MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Bengaluru Urban
  • ಸಂಸದ ತೇಜಸ್ವಿ ಸೂರ್ಯಗೆ ಕೂಡಿ ಬಂದ ಕಂಕಣ ಭಾಗ್ಯ: ವಧು ಯಾರು?

ಸಂಸದ ತೇಜಸ್ವಿ ಸೂರ್ಯಗೆ ಕೂಡಿ ಬಂದ ಕಂಕಣ ಭಾಗ್ಯ: ವಧು ಯಾರು?

ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯಗೆ ಕಂಕಣ ಭಾಗ್ಯ ಕೂಡಿ ಬಂದಿದೆ.  ಚೆನ್ನೈ ಮೂಲದ ಗಾಯಕಿ ಸಿವಶ್ರೀ ಜತೆ ಮುಂದಿನ ವರ್ಷ ಮಾರ್ಚ್ 4ರಂದು ತೇಜಸ್ವಿ ಸೂರ್ಯ ಹಸೆಮಣೆ ಏರಲಿದ್ದಾರೆೆಂಬ ಸುದ್ದಿಯನ್ನು ಕೆಲವು ಪತ್ರಿಕೆಗಳು ಪ್ರಕಟಿಸಿದ್ದು, ಈ ಬಗ್ಗೆ ಸಂಸದರು ಇನ್ನೂ ಅಧಿಕೃತವಾಗಿ ಘೋಷಿಸಬೇಕಷ್ಟೆ..  

2 Min read
Anusha Kb
Published : Dec 31 2024, 09:09 AM IST| Updated : Dec 31 2024, 10:43 AM IST
Share this Photo Gallery
  • FB
  • TW
  • Linkdin
  • Whatsapp
17

ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯಗೆ ಕಂಕಣ ಭಾಗ್ಯ ಕೂಡಿ ಬಂದಿದೆ.  ಚೆನ್ನೈ ಮೂಲದ ಗಾಯಕಿ ಸಿವಶ್ರೀ ಜತೆ ಮುಂದಿನ ವರ್ಷ ಮಾರ್ಚ್ 4ರಂದು ತೇಜಸ್ವಿ ಸೂರ್ಯ ಹಸೆಮಣೆ ಏರಲಿದ್ದಾರೆ.

27

ಬಿಜೆಪಿಯ  'ಯಂಗ್ ಆ್ಯಂಡ್ ಡೈನಾಮಿಕ್' ಮತ್ತು 'ಮೋಸ್ಟ್ ಎಲಿಜಿಬಲ್ ಬ್ಯಾಚುಲರ್' ಸಂಸದ ಎಂದೇ ಕರೆಯಿಸಿಕೊಂಡಿರುವ ತೇಜಸ್ವಿ ಸೂರ್ಯ ಅವರಿಗೆ ಮದುವೆ ಯಾವಾಗ ಎಂಬ ಪ್ರಶ್ನೆ ಹೋದಲೆಲ್ಲಾ ಸದಾ ಕಾಡುತ್ತಿತ್ತು. 

37

ಈಗ ಕೊನೆಗೂ ಅವರಿಗೆ ಕಂಕಣ ಭಾಗ್ಯ ಕೂಡಿ ಬಂದಿದ್ದು, ಚೆನ್ನೈ ಮೂಲದ ಗಾಯಕಿ ಜೊತೆ ಅವರು ಹಸೆಮಣೆ ಏರಲಿದ್ದಾರೆ ಎಂದು ವರದಿ ಆಗಿದೆ. 

47

ಹಲವು ಸಂದರ್ಭಗಳಲ್ಲಿ ತೇಜಸ್ವಿ ಸೂರ್ಯ ಅವರಲ್ಲಿ ಮದುವೆ ಬಗ್ಗೆ ಕೇಳಿದ್ದರೂ ಅವರು ಈ ವಿಚಾರದ ಬಗ್ಗೆ ಬಾಯ್ಬಿಟ್ಟಿರಲಿಲ್ಲ, ಆದರೀಗ ಸದ್ದಿಲ್ಲದೇ, ಹಸೆಮಣೆ ಏರಲು ಸಿದ್ಧತೆ ನಡೆಸಿದ್ದಾರೆ.

57

ಸಂಸದ ತೇಜಸ್ವಿ ಸೂರ್ಯ ಅವರು ಇದೀಗ ಗಾಯಕಿ, ಭರತನಾಟ್ಯ ಕಲಾವಿದೆಯಾಗಿರುವ ಚೆನ್ನ ಮೂಲದ ಸ್ಕಂದಕುಮಾರ್ ಎನ್ನುವವರನ್ನು ವರಿಸಲು ಸಜ್ಜಾಗಿದ್ದಾರೆ. ಈಗಾಗಲೇ ಎರಡೂ ಕುಟುಂಬಗಳು ಈ ವಿವಾಹಕ್ಕೆ ಒಪ್ಪಿಗೆಯ ಮುದ್ರೆ ಹಾಕಿದ್ದು, ಮಾರ್ಚ್ 4ಕ್ಕೆ ವಿವಾಹ ನಡೆಯಲಿದೆ 

67

ಸಿವಶ್ರೀ ಸ್ಥಂದ ಪ್ರಸಾದ್ ಅವರು ಶಾಸ್ತ್ರೀಯ ಸಂಗೀತ ಗಾಯಕಿ ಹಾಗೂ ಭರತನಾಟ್ಯ ಕಲಾವಿದೆಯಾಗಿದ್ದಾರೆ.  ಶಾಸ್ತ್ರ ವಿಶ್ವವಿದ್ಯಾಲಯದಲ್ಲಿ ಬಯೋ ಎಂಜಿನಿಯರಿಂಗ್ ವಿಷಯದಲ್ಲಿ ಬಿಟೆಕ್ ಪದವಿ ಪಡೆದಿದ್ದಾರೆ. ಇದರೊಂದಿಗೆ ಮದ್ರಾಸ್ ವಿಶ್ವವಿದ್ಯಾಲಯದಿಂದ ಭರತನಾಟ್ಯದಲ್ಲಿ ಎಂಎ ಪದವಿ, ಮದ್ರಾಸ್ ಸಂಸ್ಕೃತ ಕಾಲೇಜಿನಲ್ಲಿ ಸಂಸ್ಕೃತ ಎಂಎ ಪದವಿ ಪಡೆದು ಕೊಂಡಿದ್ದಾರೆ. ಇದರೊಂದಿಗೆ ಸೈಕ್ಲಿಂಗ್, ಟ್ರೆಕ್ಕಿಂಗ್ ವಾಕಥಾನ್‌ಗಳಲ್ಲಿಯೂ ಆಸಕ್ತಿ ಹೊಂದಿದ್ದಾರೆ. ಸಿವಶ್ರೀ ಅವರ ಯೂಟ್ಯೂಬ್ ಚಾನೆಲ್‌ಗೆ ಸುಮಾರು ಎರಡು ಲಕ್ಷಕ್ಕೂ ಅಧಿಕ ಫಾಲೋವರ್ಸ್ ಇದ್ದಾರೆ.

77

ಯೂಟ್ಯೂಬ್‌ನಲ್ಲಿ ಒಂದೂವರೆ ಲಕ್ಷಕ್ಕೂ ಅಧಿಕ ಫಾಲೋವರ್ಸ್‌ಗಳನ್ನು ಹೊಂದಿರುವ ಸಿವಶ್ರೀ ಸ್ಕಂದಕುಮಾರ್ ಕಳೆದ ಜನವರಿಯಲ್ಲಿ ರಾಮನವಮಿ ಸಂದರ್ಭದಲ್ಲಿ ಕನ್ನಡದ ಭಕ್ತಿಗೀತೆಯಾದ ಪೂಜಿಸಲೆಂದೇ ಹೂಗಳ ತಂದೆ ಹಾಡನ್ನು ತಮ್ಮ ಯೂಟ್ಯೂಬ್ ಚಾನಲ್‌ನಲ್ಲಿ ಹಾಡಿದ್ದರು. ಈ ಹಾಡಿಗೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ ಮೆಚ್ಚುಗೆ ವ್ಯಕ್ತಪಡಿಸಿ ತಮ್ಮ ಟ್ವಿಟ್ಟರ್‌ನಲ್ಲಿ ವೀಡಿಯೋ ಲಿಂಕ್ ಶೇರ್ ಮಾಡಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಕನ್ನಡದಲ್ಲಿ ಶಿವಶ್ರೀ ಸ್ಕಂದಪ್ರಸಾದ್ ಅವರ ಈ ನಿರೂಪಣೆಯು ಪ್ರಭು ಶ್ರೀರಾಮನ ಭಕ್ತಿಯ ಮನೋಭಾವವನ್ನು ಸುಂದರವಾಗಿ ಎತ್ತಿ ತೋರಿಸುತ್ತದೆ. ಇಂತಹ ಪ್ರಯತ್ನಗಳು ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವಲ್ಲಿ ಬಹಳ ದೂರ ಸಾಗುತ್ತವೆ ಎಂದು ಪ್ರಧಾನಿ ಬರೆದುಕೊಂಡಿದ್ದರು.

 

About the Author

AK
Anusha Kb
Anusha KB ಸುದ್ದಿಲೋಕದಲ್ಲಿ 13 ವರ್ಷಗಳ ಅನುಭವ, ರಾಜಕೀಯ, ಸಿನಿಮಾ, ದೇಶ, ವಿದೇಶ ಸುದ್ದಿಗಳಲ್ಲಿ ಆಸಕ್ತಿ. ಸುವರ್ಣ ಡಿಜಿಟಲ್‌ನಲ್ಲೀಗ ಸೀನಿಯರ್ ಸಬ್ ಎಡಿಟರ್.
ತೇಜಸ್ವಿ ಸೂರ್ಯ
ಮದುವೆ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved