MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • Bengaluru Urban
  • ಬೆಂಗಳೂರಿನ ಶಿವಾಜಿನಗರದಲ್ಲಿ ಒತ್ತುವರಿ ತೆರವಿಗೆ ಹೋದ ಜಿಬಿಎ ಅಧಿಕಾರಿಗಳನ್ನ ಅಟ್ಟಾಡಿಸಿ ಹೊಡೆದ ಕಿಡಿಗೇಡಿಗಳು!

ಬೆಂಗಳೂರಿನ ಶಿವಾಜಿನಗರದಲ್ಲಿ ಒತ್ತುವರಿ ತೆರವಿಗೆ ಹೋದ ಜಿಬಿಎ ಅಧಿಕಾರಿಗಳನ್ನ ಅಟ್ಟಾಡಿಸಿ ಹೊಡೆದ ಕಿಡಿಗೇಡಿಗಳು!

ಬೆಂಗಳೂರಿನ ಶಿವಾಜಿನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವುಗೊಳಿಸಲು ಹೋದ ಜಿಬಿಎ ಅಧಿಕಾರಿಗಳ ಮೇಲೆ ಸಮಾಜಘಾತುಕ ಶಕ್ತಿಗಳು ಪೆಪ್ಪರ್ ಸ್ಪ್ರೇ ಮತ್ತು ದೊಣ್ಣೆಗಳಿಂದ ಹಲ್ಲೆ ನಡೆಸಿವೆ. ಈ ಘಟನೆಯಲ್ಲಿ ಎಇಇ ಮಾಧವ ರಾವ್ ಸೇರಿದಂತೆ ನಾಲ್ವರು ಗಾಯಗೊಂಡಿದ್ದು, ಪೊಲೀಸರು ಏಳು ಆರೋಪಿಗಳನ್ನು ಬಂಧಿಸಿದ್ದಾರೆ.

2 Min read
Author : Sathish Kumar KH
Published : Jul 21 2026, 03:26 PM IST
Share this Photo Gallery
  • FB
  • TW
  • Linkdin
  • Whatsapp
17
Image Credit : Asianet News

ಬೆಂಗಳೂರು (ಜು.21): ಸಿಲಿಕಾನ್ ಸಿಟಿ ಬೆಂಗಳೂರಿನ ಹೃದಯಭಾಗವಾದ ಶಿವಾಜಿನಗರದಲ್ಲಿ (Shivajinagar) ಮಂಗಳವಾರ ಬೆಳಿಗ್ಗೆ ರಣರಂಗದಂತಹ ವಾತಾವರಣ ನಿರ್ಮಾಣವಾಗಿತ್ತು. ಫುಟ್‌ಪಾತ್ ಒತ್ತುವರಿ (Footpath Encroachment) ತೆರವುಗೊಳಿಸಲು ಹೋದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಅಧಿಕಾರಿಗಳ ಮೇಲೆ ಸಮಾಜಘಾತುಕ ಶಕ್ತಿಗಳು ಪೆಪ್ಪರ್ ಸ್ಪ್ರೇ ಹಾಗೂ ದೊಣ್ಣೆಗಳಿಂದ ಭೀಕರವಾಗಿ ಹಲ್ಲೆ ನಡೆಸಿದ್ದಾರೆ. ಈ ಘಟನೆಯಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರ (AEE) ಮಾಧವ ರಾವ್ ಸೇರಿದಂತೆ ನಾಲ್ವರು ಅಧಿಕಾರಿಗಳು ತೀವ್ರವಾಗಿ ಗಾಯಗೊಂಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
27
Image Credit : Asianet News

ಘಟನೆಯ ವಿವರ:

ಬೆಳಿಗ್ಗೆ 10 ಗಂಟೆ ಸುಮಾರಿಗೆ ಜಿಬಿಎ (GBA) ಅಧಿಕಾರಿಗಳು ಜೆಸಿಬಿ (JCB) ಯೊಂದಿಗೆ ಶಿವಾಜಿನಗರ ಬಸ್ ನಿಲ್ದಾಣದ ಬಳಿ ಒತ್ತುವರಿ ತೆರವು ಕಾರ್ಯಾಚರಣೆಗೆ ಮುಂದಾಗಿದ್ದರು. ಸುಮಾರು 10ಕ್ಕೂ ಹೆಚ್ಚು ಅಂಗಡಿಗಳು ಫುಟ್‌ಪಾತ್ ಒತ್ತುವರಿ ಮಾಡಿಕೊಂಡಿದ್ದವು. ಈ ವೇಳೆ ತೆರವು ಕಾರ್ಯಾಚರಣೆ ಆರಂಭವಾಗುತ್ತಿದ್ದಂತೆ ಸ್ಥಳೀಯ ವ್ಯಾಪಾರಿಗಳು ಮತ್ತು ಅಧಿಕಾರಿಗಳ ನಡುವೆ ತೀವ್ರ ವಾಗ್ವಾದ (Heated Argument) ನಡೆಯಿತು.

Related Articles

Related image1
ಶಿವಾಜಿನಗರ ಮೆಟ್ರೋ ನಿಲ್ದಾಣಕ್ಕೆ ‘ಛತ್ರಪತಿ ಶಿವಾಜಿ ಮಹಾರಾಜ ನಿಲ್ದಾಣ’ ಎಂದು ನಾಮಕರಣಕ್ಕೆ ಆಗ್ರಹ
Related image2
ಶಿವಾಜಿನಗರ ಮೆಟ್ರೋ ಹೆಸರು ಬದಲಾವಣೆ ವಿವಾದ, ಬೆಳಗಾವಿ ಕೆದಕೋ ಫಡ್ನವೀಸ್‌ ಬೆಂಗಳೂರು ವಿಚಾರದಲ್ಲೂ ಅಡ್ಡಗಾಲು ಯಾಕೆ?
37
Image Credit : Asianet News

ಈ ಸಂದರ್ಭದಲ್ಲಿ ಏಕಾಏಕಿ ಇನೋವಾ (Innova) ಕಾರಿನಲ್ಲಿ ಬಂದ ನಮ್ಮ ಕರ್ನಾಟಕ ಸೇನೆ ರಾಜ್ಯಾಧ್ಯಕ್ಷ ಬಸವರಾಜ್ ಹಾಗೂ ಬೆಂಬಲಿಗರು ಅಧಿಕಾರಿಗಳ ಮೇಲೆ ಮುಗಿಬಿದ್ದಿದ್ದಾರೆ. ಮೊದಲು ಅಧಿಕಾರಿಗಳ ಕಣ್ಣಿಗೆ ಪೆಪ್ಪರ್ ಸ್ಪ್ರೇ (Pepper Spray) ಸಿಂಪಡಿಸಿ ಮಂಕುಬೂದಿ ಎರೆಚಿದ ಪುಂಡರು, ನಂತರ ಚೇರ್, ಹೆಲ್ಮೆಟ್ ಮತ್ತು ದೊಣ್ಣೆಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ದಾಳಿಯ ತೀವ್ರತೆಗೆ ಹೆದರಿದ ಜೆಸಿಬಿ ಚಾಲಕ ಮತ್ತು ಕೆಲವು ಅಧಿಕಾರಿಗಳು ಸ್ಥಳದಿಂದ ಓಡಿ ಹೋಗಿದ್ದಾರೆ.

47
Image Credit : Asianet News

ಅಧಿಕಾರಿಗಳ ಆಕ್ರೋಶ ಮತ್ತು ಪ್ರತಿಭಟನೆ :

ತಮ್ಮ ಸಹೋದ್ಯೋಗಿಗಳ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಜಿಬಿಎ (GBA) ನೌಕರರು ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯ (Commercial Street Police Station) ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು. ಜಿಬಿಎ ನೌಕರ ಸಂಘದ ಅಧ್ಯಕ್ಷ ಅಮೃತ್ ರಾಜ್ ಮಾತನಾಡಿ, "ಪೊಲೀಸರ ಕಣ್ಣೆದುರೇ ಅಧಿಕಾರಿಗಳ ಮೇಲೆ ಹಲ್ಲೆಯಾಗಿದೆ. ನಮಗೆ ಯಾವುದೇ ಭದ್ರತೆ ನೀಡಿಲ್ಲ. ಕೂಡಲೇ ಆರೋಪಿಗಳನ್ನು ಬಂಧಿಸದಿದ್ದರೆ ಇಡೀ ಬೆಂಗಳೂರು ಮಹಾನಗರ ಪಾಲಿಕೆಯ ಎಲ್ಲಾ ಕೆಲಸಗಳನ್ನು ಸ್ಥಗಿತಗೊಳಿಸುತ್ತೇವೆ" ಎಂದು ಎಚ್ಚರಿಕೆ ನೀಡಿದ್ದಾರೆ.

57
Image Credit : Asianet News

ಪೊಲೀಸರ ಕ್ರಮ :

ಪೂರ್ವ ವಿಭಾಗದ ಡಿಸಿಪಿ (DCP East) ವಿಕ್ರಂ ಅಮಟೆ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, "ಅಧಿಕಾರಿಗಳ ಮೇಲೆ ಅಟ್ಯಾಕ್ (Attack) ಮಾಡಿದವರ ಪೈಕಿ ಈಗಾಗಲೇ ಏಳು ಜನರನ್ನು ವಶಕ್ಕೆ ಪಡೆದಿದ್ದೇವೆ. ಆರೋಪಿಗಳು ಪೆಪ್ಪರ್ ಸ್ಪ್ರೇ ಹಾಗೂ ದೊಣ್ಣೆಗಳಿಂದ ಹಲ್ಲೆ ಮಾಡಿರುವುದು ದೃಢಪಟ್ಟಿದೆ. ಪೊಲೀಸರ ಪಾತ್ರದ ಬಗ್ಗೆಯೂ ತನಿಖೆ ನಡೆಸಲಾಗುವುದು" ಎಂದು ತಿಳಿಸಿದ್ದಾರೆ. ಹಲ್ಲೆಗೊಳಗಾದ ಮಾಧವ ರಾವ್ ಮತ್ತು ಇತರ ಮೂವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

67
Image Credit : Asianet News

ಸಚಿವ ಕೃಷ್ಣ ಬೈರೇಗೌಡ ಕಠಿಣ ಎಚ್ಚರಿಕೆ:

ಈ ಘಟನೆಯ ಬಗ್ಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ಇವರು ಬಡ ವ್ಯಾಪಾರಿಗಳಲ್ಲ, ಇವರು ಸಮಾಜಘಾತುಕ ಶಕ್ತಿಗಳು. ಸುಪ್ರೀಂ ಕೋರ್ಟ್ (Supreme Court) ಆದೇಶ ಜಾರಿಗೊಳಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಯಾರನ್ನೂ ಬಿಡುವುದಿಲ್ಲ. ಎಲ್ಲರನ್ನೂ ಬಂಧಿಸುವಂತೆ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ಅಧಿಕಾರಿಗಳ ಪರವಾಗಿ ನಾವು ದೃಢವಾಗಿ ನಿಲ್ಲುತ್ತೇವೆ" ಎಂದು ತಿಳಿಸಿದ್ದಾರೆ.

77
Image Credit : Asianet News

ಮತ್ತೆ ಆರಂಭವಾದ ಕಾರ್ಯಾಚರಣೆ :

ಹಲ್ಲೆಯಿಂದ ಅಧಿಕಾರಿಗಳು ಹಿಂಜರಿಯುವ ಬದಲು ಮತ್ತಷ್ಟು ಹಠಕ್ಕೆ ಬಿದ್ದಿದ್ದಾರೆ. ದಾಳಿ ನಡೆದ ಕೆಲವೇ ಗಂಟೆಗಳಲ್ಲಿ ಮತ್ತೊಂದು ಜೆಸಿಬಿ ತರಿಸಿ, ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಅರ್ಧಕ್ಕೆ ನಿಂತಿದ್ದ ಒತ್ತುವರಿ ತೆರವು (Demolition Drive) ಕಾರ್ಯಾಚರಣೆಯನ್ನು ಅಧಿಕಾರಿಗಳು ಯಶಸ್ವಿಯಾಗಿ ಮುಂದುವರಿಸಿದ್ದಾರೆ. ಇದು ಸಾರ್ವಜನಿಕ ಆಸ್ತಿ ರಕ್ಷಣೆಯಲ್ಲಿ ಸರ್ಕಾರದ ದೃಢ ನಿಲುವನ್ನು ತೋರಿಸಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ಬೆಂಗಳೂರು
ಬೆಂಗಳೂರು ನಗರ
ಗ್ರೇಟರ್ ಬೆಂಗಳೂರು ಪ್ರಾಧಿಕಾರ
ಬೆಂಗಳೂರು ಮಹಾನಗರ

Latest Videos
Recommended Stories
Recommended image1
Bengaluru: ಸಮಗ್ರ ಅಭಿವೃದ್ಧಿ ಟೆಂಡರ್ ರದ್ದು, ಶೀಘ್ರದಲ್ಲೇ ಔಟರ್ ರಿಂಗ್ ರೋಡ್ ಒತ್ತುವರಿ ತೆರವಿಗೆ ಜಿಬಿಎ ಸಿದ್ಧತೆ
Recommended image2
ಬೆಂಗಳೂರು ಉಪನಗರ ರೈಲು ಯೋಜನೆಗೆ ಬೂಸ್ಟ್: ಮತ್ತಿಕೆರೆ to ಯಶವಂತಪುರ ₹199 ಕೋಟಿ ವೆಚ್ಚದ ‘ಡಬಲ್ ಡೆಕ್ಕರ್’ ಕಾರಿಡಾರ್!
Recommended image3
ಬೆಂಗಳೂರು ಆಟೋ ಚಾಲಕನ ಅಪರೂಪದ ಪ್ರೇಮ ಪಯಣ: ಮೃತ ಪತ್ನಿಯ ನೆನಪಲ್ಲಿ ದಿನವೂ ಹೂವಿನ ನಮನ
Related Stories
Recommended image1
ಶಿವಾಜಿನಗರ ಮೆಟ್ರೋ ನಿಲ್ದಾಣಕ್ಕೆ ‘ಛತ್ರಪತಿ ಶಿವಾಜಿ ಮಹಾರಾಜ ನಿಲ್ದಾಣ’ ಎಂದು ನಾಮಕರಣಕ್ಕೆ ಆಗ್ರಹ
Recommended image2
ಶಿವಾಜಿನಗರ ಮೆಟ್ರೋ ಹೆಸರು ಬದಲಾವಣೆ ವಿವಾದ, ಬೆಳಗಾವಿ ಕೆದಕೋ ಫಡ್ನವೀಸ್‌ ಬೆಂಗಳೂರು ವಿಚಾರದಲ್ಲೂ ಅಡ್ಡಗಾಲು ಯಾಕೆ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved