MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Bengaluru Urban
  • ಗುರೂಜಿ ಮಾತು ನಂಬಿ 2 ಲಕ್ಷ ಕಳೆದುಕೊಂಡ ಮದುವೆ ಕನಸು ಕಂಡಿದ್ದ ಬೆಂಗಳೂರಿನ ಯುವತಿ!

ಗುರೂಜಿ ಮಾತು ನಂಬಿ 2 ಲಕ್ಷ ಕಳೆದುಕೊಂಡ ಮದುವೆ ಕನಸು ಕಂಡಿದ್ದ ಬೆಂಗಳೂರಿನ ಯುವತಿ!

ಆನ್‌ಲೈನ್‌ನಲ್ಲಿ ಭವಿಷ್ಯ ಹೇಳುವುದಾಗಿ ನಂಬಿಸಿದ ಗುರೂಜಿಯೊಬ್ಬನಿಗೆ, ಮದುವೆಯ ವಿಷಯವಾಗಿ ಯುವತಿಯೊಬ್ಬರು ₹2.05 ಲಕ್ಷ ಕಳೆದುಕೊಂಡಿದ್ದಾರೆ. ಹಣ ವಾಪಸ್ ಕೇಳಿದಾಗ ಬೆದರಿಕೆ ಹಾಕಿದ್ದು, ಈ ಸಂಬಂಧ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಚಂದ್ರಶೇಖರ್ ಸುಗತ್ ಗುರೂಜಿ ಎಂಬುವವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

1 Min read
Author : Kannadaprabha News
Published : Jan 05 2026, 09:24 AM IST
Share this Photo Gallery
  • FB
  • TW
  • Linkdin
  • Whatsapp
14
₹2.05 ಲಕ್ಷ ವಂಚಿಸಿರುವ ಗುರೂಜಿ
Image Credit : Asianet News

₹2.05 ಲಕ್ಷ ವಂಚಿಸಿರುವ ಗುರೂಜಿ

ಪಿ.ಜಿಯಲ್ಲಿ ವಾಸವಾಗಿದ್ದ ಯುವತಿಯೊಬ್ಬರಿಗೆ ಆನ್‌ಲೈನ್‌ ಮೂಲಕ ಭವಿಷ್ಯ ಹೇಳುವುದಾಗಿ ಗುರೂಜಿ ಸೋಗಿನಲ್ಲಿ ನಂಬಿಸಿದ ವ್ಯಕ್ತಿಯೊಬ್ಬ ₹2.05 ಲಕ್ಷ ವಂಚಿಸಿರುವ ಘಟನೆ ಆಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

24
 ಎಫ್‌ಐಆರ್ ದಾಖಲು
Image Credit : getty, twitter

ಎಫ್‌ಐಆರ್ ದಾಖಲು

ಆಡುಗೋಡಿ ನಿವಾಸಿಯಾದ 21 ವರ್ಷದ ಯುವತಿ ನೀಡಿದ ದೂರಿನ ಮೇರೆಗೆ ಜ.2ರಂದು ಚಂದ್ರಶೇಖರ್ ಸುಗತ್ ಗುರೂಜಿ ಎಂಬುವರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Related Articles

Related image1
10 ವರ್ಷ ಪ್ರೀತಿಸಿದವಳಿಗೆ ಮೋಸ, ₹4.5 ಲಕ್ಷ ವಂಚನೆ, ಬೇರೆ ಮದುವೆಗೆ ಮುಂದಾದ ಯುವಕನ ಮನೆಮುಂದೆ ಪ್ರಿಯತಮೆ ಗಲಾಟೆ!
Related image2
ನವೋದಯ ಪ್ರವೇಶ ಪರೀಕ್ಷೆಯಲ್ಲಿ ಶಿಕ್ಷಕನಿಂದಲೇ ಮೋಸ! ಮಗನಿಗೆ ಅಕ್ರಮವಾಗಿ ಉತ್ತರ ಹೇಳಿಕೊಟ್ಟ ತಂದೆ!
34
₹2.05 ಲಕ್ಷ ಹಣ ವರ್ಗಾವಣೆ
Image Credit : getty, twitter

₹2.05 ಲಕ್ಷ ಹಣ ವರ್ಗಾವಣೆ

ಸಾಮಾಜಿಕ ಜಾಲತಾಣದಲ್ಲಿ ‘ಕಷ್ಟಕ್ಕೆ ಪರಿಹಾರ’ ಎಂದು ಜಾಹೀರಾತು ಪ್ರಕಟಿಸಲಾಗಿತ್ತು. ಆ ಜಾಹೀರಾತು ಗಮನಿಸಿದ ಯುವತಿ ತನಗೆ ಮದುವೆ ಆಗುತ್ತದೆಯೇ ಎನ್ನುವುದರ ಬಗ್ಗೆ ಕರೆ ಮಾಡಿ ವಿಚಾರಿಸಿದ್ದಾರೆ. ಅದಕ್ಕೆ ಗುರೂಜಿ ಮದುವೆ ಆಗುತ್ತದೆ. ಆದರೆ, ಅದಕ್ಕೆ ಸ್ವಲ್ಪ ಹಣ ಖರ್ಚಾಗುತ್ತದೆ ಎಂದು ಹೇಳಿದ್ದರು.

ಇದಕ್ಕೆ ಒಪ್ಪಿಕೊಂಡ ಯುವತಿ ಗುರೂಜಿ ಸೂಚನೆ ಮೇರೆಗೆ ಆತ ನೀಡಿದ್ದ ನಂಬರ್‌ಗೆ ಆನ್‌ಲೈನ್ ಮೂಲಕ ಕಳೆದ ಡಿಸೆಂಬರ್‌ನಲ್ಲಿ ಹಂತ-ಹಂತವಾಗಿ ₹2.05 ಲಕ್ಷ ಹಣ ವರ್ಗಾವಣೆ ಮಾಡಿದ್ದಾರೆ.

ಇದನ್ನೂ ಓದಿ: Bengaluru: ನಕಲಿ ಬಿಲ್‌ ಸೃಷ್ಟಿಸಿ ಸರ್ಕಾರಕ್ಕೆ ₹1464 ಕೋಟಿ ವಂಚನೆ ಮಾಡಿದ್ದ ಇಬ್ಬರ ಬಂಧನ

44
ಗುರೂಜಿ ಬೆದರಿಕೆ
Image Credit : Getty

ಗುರೂಜಿ ಬೆದರಿಕೆ

ಮದುವೆ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದರಿಂದ ಯುವತಿ ಹಣ ವಾಪಸ್ ಕೇಳಿದ್ದಾರೆ. ಅದಕ್ಕೆ ಹಣ ನೀಡುವುದಿಲ್ಲ. ಏನು ಮಾಡುತ್ತಿಯೋ ಮಾಡಿಕೋ ಎಂದು ಗುರೂಜಿ ಬೆದರಿಕೆ ಹಾಕಿದ್ದಾನೆ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾರೆ. 

ಈ ಸಂಬಂಧ ಆಡುಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾತುಕತೆ, ಹಣ ವರ್ಗಾವಣೆ ಎಲ್ಲವೂ ಆನ್‌ಲೈನ್ ಮೂಲಕ ನಡೆದಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಕುಟುಂಬದ ರಂಪಾಟಕ್ಕೆ 29ರ ಯುವಕ ಬಲಿ

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಬೆಂಗಳೂರು
ಹಣ (Hana)

Latest Videos
Recommended Stories
Recommended image1
ಇನ್ಫೋಸಿಸ್‌ನ 250 ಕೋಟಿಯ 53 ಎಕರೆ ಅಕ್ರಮ ರಿಜಿಸ್ಟರ್‌ ಕೇಸ್‌ನಲ್ಲಿ ರೋಚಕ ತಿರುವು
Recommended image2
ಬಸ್‌ ಟಿಕೆಟ್ ಮತ್ತೊಬ್ಬರಿಗೆ ವಿತರಿಸುವಂತಿಲ್ಲ : ಹೈಕೋರ್ಟ್‌
Recommended image3
ಬೆಂಗಳೂರು ಚಿತ್ರಸಂತೆಗೆ ಜನಸಾಗರ : ₹3.50 ಲಕ್ಷಕ್ಕೆ ಮಾರಾಟವಾದ 104 ವ್ಯಕ್ತಿಗಳಿರುವ ಚಿತ್ರ
Related Stories
Recommended image1
10 ವರ್ಷ ಪ್ರೀತಿಸಿದವಳಿಗೆ ಮೋಸ, ₹4.5 ಲಕ್ಷ ವಂಚನೆ, ಬೇರೆ ಮದುವೆಗೆ ಮುಂದಾದ ಯುವಕನ ಮನೆಮುಂದೆ ಪ್ರಿಯತಮೆ ಗಲಾಟೆ!
Recommended image2
ನವೋದಯ ಪ್ರವೇಶ ಪರೀಕ್ಷೆಯಲ್ಲಿ ಶಿಕ್ಷಕನಿಂದಲೇ ಮೋಸ! ಮಗನಿಗೆ ಅಕ್ರಮವಾಗಿ ಉತ್ತರ ಹೇಳಿಕೊಟ್ಟ ತಂದೆ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved