MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Bengaluru Urban
  • ಚಿನ್ನದಂಥ ಹೆಂಡ್ತಿ ಇದ್ದರೂ ಇನ್ನೊಬ್ಬಳ ಮೋಹಕ್ಕೆ ಬಿದ್ದ, ಪ್ರಶ್ನೆ ಮಾಡಿದ್ದಕ್ಕೆ ವರದಕ್ಷಿಣೆ ಕಿರುಕುಳ ಕೊಟ್ಟ!

ಚಿನ್ನದಂಥ ಹೆಂಡ್ತಿ ಇದ್ದರೂ ಇನ್ನೊಬ್ಬಳ ಮೋಹಕ್ಕೆ ಬಿದ್ದ, ಪ್ರಶ್ನೆ ಮಾಡಿದ್ದಕ್ಕೆ ವರದಕ್ಷಿಣೆ ಕಿರುಕುಳ ಕೊಟ್ಟ!

ಬೆಂಗಳೂರಿನಲ್ಲಿ ಪತಿಯ ಅಕ್ರಮ ಸಂಬಂಧ ಮತ್ತು ವರದಕ್ಷಿಣೆ ಕಿರುಕುಳದಿಂದ ಬೇಸತ್ತ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂರು ವರ್ಷಗಳ ಹಿಂದೆ ವಿವಾಹವಾದ ದಂಪತಿಗೆ ಒಂದು ಮಗು ಇದೆ. ಪತಿಯ ಕಿರುಕುಳದಿಂದ ಬೇಸತ್ತು ಪತ್ನಿ ನೇಣಿಗೆ ಶರಣಾಗಿದ್ದಾರೆ.

1 Min read
Santosh Naik
Published : Sep 01 2025, 02:45 PM IST
Share this Photo Gallery
  • FB
  • TW
  • Linkdin
  • Whatsapp
18
Image Credit : X

ಚಿನ್ನದಂಥ ಹೆಂಡ್ತಿ ಇದ್ದರೂ ಇನ್ನೊಬ್ಬಳ ಮೋಹಕ್ಕೆ ಪತಿರಾಯ ಬಿದ್ದಿದ್ದ. ಇದನ್ನು ಹೆಂಡ್ತಿ ಪ್ರಶ್ನೆ ಮಾಡಿದ್ದಕ್ಕೆ ಅವಳಿಗೆ ವರದಕ್ಷಿಣೆ ಕಿರುಕುಳ ಕೊಡೋಕೆ ಶುರು ಮಾಡಿದ್ದ. ಗಂಡ ಹಿಂಸೆಯಿಂದ ಬೇಸತ್ತ ಪತ್ನಿ ತನ್ನ ಪುಟ್ಟ ಹೆಣ್ಣುಮಗುವನ್ನು ಬಿಟ್ಟು ನೇಣಿಗೆ ಕೊರಳೊಡ್ಡಿರುವ ಘಟನೆ ಬೆಂಗಳೂರಿನಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.

28
Image Credit : Asianet News

ಬಾಗಲಗುಂಟೆಯ ದಾಸರಹಳ್ಳಿಯಲ್ಲಿ ಈ ಘಟನೆ ನಡೆದಿದೆ. 28 ವರ್ಷದ ಪೂಜಶ್ರೀ ಗಂಡನ ಕಿರುಕುಳ ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸಿಡೇದಹಳ್ಳಿಯಲ್ಲಿ ಘಟನೆ ನಡೆದಿದೆ.

Related Articles

Related image1
ಗೌರಿ ಗಣೇಶ ಹಬ್ಬಕ್ಕೆ ತವರು ಮನೆಗೆ ಕರೆದಿಲ್ಲ ಅಂತಾ ಗೃಹಿಣಿ ಆತ್ಮಹತ್ಯೆ!
Related image2
ಸಹಪಾಠಿಗಳ ಕಿರುಕುಳ, ಬಾಗಲಕೋಟೆಯಲ್ಲಿ ಕಾಲೇಜ್‌ ವಿದ್ಯಾರ್ಥಿನಿ ಆತ್ಮಹತ್ಯೆ!
38
Image Credit : Asianet News

ಮೂರು ವರ್ಷದ ಹಿಂದೆ ಮನೆಯವರ ನಿಶ್ಚಯದಂತೆ ನಂದೀಶ್‌ ಅವರನ್ನು ಪೂಜಶ್ರೀ ವಿವಾಹವಾಗಿದ್ದರು. ನಂದೀಶ್ ಹಾಗೂ ಪೂಜಶ್ರೀಗೆ ಒಂದು ಹೆಣ್ಣು ಮಗು ಕೂಡ ಇದೆ.

48
Image Credit : Asianet News

ನಂದೀಶ್‌ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದರೆ, ಪೂಜಶ್ರೀ ಕೂಡಾ ಖಾಸಗಿ ಬ್ಯಾಂಕ್ ನಲ್ಲಿ ಕ್ಯಾಷಿಯರ್ ಆಗಿ ವೃತ್ತಿ ಮಾಡುತ್ತಿದ್ದರು.

58
Image Credit : Asianet News

ಮದುವೆಯಾದ ಒಂದು ವರ್ಷದ ನಂತರ ನಂದೀಶ್ ಗೆ ಅಕ್ರಮ ಸಂಬಂಧ ಇರುವುದು ಪೂಜಶ್ರೀಗೆ ಗೊತ್ತಾಗಿದೆ. ಇದೇ ವಿಚಾರಕ್ಕೆ ಪೂಜಶ್ರೀ ಪದೇ ಪದೇ ಪ್ರಶ್ನೆ ಮಾಡುತ್ತಿದ್ದಳು. ಈ ವೇಳೆ ನಂದೀಶ್ ನಿಮ್ಮ ತಾಯಿ ಮನೆಯಿಂದ ವರದಕ್ಷಿಣೆ ತೆಗೆದುಕೊಂಡು ಬಾ ಎಂದು ಜಗಳವಾಡುತ್ತಿದ್ದ.

68
Image Credit : Asianet News

ಎರಡು ಮೂರು ಬಾರಿ ಇವರ ನಡುವೆ ರಾಜಿ ಪಂಚಾಯಿತಿ ಕೂಡ ನಡೆದಿತ್ತು. ಕಿರುಕುಳ ನೀಡೋದಿಲ್ಲ ಅಂತ ಹೇಳಿ ಪೂಜಶ್ರೀಯನ್ನು ನಂದೀಶ್ ಕರೆದುಕೊಂಡು ಹೋಗುತ್ತಿದ್ದ. ಮೂರು ದಿನಗಳ ಹಿಂದೆ ನಂದೀಶ್‌ ಇದೇ ರೀತಿ ಮತ್ತೆ ಜಗಳವಾಡಿದ್ದ.

78
Image Credit : Asianet News

ಹಲ್ಲೆ ಮಾಡಿದ್ದ ಹಿನ್ನೆಲೆ ಪೂಜಶ್ರೀ ತಾಯಿ ಮನೆಗೆ ಬಂದಿದ್ದಳು. ಮರು ದಿನ‌ ಬೆಳಿಗ್ಗೆ ನಂದೀಶ್ ಕಥೆ ಕಟ್ಟಿ ಕರೆದುಕೊಂಡು ಹೋಗಿದ್ದ. ಭಾನುವಾರ ಬೆಳಗ್ಗೆ ಪೂಜಶ್ರೀ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

88
Image Credit : Asianet News

ಘಟನೆ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಕ್ಷಿಣೆ ಕಿರುಕುಳದ ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

About the Author

SN
Santosh Naik
ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ
ಕ್ರೈಮ್ ನ್ಯೂಸ್
ಬೆಂಗಳೂರು
ಆತ್ಮಹತ್ಯೆ
ಬೆಂಗಳೂರು ನಗರ
ಕೌಟುಂಬಿಕ ದೌರ್ಜನ್ಯ
ಕರ್ನಾಟಕ ಸುದ್ದಿ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved