ವಿಜಯನಗರ ಜಿಲ್ಲೆಯ ತಂಬ್ರಹಳ್ಳಿ ಸರ್ಕಾರಿ ಉರ್ದು ಶಾಲೆಯಲ್ಲಿ ಮುಸಲ್ಮಾನರು ಗಣಪತಿ ಕೂಡಿಸಿ ಪೂಜೆ ಸಲ್ಲಿಸುವ ಮೂಲಕ ಭಾವೈಕ್ಯೆತೆ ಸಾರಿದರು.

ವಿಜಯನಗರ (ಸೆ.24): ವಿಜಯನಗರ ಜಿಲ್ಲೆಯ ತಂಬ್ರಹಳ್ಳಿ ಸರ್ಕಾರಿ ಉರ್ದು ಶಾಲೆಯಲ್ಲಿ ಮುಸಲ್ಮಾನರು ಗಣಪತಿ ಕೂಡಿಸಿ ಪೂಜೆ ಸಲ್ಲಿಸುವ ಮೂಲಕ ಭಾವೈಕ್ಯೆತೆ ಸಾರಿದರು.

ಕಳೆದ ವರ್ಷವೂ ಗಣಪತಿಯನ್ನು ಕೂಡಿಸಿ ಪೂಜಿಸಿದ್ದ ಉರ್ದು ಶಾಲೆ ಈ ಬಾರಿಯೂ ಶಾಲೆಯಲ್ಲಿ ಗಣೇಶೋತ್ಸವ ಆಚರಿಸಿದ್ದಾರೆ. ವಿಶೇಷವೆಂದರೆ ಈ ಶಾಲೆಯಲ್ಲಿ ಬಹುತೇಕ ಮುಸ್ಲಿಂ ವಿದ್ಯಾರ್ಥಿಗಳೇ ವ್ಯಾಸಂಗ ಮಾಡುತ್ತಿದ್ದಾರೆ. ಈ ಹಿಂದೆ ಕೃಷ್ಣಾ ಜನ್ಮಾಷ್ಟಮಿಯನ್ನೂ ಆಚರಿಸಿದ್ದರು. ಇದೀಗ ಗಣಪನ ಪೂಜೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ಮೆರವಣಿಗೆ ಮೂಲಕ ಶಾಲೆಯ ಗಣಪತಿ ಮೂರ್ತಿ ವಿಗ್ರಹವನ್ನು ವಿಸರ್ಜನೆ ಮಾಡಿದ್ದಾರೆ. ಈ ವೇಳೆ ಮುಸ್ಲಿಂ ವಿದ್ಯಾರ್ಥಿಗಳಿಂದಲೇ ವಿಘ್ನ ವಿನಾ

ಹಿಂದೂ ಮುಸ್ಲಿಂ ಭಾವೈಕ್ಯತೆ ಸಾರುತ್ತಿರುವ ಶಿಕ್ಷಕ: ಅಲ್ಹಾಭಕ್ಷ ಕೈಯಲ್ಲಿ ಅರಳಿವೆ ನೂರಾರು ಗಣಪ ವಿಗ್ರಹ!ಯಕನ ಪೂಜೆ ಮಾಡಿ ವಿಸರ್ಜನೆ ಮಾಡಿರೋದು ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.