಪ್ರಶಾಂತ್ ಆಚಾರ್ ನೇತೖತ್ವದಲ್ಲಿ ಅಚ೯ಕ ಸಮೂಹದಿಂದ ಕಾವೇರಿ ಮಾತೆಗೆ ಸಾಂಪ್ರದಾಯಿಕ ಪೂಜೆ ನಡೆಸಲಾಯಿತು. ಮಂತ್ರಘೋಷದ ನಡುವೇ ತೀಥ೯ರೂಪಿಣಿಯಾಗಿ ಮಾತೆ ಕಾವೇರಿ ದಶ೯ನ ತೋರಿದಳು. ಇನ್ನು ಪುಪ್ಪಾಲಂಕಾರದಿಂದ ಕಾವೇರಿ ಕ್ಷೇತ್ರ ಕಂಗೊಳಿಸಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಕಾವೇರಿ ಕ್ಷೇತ್ರದಲ್ಲಿ ಭಕ್ತರು ಸೇರಿದ್ದರು. ದೇವಾಲಯದ ನನ್ನ ಪ್ರಸಾದ ಸಭಾಭವನದಲ್ಲಿ ಕೊಡಗು ಏಕೀಕರಣ ರಂಗದಿಂದ ಭಕ್ತರಿಗೆ ಉಪಹಾರ ವಿತರಣೆ ಮಾಡಲಾಯಿತು.
ಕಾವೇರಿ ತೀರ್ಥೋದ್ಭವ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು, ಶಾಸಕರಾದ ಎ ಎಸ್ ಪೊನ್ನಣ್ಣ, ಡಾ ಮಂತರ್ ಗೌಡ, ಸುಜಾಕುಶಾಲಪ್ಪ, ಸಕಾ೯ರದ ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ಅಧ್ಯಕ್ಷ ಧಮ೯ಜಾ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಪೊಲೀಸ್ ವರಿಷ್ಟಾಧಿಕಾರಿ ಕೆ ರಾಮರಾಜನ್, ಎಎಸ್ ಪಿ ಸುಂದರ್ ರಾಜ್ , ಹೆಚ್ಚುವರಿ ಜಿಲ್ಲಾಧಿಕಾರಿ ಐಶ್ವಯ೯ ಸೇರಿದಂತೆ ಅನೇಕರು ಭಾಗಿಯಾಗಿದ್ದರು.