MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Bengaluru Urban
  • Photos: ಚಿನ್ನಸ್ವಾಮಿ ಕಾಲ್ತುಳಿತ, ಕೊಹ್ಲಿ ಗೆಲುವಿನ ಕಣ್ಣೀರು ಕಂಡು ಮರುಕಪಟ್ಟವರೇ ಸಮಾಧಿಯಾದರು!

Photos: ಚಿನ್ನಸ್ವಾಮಿ ಕಾಲ್ತುಳಿತ, ಕೊಹ್ಲಿ ಗೆಲುವಿನ ಕಣ್ಣೀರು ಕಂಡು ಮರುಕಪಟ್ಟವರೇ ಸಮಾಧಿಯಾದರು!

ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ತಂಡದ ವಿಜಯೋತ್ಸವದ ಸಂಭ್ರಮದಲ್ಲಿ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ದಾರೆ. ಅಭಿಮಾನಿಗಳ ನೂಕುನುಗ್ಗಲು ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳದ ರಾಜ್ಯ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.

2 Min read
Santosh Naik
Published : Jun 04 2025, 06:23 PM IST
Share this Photo Gallery
  • FB
  • TW
  • Linkdin
  • Whatsapp
115
Image Credit : Asianet News

ಬರೋಬ್ಬರಿ 18 ವರ್ಷಗಳ ನಂತರ ಐಪಿಎಲ್‌ನಲ್ಲಿ ಟ್ರೋಫಿ ಗೆದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ವಿಜಯೋತ್ಸವ ಸಂಭ್ರಮ ಬೆಂಗಳೂರಿನಲ್ಲಿ ದಾರುಣವಾಗಿ ಪರಿಣಮಿಸಿದೆ.

215
Image Credit : Asianet News

ಚಿನ್ನಸ್ವಾಮಿ ಸ್ಟೇಡಿಯಂನ ಬಳಿ ಭಾರೀ ಕಾಲ್ತುಳಿತ ಸಂಭವಿಸಿದ್ದು, ಇಲ್ಲಿಯವರೆಗೂ 11 ಮಂದಿ ಸಾವು ಕಂಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ವೈದೇಹಿ ಆಸ್ಪತ್ರೆಯಲ್ಲಿ 4 ಮಂದಿ ಹಾಗೂ ಬೌರಿಂಗ್‌ ಆಸ್ಪತ್ರೆಯಲ್ಲಿ 7 ಮಂದಿ ಸಾವು ಕಂಡಿದ್ದಾರೆ ಎನ್ನಲಾಗಿದೆ.

Related Articles

Related image1
ಚಿನ್ನಸ್ವಾಮಿ ಕಾಲ್ತುಳಿತ: ಕಬ್ಬನ್‌ ಪಾರ್ಕ್‌, ವಿಧಾನಸೌಧ ಸ್ಟೇಷನ್‌ನಲ್ಲಿ ಮೆಟ್ರೋ ನಿಲ್ಲಲ್ಲ!
Related image2
RCB Victory Parade: ವಿಜಯೋತ್ಸವಕ್ಕೆ ಪರೇಡ್‌ಗೆ ಅನುಮತಿ ನೀಡಿದ ಪೊಲೀಸರು, ಆದರೆ ಸಮಯ, ಸ್ಥಳ? ಇಲ್ಲಿದೆ ಸಂಪೂರ್ಣ ವಿವರ
315
Image Credit : Asianet News

ನಿರೀಕ್ಷೆಗೂ ಮೀರಿ ಅಭಿಮಾನಿಗಳು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್‌ ಟ್ರೋಫಿ ವಿಜೇತ ತಮ್ಮ ಫೇವರಿಟ್‌ ತಂಡದ ಸದಸ್ಯರನ್ನು ನೋಡಲು ಆಗಮಿಸಿದ್ದರು.

415
Image Credit : Asianet News

ಅಹಮದಾಬಾದ್‌ನಲ್ಲಿ ಮಂಗಳವಾರ ನಡೆದ ಐಪಿಎಲ್‌ ಫೈನಲ್‌ ಪಂದ್ಯದಲ್ಲಿ ಆರ್‌ಸಿಬಿ 6 ರನ್‌ಗಳಿಂದ ಕಿಂಗ್ಸ್‌ ಇಲೆವೆನ್‌ ಪಂಜಾಬ್‌ ತಂಡವನ್ನು ಸೋಲಿಸಿ ಮೊಟ್ಟ ಮೊದಲ ಬಾರಿಗೆ ಐಪಿಎಲ್‌ ಟ್ರೋಫಿ ಜಯಿಸಿತ್ತು.

515
Image Credit : Asianet News

ಟ್ರೋಫಿ ಗೆಲ್ಲುತ್ತಿದ್ದಂತೆ ಆರ್‌ಸಿಬಿಯ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿ ಆನಂದ ಭಾಷ್ಪ ಸುರಿಸಿದ್ದರು. ಇದನ್ನು ನೋಡಿ ಅಭಿಮಾನಿಗಳು ಕೂಡ ಕಣ್ಣೀರಾಗಿದ್ದಾರೆ.  ಆದರೆ, ಕೊಹ್ಲಿ ಕಣ್ಣೀರಿಗೆ ಮರುಕಪಟ್ಟವರೇ ಇಂದು ಸಮಾಧಿಯಾಗಿರುವುದು ದುರಂತ.

615
Image Credit : Asianet News

ಅಪಾರ ಪ್ರಮಾಣದ ಅಭಿಮಾನಿಗಳು ಬರುವ ನಿರೀಕ್ಷೆ ಇದ್ದರೂ ರಾಜ್ಯ ಸರ್ಕಾರ ಅದಕ್ಕೆ ಸೂಕ್ತ ಕ್ರಮಗಳನ್ನು ಕೈಗೊಂಡಿರಲಿಲ್ಲ. ಸೂಕ್ತ ಬ್ಯಾರಿಕೇಡ್‌ಗಳನ್ನು ಹಾಕಿ ಸರಿಯಾದ ವ್ಯವಸ್ಥೆ ಮಾಡಿದ್ದರೆ ಈ ಅವಾಂತರ ಆಗುತ್ತಿರಲಿಲ್ಲ.

715
Image Credit : Asianet News

ಚಿಕ್ಕ ಮಕ್ಕಳು, ಯುವಕರೆನ್ನದೆ 11 ಮಂದಿ ಸಾವು ಕಂಡಿದ್ದರೆ, ಅವರ ಕುಟುಂಬದವರ ಆಕ್ರಂದನ ಆಸ್ಪತ್ರೆಯ ಎದುರು ಮುಗಿಲು ಮುಟ್ಟಿದೆ.

815
Image Credit : Asianet News

ಪೊಲೀಸರು ಚಿಕ್ಕ ಚಿಕ್ಕ ಮಕ್ಕಳನ್ನು ಎತ್ತಿಕೊಂಡು ಆಸ್ಪತ್ರೆಗೆ ಸಾಗಿಸುತ್ತಿರುವ ದೃಶ್ಯ ಚಿನ್ನಸ್ವಾಮಿಯಲ್ಲಿ ಸಾಮಾನ್ಯವಾಗಿತ್ತು.

915
Image Credit : Asianet News

ಕಾಲ್ತುಳಿತದಿಂದ ರಸ್ತೆಯಲ್ಲೇ ಕುಸಿದು ಬಿದ್ದು ಪ್ರಜ್ಞಾಹೀನನಾಗಿದ್ದ ಅಭಿಮಾನಿಗೆ ಅಲ್ಲಿದ್ದ ಜನರೇ ಸಿಪಿಆರ್‌ ನೀಡುತ್ತಿದ್ದ ವಿಡಿಯೋ ವೈರಲ್‌ ಆಗಿದೆ.

1015
Image Credit : Asianet News

ಘಟನೆಯಲ್ಲಿ 14 ವರ್ಷದ ಹುಡುಗಿ ದಿವ್ಯಾಂಶಿ ಕೂಡ ಸಾವು ಕಂಡಿದ್ದಾಳೆ.  9ನೇ ತರಗತಿಯಲ್ಲಿ ಓದುತ್ತಿದ್ದ ದಿವ್ಯಾಂಶಿ ತನ್ನ ಚಿಕ್ಕಮ್ಮನ ಜೊತೆ ಸ್ಟೇಡಿಯಂಗೆ ಬಂದಿದ್ದಳು ಎನ್ನಲಾಗಿದೆ.

1115
Image Credit : Screengrab/X

ಇನ್ನು ಆರ್‌ಸಿಬಿ ಅಭಿಮಾನಿಗಳು ಚಿನ್ನಸ್ವಾಮಿ ಸ್ಟೇಡಿಯಂನ ಪ್ರಧಾನ ಗೇಟ್‌ಅನ್ನು ಮುರಿದು ಸ್ಟೇಡಿಯಂನ ಒಳಹೊಕ್ಕುವ ಪ್ರಯತ್ನ ಮಾಡಿದ್ದಾರೆ. ಈ ವೇಳೆ ಪೊಲೀಸರು ಲಾಠಿಚಾರ್ಜ್‌ ಕೂಡ ಮಾಡಿದ್ದಾರೆ.

1215
Image Credit : Asianet News

ಇನ್ನೊಂದೆಡೆ ವಿರೋಧ ಪಕ್ಷಗಳ ನಾಯಕರು ಇಂಥ ಅವ್ಯವಸ್ಥೆ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಇದು ಸರ್ಕಾರವೇ ಮಾಡಿರುವ ಕೊಲೆಗಳು ಎಂದು ದೂಷಿಸಿದ್ದಾರೆ.

1315
Image Credit : Asianet News

ಒಂದೆಡೆ ಅಭಿಮಾನಿಗಳ ಸಾವಿನ ಸಂಖ್ಯೆ ಕ್ಷಣದಿಂದ ಕ್ಷಣಕ್ಕೆ ಏರುತ್ತಿದ್ದರೆ, ಇನ್ನೊಂದೆಡೆ ಸ್ಟೇಡಿಯಂನ ಒಳಗಡೆ ಆರ್‌ಸಿಬಿ ತಂಡದ ಸಂಭ್ರಮ ಮುಂದುವರಿದಿದೆ. ಆದರೆ, ಕಾರ್ಯಕ್ರಮದ ಸಮಯವನ್ನು ಕಡಿಮೆ ಮಾಡಲಾಗಿದೆ.

1415
Image Credit : Asianet News

ಘಟನೆಯಲ್ಲಿ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್‌, ಅಪಾರ ಪ್ರಮಾಣದ ಅಭಿಮಾನಿಗಳು ಸೇರಿದ್ದರು. 5 ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿತ್ತು. ಆದರೆ, ಅಭಿಮಾನಿಗಳನ್ನು ನಿಯಂತ್ರಿಸಲು ಅವರಿಗೆ ಸಾಧ್ಯವಾಗಿಲ್ಲ ಎಂದಿದ್ದಾರೆ.

1515
Image Credit : Asianet News

ಇನ್ನೊಂಡೆ ಸಿಎಂ ಸಿದ್ಧರಾಮಯ್ಯ, ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಬೌರಿಂಗ್‌ ಆಸ್ಪತ್ರೆಗೆ ಆಗಮಿಸಿದ್ದು, ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದಾರೆ.

About the Author

SN
Santosh Naik
ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ
ಆರ್‌ಸಿಬಿ
ಬೆಂಗಳೂರು
ಐಪಿಎಲ್
ವಿರಾಟ್ ಕೊಹ್ಲಿ

Latest Videos
Recommended Stories
Recommended image1
ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
Recommended image2
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್
Recommended image3
ನಾಳೆ ಬೆಂಗಳೂರಿನಲ್ಲಿ ವಿದ್ಯುತ್ ಕಡಿತ: ನಿಮ್ಮ ಏರಿಯಾ ಇದೆಯಾ ಚೆಕ್ ಮಾಡಿ?
Related Stories
Recommended image1
ಚಿನ್ನಸ್ವಾಮಿ ಕಾಲ್ತುಳಿತ: ಕಬ್ಬನ್‌ ಪಾರ್ಕ್‌, ವಿಧಾನಸೌಧ ಸ್ಟೇಷನ್‌ನಲ್ಲಿ ಮೆಟ್ರೋ ನಿಲ್ಲಲ್ಲ!
Recommended image2
RCB Victory Parade: ವಿಜಯೋತ್ಸವಕ್ಕೆ ಪರೇಡ್‌ಗೆ ಅನುಮತಿ ನೀಡಿದ ಪೊಲೀಸರು, ಆದರೆ ಸಮಯ, ಸ್ಥಳ? ಇಲ್ಲಿದೆ ಸಂಪೂರ್ಣ ವಿವರ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved