MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Bagalkot
  • ಕೈಮೀರಿದ ರೈತ ಪ್ರತಿಭಟನೆ, ಮುಧೋಳದಲ್ಲಿ ಟ್ರಾಕ್ಟರ್‌‌ಗೆ ಹಚ್ಚಿದ ಬೆಂಕಿಯಿಂದ ನೂರಾರು ಟನ್ ಕಬ್ಬು ನಾಶ

ಕೈಮೀರಿದ ರೈತ ಪ್ರತಿಭಟನೆ, ಮುಧೋಳದಲ್ಲಿ ಟ್ರಾಕ್ಟರ್‌‌ಗೆ ಹಚ್ಚಿದ ಬೆಂಕಿಯಿಂದ ನೂರಾರು ಟನ್ ಕಬ್ಬು ನಾಶ

ಕೈಮೀರಿದ ರೈತ ಪ್ರತಿಭಟನೆ, ಮುಧೋಳದಲ್ಲಿ ಟ್ರಾಕ್ಟರ್‌‌ಗೆ ಹಚ್ಚಿದ ಬೆಂಕಿಯಿಂದ ನೂರಾರು ಟನ್ ಕಬ್ಬು ನಾಶ, ಸುಮಾರು 20ಕ್ಕೂ ಹೆಚ್ಚು ಟ್ರಾಕ್ಟರ್‌ಗಳಿಗೆ ರೈತರು ಬೆಂಕಿ ಹಚ್ಚಿದ್ದಾರೆ. ಸಮೀರವಾಡಿ ಕಾರ್ಖಾನೆ ಆವರಣದಲ್ಲಿ ಈ ಘಟನೆ ನಡೆದಿದೆ. 

1 Min read
Chethan Kumar
Published : Nov 13 2025, 07:02 PM IST
Share this Photo Gallery
  • FB
  • TW
  • Linkdin
  • Whatsapp
15
ಮುಧೋಳ ರೈತರ ಪ್ರತಿಭಟನೆ ಕಿಚ್ಚು
Image Credit : Asianet News

ಮುಧೋಳ ರೈತರ ಪ್ರತಿಭಟನೆ ಕಿಚ್ಚು

ಮುಧೋಳ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ಪರೂಪ ಪಡೆದುಕೊಂಡಿದೆ. 3300 ರೂಪಾಯಿ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ಮಾಡಿದ ರೈತರು ತಮ್ಮ ಪಟ್ಟು ಸಡಿಸಿಲಿಲ್ಲ. ಇಂದು ಸಮೀರವಾಡಿ ಕಾರ್ಖಾನೆಯತ್ತ ನುಗ್ಗಿದ ರೈತರು ಆಕ್ರೋಶದಲ್ಲಿ ಕಬ್ಬು ತುಂಬಿದ ಟ್ರಾಕ್ಟರ್‌ಗಳಿಗೆ ಬೆಂಕಿ ಹಚ್ಚಿದ್ದಾರೆ. ಪರಿಣಾಮ 20ಕ್ಕೂ ಹೆಚ್ಚು ಟ್ರಾಕ್ಟರ್ ಸುಟ್ಟು ಭಸ್ಮವಾಗಿದೆ.

25
ಕಾರ್ಖಾನೆ ಆವರಣದಲ್ಲಿ ರೈತರ ಆಕ್ರೋಶ
Image Credit : Asianet News

ಕಾರ್ಖಾನೆ ಆವರಣದಲ್ಲಿ ರೈತರ ಆಕ್ರೋಶ

ಮುಧೋಳದಿಂದ ಸಮೀರವಾಡಿ ತೆರಳುವ ಮಧ್ಯೆ ರೈತರು ಕಬ್ಬು ತುಂಬಿದ ಟ್ರಾಕ್ಟರ್ ಮಗುಚಿ ಹಾಕಿ ಬೆಂಕಿ ಹಚ್ಚಿದ್ದಾರೆ. ಈ ಟ್ರಾಕ್ಟರ್ ಹೊತ್ತಿ ಉರಿಯುತ್ತಿದ್ದಂತೆ ರೈತರು ನೇರವಾಗಿ ಸಮೀರವಾಡಿ ಕಾರ್ಖಾನೆಗೆ ನುಗ್ಗಿದ್ದಾರೆ. ಕಾರ್ಖಾನೆ ಆವರಣದಲ್ಲಿದ್ದ ಕಬ್ಬು ತುಂಬಿದ ಟ್ರಾಕ್ಟರ್‌ಗಳಿಗೆ ಬೆಂಕಿ ಹಚ್ಚಿದ್ದಾರೆ. ಇಡೀ ಪ್ರದೇಶ ಬೆಂಕಿಯ ಜ್ವಾಲೆಯಲ್ಲಿ ಸುಟ್ಟ ಕರಕರಲಾಗಿದೆ.

Related Articles

Related image1
ಮುಧೋಳ ರೈತರ ಕಿಚ್ಚಿಗೆ ಹೊತ್ತಿ ಉರಿದ ಕಬ್ಬು ತುಂಬಿದ ಟ್ರಾಕ್ಟರ್, 20ಕ್ಕೂ ಹೆಚ್ಚು ವಾಹನ ಭಸ್ಮ
Related image2
ರೈತ ಹೋರಾಟಕ್ಕೆ ಕಾಂಗ್ರೆಸ್ ಸರ್ಕಾರದ ಸ್ಪಂದನೆ: ಬಿಜೆಪಿ ವಿರುದ್ಧ ಸಚಿವ ಸಂತೋಷ್ ಲಾಡ್ ವಾಗ್ದಾಳಿ
35
ರೈತರ ಆಕ್ರೋಶಕ್ಕೆ ಬದಲಾದ ಮುಧೋಳ
Image Credit : Asianet News

ರೈತರ ಆಕ್ರೋಶಕ್ಕೆ ಬದಲಾದ ಮುಧೋಳ

ರೈತರು 3,300 ರೂಪಾಯಿ ಬೆಂಬಲ ಬೆಲ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಇತ್ತ ಕಾರ್ಖಾನೆ ಮಾಲೀಕರು 3,250 ರೂಪಾಯಿ ನೀಡುವುದಾಗಿ ಭರವಸೆ ನೀಡಿದೆ. ಇನ್ನುಳಿದ 50 ರೂಪಾಯಿ ತಡವಾಗಿ ನೀಡುವುದಾಗಿ ಭರವಸೆ ನೀಡಿದ್ದರೆ. ಆದರೆ 3,300 ರೂಪಾಯಿ ಒಟ್ಟು ಮೊತ್ತ ನೀಡುವಂತೆ ರೈತರು ಪಟ್ಟು ಹಿಡಿದು ಪ್ರತಿಭಟನೆ ತೀವ್ರಗೊಳಿಸಿದ್ದಾರೆ.

45
ನೂರಾರು ಟನ್ ಕಬ್ಬು ನಾಶ
Image Credit : Asianet News

ನೂರಾರು ಟನ್ ಕಬ್ಬು ನಾಶ

20ಕ್ಕೂ ಹೆಚ್ಚು ಟ್ರಾಕ್ಟರ್ ಹೊತ್ತಿ ಉರಿಯುತ್ತಿದ್ದಂತೆ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸು ಕಾರ್ಯದಲ್ಲಿ ತೊಡಗಿದೆ. ಆದರೆ ಅಗ್ನಿಶಾಮಕ ದಳದ ಕಾರ್ಯಾಚರಣೆಗೆ ಬೆಂಕಿ ಜ್ವಾಲೆ ನಿಲ್ಲುತ್ತಿಲ್ಲ. ಹೀಗಾಗಿ ಟ್ರಾಕ್ಟ್ ಹಾಗೂ ಕಬ್ಬು ಸುಟ್ಟು ನಾಶವಾಗಿದೆ. ನೂರಾರು ಟನ್ ಕಬ್ಬು ನಾಶವಾಗಿದೆ. ಅಪಾರ ನಷ್ಟ ಸಂಭವಿಸಿದೆ.

ನೂರಾರು ಟನ್ ಕಬ್ಬು ನಾಶ

55
ಐದು ಬಾರಿ ರೈತರ ಜೊತೆ ಮಾತುಕತೆ
Image Credit : Asianet News

ಐದು ಬಾರಿ ರೈತರ ಜೊತೆ ಮಾತುಕತೆ

ರೈತರ ಜೊತೆ ಐದು ಬಾರಿ ಮಾತುಕತೆ ನಡೆಸಿದ್ದೇವೆ. 3,250 ರೂಪಾಯಿ ನೀಡಲು ಮಾಲೀಕರು ಒಪ್ಪಿಕೊಂಡಿದ್ದಾರೆ. ಕಾನೂನಿನ ಚೌಕಟ್ಟಿನಲ್ಲಿ ರೈತರು ಪ್ರತಿಭಟನೆ ಮಾಡಲಿ. ಸರ್ಕಾರ ರೈತರ ಪರವಾಗಿ ಕೆಲಸ ಮಾಡುತ್ತಿದೆ. ಅವರ ಸಮಸ್ಯೆಗಳನ್ನು ಆಲಿಸಿ, ಮಾಲೀಕರ ಬಳಿ ಮಾತುಕತೆ ನಡೆಸಲಾಗಿದೆ ಎಂದು ಸಚಿವ ಆರ್‌ಬಿ ತಿಮ್ಮಾಪುರ್ ಹೇಳಿದ್ದಾರೆ.

ಐದು ಬಾರಿ ರೈತರ ಜೊತೆ ಮಾತುಕತೆ

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ರೈತರು
ಬಾಗಲಕೋಟೆ
ಕರ್ನಾಟಕ ಸುದ್ದಿ
Latest Videos
Recommended Stories
Related Stories
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved