MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • Bengaluru Urban
  • Bengaluru Rains: ಪದೇ ಪದೇ ಜಾಲವೃತಗೊಳ್ಳುವ 10 ಪ್ರದೇಶಗಳಲ್ಲಿ ಮಳೆ ನೀರು ನಿಲ್ಲದಂತೆ ಕ್ರಮ

Bengaluru Rains: ಪದೇ ಪದೇ ಜಾಲವೃತಗೊಳ್ಳುವ 10 ಪ್ರದೇಶಗಳಲ್ಲಿ ಮಳೆ ನೀರು ನಿಲ್ಲದಂತೆ ಕ್ರಮ

ಮಳೆಗಾಲದಲ್ಲಿ ಜಲಾವೃತವಾಗುವ 10 ಪ್ರಮುಖ ಪ್ರದೇಶಗಳಲ್ಲಿ ತಕ್ಷಣದಿಂದ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಪಾಲಿಕೆ ಆಯುಕ್ತರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಡ್ಡಾದಿಡ್ಡಿ ವಾಹನ ಪಾರ್ಕಿಂಗ್ ತಡೆ ಬನ್ನೇರುಘಟ್ಟ ರಸ್ತೆಯ ಸಂಚಾರ ದಟ್ಟಣೆ ನಿಯಂತ್ರಣದ ಬಗ್ಗೆಯೂ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.

1 Min read
Author : Kannadaprabha News
Published : Jun 13 2026, 08:52 AM IST
Share this Photo Gallery
  • FB
  • TW
  • Linkdin
  • Whatsapp
15
ಬೆಂಗಳೂರು ಮಳೆ
Image Credit : Asianet News

ಬೆಂಗಳೂರು ಮಳೆ

ದಕ್ಷಿಣ ಪಾಲಿಕೆ ವಿಭಾಗದಲ್ಲಿ ಮಳೆಗಾಲದಲ್ಲಿ ಜಲಾವೃತವಾಗುವ 10 ಪ್ರದೇಶಗಳಲ್ಲಿ ನೀರು ನಿಲ್ಲದಂತೆ ತಕ್ಷಣದಿಂದ ಕ್ರಮ ಕೈಗೊಳ್ಳುವಂತೆ ಪಾಲಿಕೆ ಆಯುಕ್ತ ಕೆ.ಎನ್.ರಮೇಶ್ ಅಧಿಕಾರಿಗಳಿಗೆ ತಿಳಿಸಿದರು. ಆಯುಕ್ತರು ಶುಕ್ರವಾರ ಸಂಚಾರ ಪೊಲೀಸರು ಹಾಗೂ ಪಾಲಿಕೆ ಅಧಿಕಾರಿಗಳ ಸಭೆ ನಡೆಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
ಜಲಾವೃತವಾಗುವ 10 ಪ್ರದೇಶಗಳು
Image Credit : AFP

ಜಲಾವೃತವಾಗುವ 10 ಪ್ರದೇಶಗಳು

ಮಳೆಗಾಲದಲ್ಲಿ ಜಲಾವೃತವಾಗುವ ಪ್ರದೇಶಗಳಾದ ಹುಳಿಮಾವು ಕೆರೆ ಜಂಕ್ಷನ್, ಸಾಗರ್ ಜಂಕ್ಷನ್‌ನಿಂದ ಸಾಗರ್ ಆಸ್ಪತ್ರೆ, ಹೆಚ್.ಎಸ್.ಆರ್ ಲೇಔಟ್ 14ನೇ ಮುಖ್ಯ ರಸ್ತೆ, ಸೋನಿ ವರ್ಲ್ಡ್ ಜಂಕ್ಷನ್, ಹೊರವರ್ತುಲ ರಸ್ತೆ, ಹೆಚ್.ಎಸ್.ಆರ್ ಲೇಔಟ್ 5ನೇ ಮುಖ್ಯ ರಸ್ತೆ, ಶ್ರೀ ರಂಗಂ ಜಂಕ್ಷನ್, ಬೆಳ್ಳಂದೂರು - ಇಬ್ಬಲೂರು ಜಂಕ್ಷನ್, ವಿಪ್ರೋ ಜಂಕ್ಷನ್-ಸರ್ಜಾಪುರ ರಸ್ತೆ, ರೂಪೇನ ಅಗ್ರಹಾರ, ಮಡಿವಾಳ ಅಯ್ಯಪ್ಪ ಜಂಕ್ಷನ್‌ಗಳಲ್ಲಿ ಮಳೆ ಸಂದರ್ಭದಲ್ಲಿ ತೀವ್ರ ನಿಗಾ ವಹಿಸಿ ತುರ್ತು ಪರಿಹಾರ ಕ್ರಮ ವಹಿಸುವಂತೆ ಎಂಜಿನಿಯರ್‌ಗಳಿಗೆ ತಿಳಿಸಿದರು.

Related Articles

Related image1
ಬೆಂಗಳೂರು ಮಳೆ ನೀರಿನ ಪ್ರವಾಹದಲ್ಲಿ ಸರ್ಫಿಂಗ್ ಆಡುತ್ತಿರುವ ಡಿ.ಕೆ. ಶಿವಕುಮಾರ್; ಬಿಜೆಪಿ ಹಂಚಿಕೊಂಡ ವಿಡಿಯೋ ವೈರಲ್!
Related image2
ಬೆಂಗಳೂರು ಮಳೆ ಒಂದು ಮಗು ಸಾವು: ಮಳೆ ಅವಾಂತರಕ್ಕೆ ಬಿಬಿಎಂಪಿ ಸಹಾಯವಾಣಿ 1533ಗೆ ಕರೆ ಮಾಡಿ!
35
 ವಾಹನ ಪಾರ್ಕಿಂಗ್
Image Credit : Asianet News

ವಾಹನ ಪಾರ್ಕಿಂಗ್

ರಸ್ತೆಗಳಲ್ಲಿ ಅಡ್ಡಾದಿಡ್ಡಿ ವಾಹನ ಪಾರ್ಕಿಂಗ್ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಜಯನಗರಕ್ಕೆ ಮೂರು ವಾಹನ ಹಾಗೂ ಬಿಟಿಎಂ ಲೇಔಟ್, ಬೊಮ್ಮನಹಳ್ಳಿ ಮತ್ತು ಬೆಳ್ಳಂದೂರು ಭಾಗಕ್ಕೆ ಮೂರು ವಾಹನಗಳನ್ನು ಬಳಸಿಕೊಳ್ಳಬೇಕು, ಟೋಯಿಂಗ್ ಮಾಡಿದ ವಾಹನಗಳ ನಿಲುಗಡೆಗೆ ಮಲ್ಲಸಂದ್ರ ಮೈದಾನ ಹಾಗೂ ಎಜಿಎಸ್ ಲೇಔಟ್ ಮೈದಾನ ಬಳಸಿಕೊಳ್ಳಲು ಆಯುಕ್ತರು ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದರು.

45
ಲೂಪ್ ವ್ಯವಸ್ಥೆ
Image Credit : Asianet News

ಲೂಪ್ ವ್ಯವಸ್ಥೆ

ಬನ್ನೇರುಘಟ್ಟ ಮುಖ್ಯರಸ್ತೆ ನೈಸ್ ಜಂಕ್ಷನ್ ನಲ್ಲಿ ಉಂಟಾಗುತ್ತಿರುವ ವಿಪರೀತ ಸಂಚಾರ ದಟ್ಟಣೆ ನಿಯಂತ್ರಿಸಲು ಮೈಸೂರು ರಸ್ತೆಯ ನೈಸ್ ಜಂಕ್ಷನ್ ಮಾದರಿಯಲ್ಲಿ ಬನ್ನೇರುಘಟ್ಟ ಮುಖ್ಯರಸ್ತೆ ನೈಸ್ ಜಂಕ್ಷನ್ ನಲ್ಲಿ ಲೂಪ್ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳಿಗೆ ತಿಳಿಸಿದರು.

55
 ಕೊಣನಕುಂಟೆ - ಫೋರಂ ಮಾಲ್
Image Credit : Asianet News

ಕೊಣನಕುಂಟೆ - ಫೋರಂ ಮಾಲ್

ಕನಕಪುರ ಮುಖ್ಯ ರಸ್ತೆಯ ಕೊಣನಕುಂಟೆ - ಫೋರಂ ಮಾಲ್ ಹಾಗೂ ಸಾರಕ್ಕಿ ಜಂಕ್ಷನ್‌ ಬಳಿ ( ಮೆಟ್ರೋ ನಿಲ್ದಾಣ) ಎಡತಿರುವನ್ನು ಮುಕ್ತಗೊಳಿಸಿ ಸುಗಮ ಸಂಚಾರಕ್ಕಾಗಿ ಪೊಲೀಸರ ಕೋರಿಕೆ ಮೇರೆಗೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು. 

ಸಭೆಯಲ್ಲಿ ಪಾಲಿಕೆ ಹೆಚ್ಚುವರಿ ಆಯುಕ್ತ ಡಾ.ನವೀನ್ ಕುಮಾರ್ ರಾಜು, ದಕ್ಷಿಣ ಸಂಚಾರ ವಿಭಾಗದ ಡಿಸಿಪಿ ಗೋಪಾಲ್ ಎಂ. ಬ್ಯಾಕೋಡ್, ಮುಖ್ಯ ಎಂಜಿನಿಯರ್ ಬಸವರಾಜ್ ಕಬಾಡೆ ಉಪಸ್ಥಿತರಿದ್ದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಬೆಂಗಳೂರು ಹವಾಮಾನ
ಬೆಂಗಳೂರು
ಬೆಂಗಳೂರು ಮಳೆ
ಮಳೆ

Latest Videos
Recommended Stories
Recommended image1
ಕೇಂದ್ರದ AI Mission ಸಹಭಾಗಿತ್ವದಲ್ಲಿ 50 ಸರ್ಕಾರಿ ಕಾಲೇಜಲ್ಲಿ ಹೈಟೆಕ್‌ ಎಐ ಲ್ಯಾಬ್‌ ಸ್ಥಾಪನೆಗೆ ಮುಂದಾದ ಸರ್ಕಾರ!
Recommended image2
ಬೆಂಗಳೂರಿನಲ್ಲಿನ ಪ್ರತಿಭಟನೆಗೆ ತಮಿಳಿಗರನ್ನು ಆಹ್ವಾನಿಸಿದ ಕಾಕ್ರೋಚ್ ಜನತಾ ಪಾರ್ಟಿ
Recommended image3
MLC Naseer Ahmed: ಸಾಲಕ್ಕೆ ಪರ್ಸನಲ್ ಗ್ಯಾರಂಟರ್; ನಸೀರ್ ದಿವಾಳಿ ಎಂದು ಘೋಷಿಸಿದ NCLT: ಶಾಸಕ ಸ್ಥಾನಕ್ಕೆ ಈಗ ಕುತ್ತು?
Related Stories
Recommended image1
ಬೆಂಗಳೂರು ಮಳೆ ನೀರಿನ ಪ್ರವಾಹದಲ್ಲಿ ಸರ್ಫಿಂಗ್ ಆಡುತ್ತಿರುವ ಡಿ.ಕೆ. ಶಿವಕುಮಾರ್; ಬಿಜೆಪಿ ಹಂಚಿಕೊಂಡ ವಿಡಿಯೋ ವೈರಲ್!
Recommended image2
ಬೆಂಗಳೂರು ಮಳೆ ಒಂದು ಮಗು ಸಾವು: ಮಳೆ ಅವಾಂತರಕ್ಕೆ ಬಿಬಿಎಂಪಿ ಸಹಾಯವಾಣಿ 1533ಗೆ ಕರೆ ಮಾಡಿ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved