ಪಾಕಿಸ್ತಾನ ಮೂಲದ ಕುಟುಂಬವೊಂದು ಉಡುಪಿಗೆ ಬಂದು ದೈವಾರಾಧನೆಯಲ್ಲಿ ಭಾಗವಹಿಸಿದ ಘಟನೆ ಶನಿವಾರ ಇಲ್ಲಿನ ಕಂಗಣಬೆಟ್ಟು ಗ್ರಾಮದ ಅಣ್ಣಪ್ಪ ಪಂಜುರ್ಲಿ ದೈವಸ್ಥಾನದಲ್ಲಿ ನಡೆದಿದೆ.

ಉಡುಪಿ (ಜು.14): ಪಾಕಿಸ್ತಾನ ಮೂಲದ ಕುಟುಂಬವೊಂದು ಉಡುಪಿಗೆ ಬಂದು ದೈವಾರಾಧನೆಯಲ್ಲಿ ಭಾಗವಹಿಸಿದ ಘಟನೆ ಶನಿವಾರ ಇಲ್ಲಿನ ಕಂಗಣಬೆಟ್ಟು ಗ್ರಾಮದ ಅಣ್ಣಪ್ಪ ಪಂಜುರ್ಲಿ ದೈವಸ್ಥಾನದಲ್ಲಿ ನಡೆದಿದೆ. ಪಾಕಿಸ್ತಾನದಲ್ಲಿ ಪೂರ್ವಿಕರನ್ನು ಹೊಂದಿರುವ ಉತ್ತರ ಭಾರತದ ಈ ಸಿಂಧಿ ಕುಟುಂಬ ಸದ್ಯ ಮುಂಬೈನಲ್ಲಿ ವಾಸವಿದೆ. ಈ ಕುಟುಂಬದ ವಿದ್ಯಾವಂತ ಯುವಕನೊಬ್ಬ ಮಾನಸಿಕ ಅಸ್ವಸ್ಥ್ಯದಿಂದ ಬಳಲುತ್ತಿದ್ದಾನೆ.

Add Asianetnews Kannada as a Preferred SourcegooglePreferred

ಇತ್ತೀಚೆಗೆ ಯೂಟ್ಯೂಬ್‌ನಲ್ಲಿ ತುಳುನಾಡಿನ ದೈವಗಳ ಬಗ್ಗೆ ತಿಳಿದ ಈ ಕುಟುಂಬ, ಪರಿಚಯಸ್ಥರ ಮೂಲಕ ಕಂಗಣಬೆಟ್ಟು ದೈವಸ್ಥಾನಕ್ಕೆ ಬಂದು, ದೈವದ ದರ್ಶನ ಪಾತ್ರಿಯಲ್ಲಿ ಯುವಕನ ಅನಾರೋಗ್ಯದ ಬಗ್ಗೆ ಅರಿಕೆ ಮಾಡಿಕೊಂಡರು. ಅಭಯವನ್ನು ನೀಡಿದ ದೈವ, ಮನೆಯಲ್ಲಿ ಸುದರ್ಶನ ಹೋಮ, 48 ಶುಕ್ರವಾರಗಳ ಕಾಲ ದೇವಿ ಸನ್ನಿಧಾನಕ್ಕೆ ಭೇಟಿಯ ಜೊತೆಗೆ ವೈದ್ಯರಿಂದಲೂ ಚಿಕಿತ್ಸೆ ಪಡೆಯುವಂತೆ ಸಲಹೆ ನೀಡಿದೆ.

24 ಗಂಟೆಯೊಳಗೆ ದೈವಸ್ಥಾನದಲ್ಲಿ ಕದ್ದ ಕಳ್ಳನನ್ನುತೋರಿಸಿದ ಬಬ್ಬುಸ್ವಾಮಿ ದೈವ
ಬಬ್ಬುಸ್ವಾಮಿ ದೈವಸ್ಥಾನದಲ್ಲಿ ನಡೆದ ಕಳ್ಳತನದ ಆರೋಪಿಯನ್ನು ದೈವ 24 ಗಂಟೆಯೊಳಗೆ ಪತ್ತೆ ಮಾಡಿಕೊಟ್ಟ ಅಚ್ಚರಿಯ ಘಟನೆ ಉಡುಪಿ ಸಮೀಪದ ಚಿಟ್ಪಾಡಿ ವಾರ್ಡಿನ ಕಸ್ತೂರಬಾ ನಗರದದಲ್ಲಿ ನಡೆದಿದೆ.

ಏನಿದು ಘಟನೆ?: ಜು.4ರಂದು ರಾತ್ರಿ ದೈವಸ್ಥಾನದ ಕಾಣಿಕೆ ಡಬ್ಬಿ ಕಳವಾಗಿತ್ತು, ಈ ಕೃತ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿತ್ತು. ಮರುದಿನ ಭಕ್ತರು ದೈವದ ದರ್ಶನ ನಡೆಸಿ ದೂರು ನೀಡಿದ್ದರು. ಊರಿನ ಸಂಕಷ್ಟ ಪರಿಹರಿಸುವ ದೈವದ ಸನ್ನಿಧಾನದಲ್ಲಿಯೇ ಈ ರೀತಿ ಕಳ್ಳತನ ನಡೆದರೆ ಅಪಚಾರವಾಗುವುದಿಲ್ಲವೇ ಎಂದು ಭಕ್ತರು ಆತಂಕ ವ್ಯಕ್ತಪಡಿಸಿದಾಗ, ರಾತ್ರಿ ಹಗಲು ಕಳೆಯುವುದರಲ್ಲಿ ಕಳ್ಳನನ್ನು ಹುಡುಕಿ ಕೊಡುವುದಾಗಿ ದೈವವು ಅಭಯ ನೀಡಿತ್ತು.

ಜು.6 ರ ಬೆಳಗ್ಗೆ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಲಗಿದ್ದ ವ್ಯಕ್ತಿಯೊಬ್ಬನನ್ನು ನೋಡಿದ ಆಟೋ ಚಾಲಕರೊಬ್ಬರು, ದೈವಸ್ಥಾನದ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದ್ದ ದೃಶ್ಯದಲ್ಲಿದ್ದ ಕಳ್ಳ ಆತನೇ ಎಂದು ಪತ್ತೆ ಹಚ್ಚಿದ್ದರು. ತಕ್ಷಣ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಪೊಲೀಸರು ಬಂದು ಆ ವ್ಯಕ್ತಿಯನ್ನು ವಿಚಾರಿಸಿದಾಗ, ಆತ ಬಾಗಲಕೋಟೆ ಜಿಲ್ಲೆಯ ಮುದುಕಪ್ಪ ಎಂದು ತಿಳಿಯಿತು ಮತ್ತು ತಾನೇ ದೈವಸ್ಥಾನದ ಕಳ್ಳತನ ನಡೆಸಿದ್ದು ಎಂದು ಒಪ್ಪಿಕೊಂಡಿದ್ದಾನೆ, ಮಾತ್ರವಲ್ಲ ಉದ್ಯಾವರದಲ್ಲಿಯೂ ಕಳ್ಳತನ ಮಾಡಿದ್ದಾಗಿ ಬಾಯಿ ಬಿಟ್ಟಿದ್ದಾನೆ.

ಅಪರ್ಣಾ ಮಜಾಟಾಕೀಸ್‌ಗೆ ಬರಬೇಕು ಅನ್ನೋದು ನನ್ನ ಯೋಚನೆಯಲ್ಲ, ಅನಾರೋಗ್ಯವನ್ನು ಗೌಪ್ಯವಾಗಿಟ್ಟಿದ್ದರು:ಸೃಜನ್

ದೈವಸ್ಥಾನದಲ್ಲಿ ಕಳ್ಳತನ ಮಾಡಿದ್ದ ಹಣದಲ್ಲಿ ಆತ ಜು.5ರಂದು ರಾತ್ರಿ ಬಾಗಲಕೋಟೆಗೆ ಹೋಗಲೆಂದು ಬಸ್‌ ನಿಲ್ದಾಣಕ್ಕೆ ಬಂದಿದ್ದ. ಬಸ್‌ ಇಲ್ಲ ಎಂದು ತಿಳಿದು, ಅಲ್ಲಿಯೇ ಮಲಗಿದ್ದ. ಬೆಳಗ್ಗೆ 8 ಗಂಟೆಯಾದರೂ ಏಳದಿದ್ದ ಕಳ್ಳ ಆಟೋ ಚಾಲಕನ ಕಣ್ಣಿಗೆ ಬಿದ್ದು ಸೆರೆಯಾಗಿದ್ದಾನೆ.

24 ಗಂಟೆಯೊಳಗೆ ಕಳ್ಳನನ್ನು ಹಿಡಿದುಕೊಡುವುದಾಗಿ ಹೇಳಿದ್ದ ಬಬ್ಬುಸ್ವಾಮಿ ದೈವದ ಮಾತು ಸತ್ಯವಾಗಿದ್ದು, ದೈವದ ಕಾರಣಿಕಕ್ಕೆ ಭಕ್ತರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಇದೇ ರೀತಿ ವರ್ಷದ ಹಿಂದೆಯೂ ಇಲ್ಲಿ ಪವಾಡ ನಡೆದಿತ್ತು. ದೈವ ಸನ್ನಿಧಾನದಲ್ಲಿ ನೀರಿನ ನಿತ್ಯ ಬಳಕೆಗಾಗಿ ಬೋರ್ವೆಲ್ ತೋಡಲಾಗಿತ್ತು. ಆದರೆ ನೀರು ಸಿಗದೇ ಹೋದಾಗ ಭಕ್ತರು ದೈವದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಿದ್ದರು. ಪ್ರಾರ್ಥನೆ ಮಾಡಿದ ಕೆಲವೇ ಗಂಟೆಗಳಲ್ಲಿ ಬೋರ್ವೆಲ್‌ನಲ್ಲಿ ಸಾಕಷ್ಟು ನೀರು ಸಿಕ್ಕಿತ್ತು ಎಂದು ಭಕ್ತರು ನೆನಪಿಸಿಕೊಂಡಿದ್ದಾರೆ.