Asianet Suvarna News Asianet Suvarna News

ಸುಂದರವಾದ ಹೆಣ್ಣು ಮಕ್ಕಳಿಗೆ ಅಂಗಾಂಗ ಕಿತ್ತು ತಿನ್ನುತ್ತವೆ, ಕೋಡಿಶ್ರೀ ಆಘಾತಕಾರಿ ಭವಿಷ್ಯ

* ಬಹು ದೊಡ್ಡ ಆಘಾತಕ್ಕೆ ಜಗತ್ತಿನ ಸಾಮ್ರಾಟರು ತಲ್ಲಣಗೊಳ್ಳುತ್ತಾರೆ
* ಸುಂದರವಾದ ಹೆಣ್ಣು ಮಕ್ಕಳಿಗೆ ಅಂಗಾಂಗಳನ್ನ ಕಿತ್ತು ತಿನ್ನುತ್ತವೆ
* ಇದು ಕೋಡಿಮಠ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ನುಡಿದಿರುವ ಭವಿಷ್ಯ

kodi mutt seer predicts about monsoon and political turmoil rbj
Author
Bengaluru, First Published Apr 5, 2022, 2:36 PM IST

ಹಾಸನ, (ಏ.05): ಹಾರನಹಳ್ಳಿ ಕೋಡಿಮಠ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ(Kodi Mutt Seer Sri Shivananda Shivayogi Rajendra Swamiji) ಅವರು ಮತ್ತೊಂದು ಭಯಾನಕ ಭವಿಷ್ಯ ನುಡಿದಿದ್ದಾರೆ (Prediction). ಈ ವರ್ಷದ ಮಳೆ ಕೆಂಡಮಂಡಲ. ಈ ಬಾರಿ ಮುಂಗಾರು ಚೆನ್ನಾಗಿ ಆಗುತ್ತದೆ, ಹಿಂಗಾರು ಕಡಿಮೆಯಾಗಲಿದೆ. ಅಶಾಂತಿ, ಮತೀಯ ಗಲಭೆ, ದೊಂಬಿಗಳು, ಸಾವು, ಕೊಲೆ ನೋವುಗಳು ಹೆಚ್ಚಾಗಲಿವೆ. ವಿಶೇಷವಾಗಿ ಎಲೆಕ್ಟ್ರಿಕ್‌ನಿಂದ ಹೆಚ್ಚು ಅಪಾಯವಿದೆ ಎಂದು ಕೋಡಿಮಠ ಶ್ರೀ ಭವಿಷ್ಯ ನುಡಿದಿದ್ದಾರೆ.

ಹಾಸನದಲ್ಲಿ ಇಂದು(ಮಂಗಳವಾರ) ಮಾತನಾಡಿರುವ ಕೋಡಿಶ್ರೀ, ಸುಂದರವಾದ ಹೆಣ್ಣು ಮಕ್ಕಳಿಗೆ ಅಂಗಾಂಗಳನ್ನ ಕಿತ್ತು ತಿನ್ನುತ್ತವೆ ಎಂದು ಘೋರ ಭವಿಷ್ಯ ನುಡಿದಿರುವ ಕೋಡಿಮಠ ಶ್ರೀm ರಾಜಕೀಯ ವಿಪ್ಲವವಾಗಿ, ಗುಂಪುಗಳಾಗುತ್ತವೆ. ಬೆಂಕಿ, ಗಾಳಿ, ಗುಡುಗು ಸಿಡಿಲಿನಿಂದ ವಿಪರೀತ ಅನಾಹುತಗಳಾಗುತ್ತವೆ. ಭಾರತದಲ್ಲಿ ಇಲ್ಲಿಯವರೆಗೂ ಕಂಡೂ ಕೇಳರಿಯದಂತ ಬಹುದೊಡ್ಡ ಆಘಾತ ಆಗುತ್ತದೆ. ಜಗತ್ತಿನ ಸಾಮ್ರಾಟರುಗಳು ತಲ್ಲಣಗೊಳ್ಳುತ್ತಾರೆ. ಸಾವು ನೋವುಗಳು ಹೆಚ್ಚಾಗುತ್ತವೆ ಎಂದು ಕೋಡಿಶ್ರೀ ಆಘಾತಕಾರಿ ಭವಿಷ್ಯ ಹೇಳಿದ್ದಾರೆ.

ಹೀಗಿದೆ ನೋಡಿ ಕತ್ನಳ್ಳಿ ಸ್ವಾಮೀಜಿಯ ಯುಗಾದಿ ಭವಿಷ್ಯ

ಮಲೆನಾಡು ಬಯಲಾಗುತ್ತದೆ, ಬಯಲು ಮಲೆನಾಡಾಗುತ್ತದೆ. ನಿರೀಕ್ಷಿತ ಪ್ರದೇಶದಲ್ಲಿ ಮಳೆ ಸರಿಯಾಗಿ ಆಗುವುದಿಲ್ಲ ಎಂದೂ ಭವಿಷ್ಯ ನುಡಿದಿದ್ದಾರೆ ಎಂದಿದ್ದಾರೆ.

"
ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯಗಳು
ಮುಂದಿನ ದಿನಗಳಲ್ಲಿ ಗಾಳಿ ಗಂಡಾಂತರವಿದೆ. ಮುಂದಿನ ದಿನಗಳಲ್ಲಿ ಬರ ಹೆಚ್ಚಾಗಲಿದೆ. ಪ್ರಕೃತಿ ಅವಾಂತರಗಳು ಹೆಚ್ಚಾಗಿ ಮನುಷ್ಯರಿಗೆ ತೊಂದೆಯಾಗಿದೆ ಎಂದು ಕೋಡಿಶ್ರೀ ಭವಿಷ್ಯ ನುಡಿದಿದ್ದಾರೆ. ನೈಜ ಶಿಕ್ಷಣದ ಬದಲು ವ್ಯವಸ್ಥೆಯಲ್ಲಿ ಜಾತಿ ಶಿಕ್ಷಣ ಹೆಚ್ಚಾಗ್ತಿದೆ. ನ್ಯಾಯಯುತ ಧರ್ಮದ ಬದಲು ಜಾತಿ ಭೇದ ಭಾವ ಹೆಚ್ಚಾಗ್ತಿದೆ ಎಂದು ಚಿಕ್ಕಬಳ್ಳಾಪುರದಲ್ಲಿ ಶುಕ್ರವಾರ (ಫೆಬ್ರವರಿ 11) ಕೋಡಿಮಠದ ಡಾ. ಶಿವಾನಂದ ಶಿವಯೋಗೀಂದ್ರಶ್ರೀ ಕಳವಳ ವ್ಯಕ್ತಪಡಿಸಿದ್ದರು.

ಈ ಮೊದಲು ಕೊರೋನಾ ರೂಪಾಂತರ ಆಗುವ ಲಕ್ಷಣಗಳು ಬಹಳ ಇವೆ. ಸಂಶಯ, ಅಸಹನೆ, ದ್ವೇಷ, ರಾಜಕೀಯ ಕಲಹ ಹೆಚ್ಚಾಗುತ್ತೆ. ಆಶ್ವಿಜದಿಂದ ಸಂಕ್ರಾಂತಿಯೊಳಗೆ ರಾಷ್ಟ್ರಮಟ್ಟದಲ್ಲಿ ಅವಘಡ ಸಂಭವಿಸಲಿದೆ ಎಂದು ಹಾವೇರಿ ಜಿಲ್ಲೆ ರಾಣೆಬೆನ್ನೂರಿನಲ್ಲಿ ಕೋಡಿಮಠದ ಡಾ. ಶಿವಾನಂದ ಶಿವಯೋಗೀಂದ್ರಶ್ರೀ ಭವಿಷ್ಯ ನುಡಿದಿದ್ದರು.

ಭವಿಷ್ಯ ಎಂಬ ವಿಚಾರವನ್ನು ಒಪ್ಪುವ ಬಹುತೇಕರು ಕೋಡಿಮಠದ ಶ್ರೀಗಳ ಭವಿಷ್ಯದ ಬಗ್ಗೆ ಬಹಳಷ್ಟು ನಂಬಿಕೆ ಇಟ್ಟುಕೊಂಡಿರುತ್ತಾರೆ. ಕೋಡಿಮಠದ ಸ್ವಾಮೀಜಿ ಭವಿಷ್ಯ ಈ ಮೊದಲು ನಿಜವಾದ ಬಗ್ಗೆ ಉದಾಹರಣೆಗಳಿವೆ. ದೇಶದಲ್ಲಿ ಬಹಳ ದೊಡ್ಡ ಗಂಡಾಂತರ ಆಗಲಿದೆ ಎಂಬ ಬಗ್ಗೆ ಈ ಮೊದಲು ಹೇಳಿದ್ದರು. ಬಳಿಕ ಸೇನಾ ವಿಮಾನ ಪತನ ಆಗಿದ್ದನ್ನು ಉಲ್ಲೇಖಿಸಿ ತಮ್ಮ ಭವಿಷ್ಯದ ಬಗ್ಗೆ ಕೋಡಿಶ್ರೀಗಳು ಹೇಳಿದ್ದರು.

ಕೊರೊನಾ ಹೆಚ್ಚಾಗಲಿದೆ ಎಂಬ ಭವಿಷ್ಯವನ್ನು ಮೂರನೇ ಅಲೆಗೂ ಮೊದಲು ನೀಡಿದ್ದರು. ಅಲ್ಲದೇ, ಮಳೆ ಹೆಚ್ಚಾಗಿ, ಅತಿವೃಷ್ಟಿ, ಪ್ರಕೃತಿ ವಿಕೋಪ ಸಂಭವಿಸಲಿರುವ ಬಗ್ಗೆಯೂ ಈ ಮೊದಲು ಕೋಡಿಮಠದ ಸ್ವಾಮೀಜಿ ಹೇಳಿದ್ದರು.

Follow Us:
Download App:
  • android
  • ios