Asianet Suvarna News Asianet Suvarna News

ನವರಾತ್ರಿಯ 8ನೇ ದಿನದ ಮಹಾಗೌರಿ ಪೂಜೆ: ಗೌರಿ ತಪಸ್ಸು ಮಾಡುವಾಗ ಸಿಂಹ ಕಾದು ಕುಳಿತದ್ದೇಕೆ ?

ನವರಾತ್ರಿಯ ಎಂಟನೇ ದಿನದಂದು ಪೂಜಿಸಲಾಗುವ ಮಹಾಗೌರಿಯ ವಿಶೇಷವೇನು, ಈಕೆಯನ್ನು ಪೂಜಿಸುವುದು ಹೇಗೆ?

 

Know more about Navratris 8th day Devi Mahagowri  and worship methods
Author
Bengaluru, First Published Oct 12, 2021, 2:13 PM IST

ನವರಾತ್ರಿಯ(Navratri) ಎಂಟನೇ ದಿನ ಮಹಾಗೌರಿಗೆ ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ತಾಯಿ ಗೌರಿಯ(Gauri) ವಯಸ್ಸು ಯಾವಾಗಲೂ ಹದಿನಾರು ಆಗಿರುತ್ತದೆ. ಗೌರಿಯು ಗಿರಿಗಳ ಪುತ್ರಿ. ಅವಳು ಎತ್ತಿನ ಮೇಲೆ ಕುಳಿತಿರುತ್ತಾಳೆ. ಆಕೆಗೆ ನಾಲ್ಕು ಕೈಗಳು. ಒಂದು ಕೈಯಲ್ಲಿ ಢಮರು ಹಾಗೂ ಇನ್ನೊಂದು ಕೈಯಲ್ಲಿ ತ್ರಿಶೂಲ ಇರುತ್ತದೆ. ಶ್ವೇತ ವಸ್ತ್ರಧಾರಿಣಿಯಾಗಿರುವ ಗೌರಿ ದೇವಿಯ ಮುಖವು ಶಾಂತ ಸ್ವಭಾವವಾಗಿರುತ್ತದೆ. ಚಂದ್ರನ ತೇಜಸ್ಸು ಆಕೆಯ ಮುಖದಲ್ಲಿ ಲಾಸ್ಯವಾಡುತ್ತಿರುತ್ತದೆ. ಆಕೆ ಮತ್ತೊಂದು ಕೈಯ್ಯಲ್ಲಿ ಭಕ್ತರಿಗೆ ಆಶೀರ್ವಾದ ಮಾಡುತ್ತಿರುತ್ತಾಳೆ.

ಪಾರ್ವತಿ ದೇವಿಯು ಮನುಷ್ಯರ ಅವತಾರ ಎತ್ತಿ ಭೂಮಿಯಲ್ಲಿ ಜನಿಸಿದಳು. ಶಿವನ್ನು ಪಡೆಯುವುದು ಆ ಜನ್ಮದಲ್ಲಿ ಅವಳ ಗುರಿಯಾಗಿರುತ್ತದೆ. ನಾರದ ಮಹರ್ಷಿಗಳ ಸಲಹೆಯ ಮೇರೆಗೆ ಸುದೀರ್ಘ ತಪಸ್ಸಿಗೆ ಕುಳಿತ ಆಕೆಯು ಅನ್ನಾಹಾರ, ನೀರು ತ್ಯಜಿಸಿದಳು. ಸುದೀರ್ಘ ಕಾಲ ಆಕೆ ತಪಸ್ಸಿಗೆ ಕುಳಿತ ಕಾರಣ ಆಕೆಯ ಮೈಗೆ ಧೂಳು ಮತ್ತಿಕೊಂಡಿತು. ಬಳ್ಳಿಗಳು ಬೆಳೆದವು. ಸೂರ್ಯನ ವಿಪರೀತ ಶಾಖದಿಂದ ಆಕೆಯ ದೇಹವು ಬೆಂದುಹೋದಂತಾಯಿತು. ಆದರೂ ಆಕೆ ಸಾವಿರ ವರ್ಷಗಳ ಕಾಲ ಶಿವನಿಗಾಗಿ ಕಾದು ಕುಳಿತಳು.

ನವರಾತ್ರಿಯ ಒಂಭತ್ತು ಬಣ್ಣಗಳು, ಅವುಗಳ ವಿಶೇಷತೆ ಏನು ತಿಳಿಯಿರಿ

ಪಾರ್ವತಿಯ ಭಕ್ತಿಗೆ ಮೆಚ್ಚಿ ಪ್ರತ್ಯಕ್ಷನಾದ ಶಿವನು, ಆಕೆಯ ಸ್ಥಿತಿ ಕಂಡು ಗಂಗೆಯ(Ganga River) ಪವಿತ್ರ ಜಲವನ್ನು ಆಕೆಯ ಮೇಲೆ ಪ್ರೋಕ್ಷಣೆ ಮಾಡಿದಾಗ ಆಕೆಯ ಮುಖ ಮೊದಲಿಗಿಂತ ತೇಜಸ್ವಿಯಾಯಿತು. ಸ್ಪಟಿಕದ ಕಲ್ಲಿನಂತೆ ಹೊಳೆಯುತ್ತಿದ್ದ ಆಕೆಯ ಮುಖವು ಚಂದ್ರನ ಶಾಂತತೆಯನ್ನು ಹೊಂದಿತು. ಆಕೆಯು ಮಹಾಗೌರಿಯಾಗಿ ಹೊಸ ಜನ್ಮ ಎತ್ತಿದಳು. ಶಿವನು ಆಕೆಯ ಭಕ್ತಿಗೆ ಮೆಚ್ಚಿ ಆಕೆಯನ್ನು ವರಿಸಿದ.

ಇನ್ನೊಂದು ಪುರಾಣದ ಕತೆಯ ಪ್ರಕಾರ ತಾಯಿ ಗೌರಿಯು ತಪಸ್ಸು ಮಾಡುವಾಗ ಹಸಿದಿದ್ದ ಸಿಂಹವೊಂದು ಆಹಾರ ಅರಸಿ ಗೌರಿ ದೇವಿಯ ಬಳಿ ಬಂತು. ಆದರೆ, ಆಕೆ ತಪಸ್ಸು ಮಾಡುತ್ತಿರುವ ಕಾರಣ ಆ ಸಿಂಹವು ಅಲ್ಲಿಯೇ ಕಾದಿದ್ದು ಬಡಕಲಾಯಿತು. ತಾಯಿ ಗೌರಿ ಕಣ್ಣು ಬಿಟ್ಟಾಗ ಬಡಕಲಾಗಿದ್ದ ಸಿಂಹವನ್ನು ಕಂಡು ಕರಗಿಹೋದಳು. ಅಯ್ಯೋ ನಾನು ತಪಸ್ಸು ಮಾಡುವಾಗ ಈ ಸಿಂಹ ಆಹಾರ ಇಲ್ಲದೆ ಇಲ್ಲಿಯೇ ಕುಳಿತಿದೆಯಲ್ಲಾ ಎಂದು ನೊಂದು ಸಿಂಹವನ್ನು ತಾಯಿ ಗೌರಿಯು ತನ್ನ ವಾಹವನ್ನಾಗಿ ಮಾಡಿಕೊಂಡಳು. ಹಾಗಾಗಿಯೇ ತಾಯಿ ಗೌರಿಗೆ ಸಿಂಹ ಮತ್ತು ಎತ್ತು ಎರಡೂ ವಾಹನಗಳಾಗಿವೆ.

ಮಹಾಗೌರಿಯು ರಾಹುವಿನ ಅಧಿಪತಿಯಾಗಿದ್ದಾಳೆ. ರಾಹುವಿನ ಪೀಡೆಯಿಂದ ಆಗುವ ಅಹಿತಕರ ಘಟನೆಗಳು, ಕಾಟಗಳನ್ನು ತಪ್ಪಿಸಿ ತನ್ನ ಭಕ್ತರನ್ನು ಆಕೆ ಆಶೀರ್ವದಿಸುತ್ತಾಳೆ. ಗೌರಿಯ ಆಶೀರ್ವಾದದಿಂದ ಸಂಪತ್ತು, ಆಯುಷ್ಯದ ಜೊತೆಗೆ ಆಧ್ಯಾತ್ಮದ ಲಾಭಗಳೂ ಮನುಷ್ಯನಿಗೆ ದೊರೆಯುತ್ತದೆ. ನಮ್ಮ ಮನಸ್ಸಿನಲ್ಲಿರುವ ಗೊಂದಲಗಳನ್ನು ತಾಯಿ ಗೌರಿ ನಿವಾರಿಸಿ ಸ್ಪಷ್ಟ ಚಿತ್ರಣ ನೀಡುತ್ತಾಳೆ. ನಮ್ಮ ಹೃದಯಲ್ಲಿ ಆತ್ಮವಿಶ್ವಾಸ ತುಂಬಿ ಯಶಸ್ಸಿನ ಕಡೆಗೆ ದಾರಿ ತೋರುತ್ತಾಳೆ.

ಮಹಾಗೌರಿ ಪೂಜೆಯ ರೀತಿ

ಅಂದು ತಾಯಿ ಗೌರಿಯನ್ನು ಪೂಜಿಸಲು ರಾತ್ರಿ ಅರಳಿದ ಮಲ್ಲಿಗೆ(ರಾತ್ರಿ ಮಲ್ಲಿಗೆ)ಯನ್ನು ಬಳಸಲಾಗುತ್ತದೆ. ತಾಯಿಯನ್ನು ಶುದ್ಧ ಮನಸ್ಸು, ಭಕ್ತಿಯಿಂದ ಪೂಜಿಸಿ. ಗಣಪತಿ ಪ್ರಾರ್ಥನೆ ಮೂಲಕ ಪೂಜೆಯನ್ನು ಶುರು ಮಾಡಿ. ತಾಯಿ ಗೌರಿಗೆ ಷೋಡಶೋಪಚಾರ ಮಾಡಿ. ಆರತಿಯೊಂದಿಗೆ ಪೂಜೆ ಮುಗಿಸಿ.

ನಿಮ್ಮ ರಾಶಿಗೆ ನವರಾತ್ರಿ ದುರ್ಗಾದೇವಿಯ ಕೃಪೆ ಇದೆಯಾ? ಹಬ್ಬದ ರಾಶಿಫಲ ತಿಳಿಯಿರಿ

ತಾಯಿ ಗೌರಿಗೆ ಗುಲಾಬಿ ಬಣ್ಣವೆಂದರೆ ಪ್ರಿಯ. ಈ ದಿನದಂದು ತನ್ನ ಭಕ್ತರ ಎಲ್ಲಾ ಆಸೆಗಳನ್ನು ಈಡೇರಿಸುವ ಶಕ್ತಿ ಹೊಂದಿರುವ ಮಹಾಗೌರಿಗೆ ಗುಲಾಬಿ ವರ್ಣದ ಹೂವುಗಳನ್ನು ಅರ್ಪಿಸಿದರೆ ಪ್ರಸನ್ನಳಾಗುತ್ತಾಳೆ. ನೀವೂ ಗುಲಾಬಿ ಬಣ್ಣದ ಬಟ್ಟೆ ಧರಿಸಬಹುದು.

ನವರಾತ್ರಿಯ ಎಂಟನೇ ದಿನ ಕೈಗೊಳ್ಳುವ ಪೂಜೆಯು ಭಕ್ತರಿಗೆ ಬಹಳಷ್ಟು ಪುಣ್ಯ ಪ್ರಾಪ್ತಿ ಮಾಡುತ್ತದೆ. ತಾಯಿ ಗೌರಿಯ ಆಶೀರ್ವಾದದಿಂದ ಭಕ್ತರಿಗೆ ಬಹಳಷ್ಟು ಲಾಭಗಳಾಗುತ್ತದೆ. ಭಕ್ತರ ಬದುಕಿನಲ್ಲಿ ಇರುವ ಸಂಕಷ್ಟಗಳನ್ನು ತಾಯಿ ಗೌರಿ ಪರಿಹರಿಸಿ ತನ್ನ ಆಶೀರ್ವಾದದಿಂದ ದುಃಖಗಳನ್ನು ದೂರ ಮಾಡುತ್ತಾಳೆ. ಬದುಕಿನಲ್ಲಿ ನಾವು ಕಂಡಿರುವ ಆಸೆಗಳು ಈಡೇರುವ ಮಾರ್ಗಗಳನ್ನು ತಾಯಿ ಗೌರಿ ತೋರುತ್ತಾಳೆ. ನಮ್ಮ ಗುರಿ ಮುಟ್ಟಲು ನೆರವಾಗುತ್ತಾಳೆ. ನಮ್ಮ ಕೆಲಸಗಳನ್ನು ತಪ್ಪಿಲ್ಲದಂತೆ ನಿಖರವಾಗಿ ಮಾಡಲು ತಾಯಿ ಗೌರಿ ನೆರವಾಗುತ್ತಾಳೆ. ಬದುಕಿನಲ್ಲಿ ಎಲ್ಲ ಸುಖಗಳನ್ನೂ ನೀಡಿ ಆಧ್ಯಾತ್ಮದತ್ತ ಒಲವು ಮೂಡುವಂತೆ ಮಾಡುತ್ತಾಳೆ.

ನವರಾತ್ರಿ ವೇಳೆ ದೇವಿ ಮೆಚ್ಚಿಸಲು ಏನು ಮಾಡಬೇಕು? ಏನು ಮಾಡಬಾರದು?

ತಾಯಿ ಗೌರಿ ಆರಾಧಿಸುವ ಮಂತ್ರಗಳು:

ಓ ದೇವಿ ಮಹಾಗೌರಿಯೇ ನಮಃ

ಶ್ವೇತ ವೃಷೆಸಮೃದ್ಧ ಶ್ವೇವೇತಾಂಬರ್ಧಾರ ಶುಚೇಹ ಮಹಾಗೌರಿ

ಶುಭಂ ದಾದ್ಯನ್ಮಹದೇವ ಪ್ರಮೋದಃ

ಮಹಾ ಗೌರಿ ಸ್ತುತಿ:

ಯಾ ದೇವಿ ಸರ್ವಭೂತೇಶು ಮಾ ಮಹಾಗೌರಿ ರೂಪೇಣ ಸಂಸ್ಥಿತಾ ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ

Follow Us:
Download App:
  • android
  • ios