ಮೊದಲ್ ಲೆಗ್ ಸೆಮಿಫೈನಲ್ 1-1 ಅಂತರದಲ್ಲಿ ಸಮಬಲ ಸಾಧಿಸಿದ ಕಾರಣ ಇದೀಗ 2ನೇ ಲೆಗ್ ತೀವ್ರ ಕತೂಹಲ ಕೆರಳಿಸಿದೆ. ನಾರ್ಥ್ ಈಸ್ಟ್ ಹಾಗೂ ಮೋಹನ್ ಬಗಾನ್ ಹೋರಾಟದಲ್ಲಿ ಯಾರು ಫೈನಲ್ ಪ್ರವೇಶಿಸುತ್ತಾರೆ? 

ಗೋವಾ(ಮಾ.08): ಮೊದಲ ಲೆಗ್‌ನ ಸೆಮಿಫೈನಲ್ ಪಂದ್ಯದಲ್ಲಿ 1-1 ಗೋಲುಗಳಿಂದ ಸಮಬಲ ಸಾಧಿಸಿದ್ದ ಎಟಿಕೆ ಮೋಹನ್ ಬಾಗನ್ ಹಾಗೂ ನಾರ್ಥ್ ಈಸ್ಟ್ ತಂಡಗಳು ಇದೀಗ ಫೈನಲ್ ಪ್ರವೇಶಕ್ಕ ಅಂತಿಮ ಹೋರಾಟ ನೆಡಸಲಿದೆ. ಉಭಯ ತಂಡಗಳಿಗೆ ಈ ಬಾರಿಯ ಫೈನಲ್ ಪ್ರವೇಶಕ್ಕೆ ಕೊನೆಯ ಅವಕಾಶ ಇದಾಗಿದ್ದು, ಜಿದ್ದಾಜಿದ್ದಿನ ಹೋರಾಟಕ್ಕೆ ಸಾಕ್ಷಿಯಾಗಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದೇ ಮೊದಲ ಬಾರಿಗೆ ಪ್ಲೇ ಆಫ್ ಹಂತಕ್ಕೇರಲು ವಿಫಲವಾದ ಬೆಂಗಳೂರು FC!

ನಾರ್ಥ್ ಈಸ್ಟ್ ನ ಇಡ್ರಿಸ್ಸಾ ಸಿಲ್ಲಾ ಕೊನೆಯ ಕ್ಷಣದಲ್ಲಿ ಗಳಿಸಿದ ಗೋಲಿನಿಂದ ಮೋಹನ್ ಬಾಗನ್ ಮೇಲೆ ಒತ್ತಡ ನಿರ್ಮಾಣವಾಗಿದೆ ಎಂಬ ನಿಲುವನ್ನು ತಂಡದ ಕೋಚ್ ಆಂಟೋನಿಯೊ ಹಬ್ಬಾಸ್ ತಳ್ಳಿ ಹಾಕಿದ್ದಾರೆ. 

ಋತುವಿನುದ್ದಕ್ಕೂ ಕೋಲ್ಕೊತಾದ ತಂಡ ಉತ್ತಮ ಡಿಫೆನ್ಸ್ ಪ್ರದರ್ಶನ ನೀಡಿತ್ತು. ಲೀಗ್ ಹಂತದಲ್ಲಿ ಕೇವಲ 15 ಗೋಲುಗಳನ್ನು ನೀಡಿರುವುದೇ ಇದಕ್ಕೆ ನಿದರ್ಶನ. ಆದರೆ ಲೀಗ್ ನ ಕೊನೆಯ ಮೂರು ಪಂದ್ಯಗಳಲ್ಲಿ ತಂಡ ಐದು ಗೋಲುಗಳನ್ನು ನೀಡಿತ್ತು, ಇದು ತಂಡದ ಲೀಗ್ ವಿನ್ನರ್ ಶೀಲ್ಡ್ ಕೈಜಾರಲು ಪ್ರಮುಖ ಕಾರಣವಾಗಿತ್ತು. ಮೊದಲ ಲೆಗ್ ನ ವಿಷಯಗಳನ್ನು ಬದಿಗಿಟ್ಟು ಆಡಲಿದ್ದೇವೆ, ಎಂದು ಕೋಚ್ ಹಬ್ಬಾಸ್ ಹೇಳಿದ್ದಾರೆ.

ಎರಡನೇ ಲೆಗ್ ಪಂದ್ಯಕ್ಕೆ ಮುನ್ನ ಹಬ್ಬಾಸ್ ಅವರು ಬಹಳ ವಿಶ್ರಾಂತ ಮನಸ್ಥಿತಿಯಲ್ಲಿರುವುದು ಕಂಡುಬಂತು, “ಯಾವುದೇ ರೀತಿಯ ಒತ್ತಡವಿಲ್ಲ. ಇದು ಒಂದು ಉತ್ತಮ ಅವಕಾಶದ ಕುರಿತಾಗಿದೆ. ಇದು ಮತ್ತೆ ಸಿಗುವುದಿಲ್ಲ. ನಾವು ಅದನ್ನು ಸಂಭ್ರಮಿಸಬೇಕು. ನಾವು ನಮ್ಮಲ್ಲಿರುವ ಉತ್ತಮ ಪ್ರದರ್ಶನ ನೀಡಿ ಸೆಮಿಫೈನಲ್ ಹಂತವನ್ನು ಸಂಭ್ರಮಿಸಬೇಕು,” ಎಂದಿದ್ದಾರೆ.

ಖಾಲೀದ್ ಜಮಿಲ್ ಅವರ ಪಡೆ ಕಳೆದ 10 ಪಂದ್ಯಗಳಲ್ಲಿ ಸೋಲು ಕಂಡಿರಲಿಲ್ಲ, ಈ ಬಗ್ಗೆ ಗಮನ ಸೆಳೆದಾಗ, ಹಬ್ಬಾಸ್ ಅವರ ಉತ್ತರದಲ್ಲಿ ತಾಳ್ಮೆ ಮನೆಮಾಡಿತ್ತು. “ತಾಳ್ಮೆಯಿಂದ ಇರುವುದೇ ನಮ್ಮ ರಣತಂತ್ರ. ಅತ್ಯಂತ ತಾಳ್ಮೆಯಿಂದ ಆಡಿ ಫೈನಲ್ ತಲುಪುವುದು ನಮ್ಮ ಗುರಿಯಾಗಿದೆ,” ಎಂದರು.

ಬಾಗನ್ ತಂಡವು ಡೇವಿಡ್ ವಿಲಿಯಮ್ಸ್ ಮತ್ತು ರಾಯ್ ಕೃಷ್ಣ ಅವರನ್ನು ಹೆಚ್ಚು ಅವಲಂಭಿಸಿದ್ದು, ಇಬ್ಬರ ಋತುವಿನುದ್ದಕ್ಕೂ ಸ್ಥಿರ ಪ್ರದರ್ಶನ ತೋರಿದ್ದಾರೆ. ಜಮೀಲ್ ಅವರು ಆಗಮಿಸಿದಾಗಿನಿಂದ ಸೋಲನ್ನೇ ಕಂಡಿರದ ನಾರ್ಥ್ ಈಸ್ಟ್ ಎಟಿಕೆಎಂಬಿ ವಿರುದ್ಧ ಜಯ ಗಳಿಸಿ ಮೊದಲ ಬಾರಿಗೆ ಫೈನಲ್ ತಲಪುವ ಗುರಿ ಹೊಂದಿದೆ.

“ಇದು ಮಾಡು ಇಲ್ಲವೆ ಮಡಿ ಪಂದ್ಯವಾದ ಕಾರಣ ನಾವು ಫಲಿತಾಂಶದ ಕಡೆಗೆ ಹೆಚ್ಚು ಗಮನಹರಿಸಲಿದ್ದೇವೆ. ಒತ್ತಡ ಇದ್ದೇ ಇರುತ್ತದೆ. ಒತ್ತಡಕ್ಕೆ ಹೊಂದಿಕೊಂಡು ಖುಷಿ ಪಡಿ ಎಂದಿದ್ದೇನೆ. ಹಿಂದಿನ ಪಂದ್ಯದ ಗೋಲು ವ್ಯತ್ಯಯ ಇಲ್ಲದ ಕಾರಣ ಇತ್ತಂಡಗಳಿಗೆ ಗೆಲ್ಲಬೇಕಾಗಿದೆ. ಇದು ಇತ್ತಂಡಗಳಿಗೂ ಅನ್ವಯ,ಗೋಲು ಗಳಿಸಲು ಸಾಕಷ್ಟು ಅವಕಾಶಗಳನ್ನು ನಿರ್ಮಿಸಿ ಅವರ ಮೇಲೆ ಒತ್ತಡ ತರಬೇಕು. ಸಬಲ ಸಾಧಸಿಸಿದೆ 30 ನಿಮಿಷಗಳ ಅವಕಾಶ ಸಿಗುತ್ತದೆ, ”ಎಂದು ಜಮೀಲ್ ಹೇಳಿದ್ದಾರೆ.