MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • Bengaluru Urban
  • 11 ವರ್ಷದ ಶಬರೀಶ್‌ನನ್ನ ಬಲಿ ಪಡೆದ BMTC; ಸ್ಕೂಟರ್‌ ಡಿಕ್ಕಿಯಾಗಿ ಬಾಲಕನ ಮೇಲೆ ಹರಿದ ಬಸ್

11 ವರ್ಷದ ಶಬರೀಶ್‌ನನ್ನ ಬಲಿ ಪಡೆದ BMTC; ಸ್ಕೂಟರ್‌ ಡಿಕ್ಕಿಯಾಗಿ ಬಾಲಕನ ಮೇಲೆ ಹರಿದ ಬಸ್

ಬೆಂಗಳೂರಿನ ಕೆ.ಆರ್.ಮಾರ್ಕೆಟ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು 11 ವರ್ಷದ ಬಾಲಕ ಮೃತಪಟ್ಟಿದ್ದಾನೆ. ದ್ವಿಚಕ್ರ ವಾಹನದಲ್ಲಿ ಪೋಷಕರೊಂದಿಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಸ್ಥಳೀಯರು ಚಾಲಕ ಮತ್ತು ನಿರ್ವಾಹಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

1 Min read
Author : Mahmad Rafik
Published : Aug 24 2025, 08:30 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : Asianet News

ಬೆಂಗಳೂರಿನ ಕೆ.ಆರ್.ಮಾರ್ಕೆಟ್ ಬಳಿ ಬಿಎಂಟಿಸಿ ಬಸ್ 11 ವರ್ಷದ ಬಾಲಕನನ್ನು ಬಲಿ ಪಡೆದುಕೊಂಡಿದೆ. ಮೃತ ಬಾಲಕನನ್ನು ಶಬರೀಶ್ ಎಂದು ಗುರುತಿಸಲಾಗಿದೆ. ಅಪಘಾತದ ಬಳಿಕ ಸ್ಥಳೀಯರು ಬಿಎಂಟಿಸಿ ಚಾಲಕ ಮತ್ತು ನಿರ್ವಾಹಕನನ್ನು ಹಿಡಿದು ಪೊಲೀಸರ ವಶಕ್ಕೆ ನೀಡಿದ್ದಾರೆ.

25
Image Credit : Asianet News

ಶಬರೀಶ್ ದ್ವಿಚಕ್ರ ವಾಹನದಲ್ಲಿ ಪೋಷಕರೊಂದಿಗೆ ತೆರಳುತ್ತಿದ್ದನು. ಈ ವೇಳೆ ಸ್ಕೂಟಿ ಮತ್ತು ಬಿಎಂಟಿಸಿ ಬಸ್ KA57 F6456 ನಡುವೆ ಅಪಘಾತ ಸಂಭವಿಸಿದೆ. ಗುರುವಾರವಷ್ಟೇ ಶಾಲೆಗೆ ತೆರಳುತ್ತಿದ್ದ ಮಗುವನ್ನು ಬಿಎಂಟಿಸಿ ಬಸ್ ಬಲಿ ಪಡೆದುಕೊಂಡಿತ್ತು. ಬಿಎಂಟಿಸಿ ಚಾಲಕ & ನಿರ್ವಾಹಕನನ್ನು ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related Articles

Related image1
Namma Metro Yellow Line: ನಮ್ಮ ಮೆಟ್ರೋ ಯೆಲ್ಲೋ ಲೈನ್ ವಿಳಂಬ; BMTC ಭರ್ಜರಿ ಕಲೆಕ್ಷನ್!
Related image2
ದಿನಕ್ಕೊಂದು ಬಲಿ ಪಡೆಯುತ್ತಿರುವ ಬಿಎಂಟಿಸಿ, 10 ವರ್ಷದ ಶಾಲಾ ಬಾಲಕಿಯ ತಲೆ ಮೇಲೆ ಹರಿದ ಬಸ್‌!
35
Image Credit : Asianet News

ಹಲಸೂರು ಗೇಟ್ ಸಂಚಾರಿ ಪೊಲೀಸ್ ಠಾಣೆಯ ಮುಂದೆ ಅಪಾರ ಸಂಖ್ಯೆಯಲ್ಲಿ ಸೇರಿರುವ ಜನರು BMTC ವಿರುದ್ಧ ಆಕ್ರೋಶ ಹೊರ ಹಾಕಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ‌ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೃತ ಶಬರೀಶ್ ತಂದೆ ಒಂದು ವರ್ಷದ ಹಿಂದೆಯೇ ನಿಧನರಾಗಿದ್ದರು. ಈ ಹಿನ್ನೆಲೆ ಶಬರೀಶ್ ಚಿಕ್ಕಪ್ಪನ ಮನೆಯಲ್ಲಿಯೇ ವಾಸವಾಗಿದ್ದನು.

45
Image Credit : Asianet News

ಶಬರೀಶ್ ಚಿಕ್ಕಪ್ಪ ದಿಲೀಪ್ ಕುಮಾರ್ ದೇವಸ್ಥಾನವೊಂದರ ಅರ್ಚಕರಾಗಿದ್ದು, ಜೆಎಂ ಪಾಳ್ಯದ ನಿವಾಸಿಯಾಗಿದ್ದಾರೆ. ಇಂದು ದಿಲೀಪ್ ಕುಟುಂಬ ಸಮೇತ ಕೆ.ಆರ್.ಮಾರ್ಕೆಟ್‌ಗೆ ಆಗಮಿಸಿದ್ದರು. ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ ಬಸ್ ಡಿಕ್ಕಿಯಾಗಿದೆ. ಈ ವೇಳೆ ಸ್ಕೂಟಿಯಿಂದ ಬಲಕ್ಕೆ ಶಬರೀಶ್ ಕೆಳಗೆ ಬಿದ್ದಿದ್ದಾನೆ. ಬಿಎಂಟಿಸಿ ಬಸ್ ನಿಂದ ಒಂದೇ ತಿಂಗಳಲ್ಲಿ ಹಲವು ಅಪಘಾತ ಆಗಿವೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರ ಆಗ್ರಹಿಸಿದ್ದಾರೆ. ಹಲಸೂರು ಗೇಟ್ ಸಂಚಾರಿ ಪೋಲಿಸ್ ಠಾಣೆ ಮುಂಭಾಗ ಸೇರಿರುವ ಜನರು ನ್ಯಾಯ ಬೇಕೆಂದು ಆಗ್ರಹಿಸುತ್ತಿದ್ದಾರೆ.

55
Image Credit : Asianet News

ಪ್ರತ್ಯಕ್ಷದರ್ಶಿ ಹೇಳಿಕೆ

ಮಗು ಅಪ್ಪ - ಅಮ್ಮಾ ಬೈಕ್ ನಲ್ಲಿ ಹೋಗುತ್ತಿದ್ದರು. ಬೈಕ್ ನಿಂದ ಬಿದ್ದ ಮೇಲೆ ಮಗು ಮೇಲೆಯೇ ಬಸ್ ಹತ್ತಿಸಿದ್ದಾರೆ. ನಾವು ಚಾಮರಾಜಪೇಟೆಯಿಂದ ಬರುತ್ತಿದ್ದಾಗ ಈ ಅಪಘಾತ ನೋಡಿದೇವು. ಅಪಘಾತ ಆದ ಮೇಲೆ ಚಾಲಕ‌ ಎಸ್ಕೇಪ್ ಆಗಲು ಪ್ರಯತ್ನಿಸುತ್ತಿದ್ದನು. ಸ್ಥಳೀಯರ ಸಹಾಯದೊಂದಿಗೆ ಚಾಲಕನನ್ನು ಹಿಡಿಯಲಾಯ್ತು ನಂತರ ಪೊಲೀಸರ ವಶಕ್ಕೆ ನೀಡಲಾಯ್ತು. ನಾವು ಮೃತ ಮಗುವಿನ ಸಂಬಂಧಿಯೂ ಅಲ್ಲ. ಮಗುವಿನ ಸಾವಿಗೆ ನ್ಯಾಯ ಬೇಕೆಂದು ಪ್ರತ್ಯಕ್ಷದರ್ಶಿ ಕಾವ್ಯಾ ಹೇಳಿದ್ದಾರೆ.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಬಿಎಂಟಿಸಿ
ಅಪಘಾತ
ಬೆಂಗಳೂರು

Latest Videos
Recommended Stories
Recommended image1
ಬೆಂಗಳೂರಲ್ಲಿ ಅಮೆಜಾನ್ ಬೆನ್ನಲ್ಲೇ, ಆಪಲ್ ಕಚೇರಿ ವಿಸ್ತರಣೆ: ವಾರ್ಷಿಕ ₹108 Cr ಬಾಡಿಗೆ, ದಶಕಕ್ಕೆ 1,333 ಕೋಟಿ ಡೀಲ್!
Recommended image2
ರೈಲ್ವೆ ರಕ್ಷಣೆ ತರಬೇತಿ ಕಲಿಯಲು ಬೆಂಗಳೂರಿನ ಭಾರತೀಯ ರೈಲ್ವೆ ವಿಭಾಗಕ್ಕೆ ಬಂದ ತಾಂಜೇನಿಯಾ ಸಿಬ್ಬಂದಿಗಳು
Recommended image3
ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗದ ಪ್ರಯಾಣಿಕರ ದಟ್ಟಣೆಗೆ ಕೊನೆಗೂ ಮುಕ್ತಿ ಭಾಗ್ಯ, ಶೀಘ್ರವೇ 3 ಹೊಸ ರೈಲು ಸೇರ್ಪಡೆ
Related Stories
Recommended image1
Namma Metro Yellow Line: ನಮ್ಮ ಮೆಟ್ರೋ ಯೆಲ್ಲೋ ಲೈನ್ ವಿಳಂಬ; BMTC ಭರ್ಜರಿ ಕಲೆಕ್ಷನ್!
Recommended image2
ದಿನಕ್ಕೊಂದು ಬಲಿ ಪಡೆಯುತ್ತಿರುವ ಬಿಎಂಟಿಸಿ, 10 ವರ್ಷದ ಶಾಲಾ ಬಾಲಕಿಯ ತಲೆ ಮೇಲೆ ಹರಿದ ಬಸ್‌!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved