ಕಾಂಕ್ರೀಟ್ ಮಿಕ್ಸರ್ ವಾಹನ ಪಲ್ಟಿ| ಚಾಲಕ ಸ್ಥಳದಲ್ಲೇ ಸಾವು| ಅಳ್ನಾವರ ರಸ್ತೆಯ ಮಂಡಿಹಾಳ ಬಳಿ ನಡೆದ ಅಪಘಾತ| ಇಳಕಲ್ ದಿಂದ ರಾಮನಗರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ| ಅತಿ ವೇಗವಾಗಿ ತೆರಳುತ್ತಿದ್ದ ವಾಹನದ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ| 

ಗದಗ(ಅ.15): ಕಾಂಕ್ರೀಟ್ ಮಿಕ್ಸರ್ ವಾಹನವೊಂದು ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಅಳ್ನಾವರ ರಸ್ತೆಯ ಮಂಡಿಹಾಳ ಬಳಿ ಭಾನುವಾರ ತಡರಾತ್ರಿ ಸಂಭವಿಸಿದೆ. 

Add Asianetnews Kannada as a Preferred SourcegooglePreferred

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮೃತನನ್ನು ಗದಗ ಜಿಲ್ಲೆ ಅಡವಿಸೋಮಾಪುರ ಗ್ರಾಮದ ಲೆಂಕಪ್ಪ ಬಸಪ್ಪ ತಳವಾರ (42) ಎಂದು ಗುರುತಿಸಲಾಗಿದೆ. ಇಳಕಲ್ ದಿಂದ ರಾಮನಗರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಅತಿ ವೇಗವಾಗಿ ತೆರಳುತ್ತಿದ್ದ ವಾಹನದ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಲೆಂಕಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.