ಮಹಾರಥದ ಕಳಸದ ರಕ್ಷಣಾ ಕೊಡೆ ಮುರಿದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯ ಆರಾಧ್ಯ ದೈವ ಚನ್ನಬಸವಸ್ವಾಮಿ ಜಾತ್ರಾಮಹೋತ್ಸವದಲ್ಲಿ ನಡೆದ ಘಟನೆ.
ಕೊಪ್ಪಳ(ಜ.05): ಮಹಾರಥದ ಕಳಸದ ರಕ್ಷಣಾ ಕೊಡೆ ಮುರಿದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯ ಆರಾಧ್ಯ ದೈವ ಚನ್ನಬಸವಸ್ವಾಮಿ ಜಾತ್ರಾಮಹೋತ್ಸವದಲ್ಲಿ ನಿನ್ನೆ(ಬುಧವಾರ) ನಡೆದಿದೆ. ಕಳಸದ ರಕ್ಷಣಾ ಕೊಡೆ ಮುರಿದಿದ್ದು ಅಪಶಕುನ ಅಂತ ಭಕ್ತರು ಮಾತನಾಡಿಕೊಳ್ಳುತ್ತಿದ್ದಾರೆ.
Add Asianetnews Kannada as a Preferred Source

ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ನಡೆದ ಮಹಾರಥೋತ್ಸವದಲ್ಲಿ ಮಹಾರಥಕ್ಕೆ ತಂತಿ ತಗುಲಿ ಈ ಅವಘಡ ಸಂಭವಿಸಿದೆ ಅಂತ ತಿಳಿದು ಬಂದಿದೆ. ಕಳಸದ ರಕ್ಷಣಾ ಕೊಡೆ ಮುರಿದ ತಕ್ಷಣವೇ ಭಕ್ತರು ಶಾಕ್ ಆಗಿದ್ದಾರೆ.
ಚಿಕ್ಕಮಗಳೂರು: ಸಾವಿರಾರು ಜನ ಇರುಮುಡಿ ಹೊತ್ತು ದೇವಸ್ಥಾನಕ್ಕೆ ತೆರಳಿದ ಭಕ್ತರು..!
ಕಳಸದ ರಕ್ಷಣಾ ಕೊಡೆ ಮುರಿದಿದ್ದರಿಂದ ರಥ ಕೆಲಕಾಲ ಮುಂದಕ್ಕೆ ಸಾಗದೆ ನಿಂತಿತ್ತು. ಈ ಬಾರಿ ಗಂಗಾವತಿಗೆ ಕಂಟಕ ಕಾದಿದಿಯಾ? ಅಂತ ಭಕ್ತರು ಮಾತನಾಡಿಕೊಳ್ಳುತ್ತಿದ್ದಾರೆ. ಇದೇ ವೇಳೆ ಕೆಲ ಭಕ್ತರು ಜೆಸ್ಕಾಂ ಅಧಿಕಾರಿಗಳ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ ಘಟನೆಯೂ ಕೂಡ ನಡೆದಿದೆ.
